ರಾಣಾ ಪ್ರತಾಪ್ ವೃತ್ತದ ಹೈಮಾಸ್ಟ್ ಲೈಟ್ ಆನ್ ಮಾಡಿದ ಶಾಸಕ ಮುನವಳ್ಳಿ
ನಗರಸಭೆ ನಿರ್ಲಕ್ಷ್ಯ; ಸಾರ್ವಜನಿಕರ ದೂರು ಹಿನ್ನೆಲೆ
Team Udayavani, Oct 23, 2022, 10:37 PM IST
ಗಂಗಾವತಿ :ನಗರದ ಜೂನಿಯರ್ ಕಾಲೇಜು ಹಾಗೂ ಪ್ರಮುಖ ವೃತ್ತಗಳಲ್ಲಿ ಅಳವಡಿಸಿರುವ ಹೈಮಾಸ್ಟ್ ಲೈಟ್ ಗಳನ್ನು ಪ್ರತಿನಿತ್ಯ ಆನ್ ಮತ್ತು ಆಫ್ ಮಾಡುವಲ್ಲಿ ನಗರಸಭೆಯ ಸಿಬ್ಬಂದಿಗಳ ನಿರ್ಲಕ್ಷ್ಯದ ಪರಿಣಾಮ ರಾತ್ರಿ ವೇಳೆ ಕತ್ತಲು ಆವರಿಸುತ್ತಿತ್ತು . ಈ ಕುರಿತು ಸಾರ್ವಜನಿಕರು ಗಮನಕ್ಕೆ ತಂದಿದ್ದ ಹಿನ್ನೆಲೆ ಸ್ವತಃ ಶಾಸಕ ಪರಣ್ಣ ಮನವಳ್ಳಿ ತಮ್ಮ ಆಪ್ತರೊಂದಿಗೆ ನಗರದ ರಾಯಚೂರು ರಸ್ತೆಯ ರಾಣಾ ಪ್ರತಾಪ್ ಸಿಂಗ್ ವೃತ್ತದಲ್ಲಿ ರವಿವಾರ ಸಂಜೆ ಹೈಮಾಸ್ಟ್ ದೀಪದ ಬಟನ್ ಆನ್ ಮಾಡುವ ಮೂಲಕ ಲೈಟ್ ಹಾಕಿದರು.
ಈ ಸಂದರ್ಭದಲ್ಲಿ ಅವರು ಉದಯವಾಣಿ ಜತೆ ಮಾತನಾಡಿ ಹಲವು ದಿನಗಳಿಂದ ನಗರಸಭೆಯ ಬೀದಿ ದೀಪಗಳನ್ನು ಆನ್ ಆಫ್ ಮಾಡುವ ವಿಭಾಗದ ನೌಕರರು ನಿರ್ಲಕ್ಷ್ಯದ ಪರಿಣಾಮ ಹೈಮಾಸ್ಟ್ ಲೈಟ್ ಗಳನ್ನು ಹಾಕದೆ ನಿರ್ಲಕ್ಷ್ಯ ವಹಿಸಲಾಗಿದೆ ಇದನ್ನು ಗಮನಿಸಿ ಸ್ವತಃ ನಾನೇ ತೆರಳಿ ರಾಣಾಪ್ರತಾಪ್ ಸಿಂಗ್ ವೃತ್ತದ ಹೈಮಾಸ್ಟ್ ದೀಪವನ್ನು ಆನ್ ಮಾಡಿ ನಗರಸಭೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿ ನಗರದ ಪ್ರತಿಯೊಂದು ಬೀದಿ ದೀಪ ಮತ್ತು ಹೈಮಾಸ್ಟ್ ದೀಪಗಳನ್ನು ಸಂಜೆ ಆನ್ ಮಾಡುವುದು ಮತ್ತು ಬೆಳಗಿನ ಜಾವ ಆಫ್ ಮಾಡುವಂತೆ ಸೂಚನೆ ನೀಡಿದ್ದೇನೆ .ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೆಳಕಿನ ಅವಶ್ಯಕತೆ ಇರುತ್ತದೆ ಆದ್ದರಿಂದ ನಗರಸಭೆಯವರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಲು ಸೂಚನೆ ನೀಡಲಾಗಿದೆ ತಪ್ಪಿದ್ದಲ್ಲಿ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪೌರಾಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಉಮೇಶ್ ಸಿಂಗನಾಳ್ ,ಬಿಜೆಪಿ ಮುಖಂಡ ರಾಚಪ್ಪ ಸಿದ್ದಾಪುರ ಸೇರಿದಂತೆ ಸ್ಥಳೀಯ ನಿವಾಸಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ