ಶಾಸಕರೂ ಗ್ರಾಮ ವಾಸ್ತವ್ಯ ಮಾಡಿ: ಅಶೋಕ್‌


Team Udayavani, Feb 20, 2022, 5:55 AM IST

ಶಾಸಕರೂ ಗ್ರಾಮ ವಾಸ್ತವ್ಯ ಮಾಡಿ: ಅಶೋಕ್‌

ಮಂಗಳೂರು: ಕಂದಾಯ ಇಲಾಖೆಯಿಂದ ಮನೆ ಬಾಗಿಲಿಗೆ ಪಿಂಚಣಿ, ಕಂದಾಯ ಕಾಯ್ದೆಗೆ ತಿದ್ದುಪಡಿ, ಮೂರೇ ದಿನಗಳಲ್ಲಿ ಕನ್ವರ್ಷನ್‌ ಮಂಜೂರು, ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆಗೆ ಹೀಗೆ ಅನೇಕ ಸುಧಾರಣೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಗಳಲ್ಲಿ ನಡೆಯುವ ಕಡತ ವಿಲೇವಾರಿ ಅಭಿಯಾನಕ್ಕೆ ಪೂರಕವಾಗಿ ಶಾಸಕರೂ ಒಂದು ವಾರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಾಕಿಕೊಳ್ಳಬೇಕು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ.

ದ.ಕ. ಜಿಲ್ಲೆಯಾದ್ಯಂತ ಹಮ್ಮಿಕೊಂಡಿ ರುವ 10 ದಿನಗಳ ಕಡತ ವಿಲೇವಾರಿ ಅಭಿನಯಾನಕ್ಕೆ ಮಂಗಳೂರಿನ ಜಿ.ಪಂ. ಸಭಾಂಗಣದಲ್ಲಿ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

ಇದೇ ಮಾದರಿಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಡತ ವಿಲೇ ವಾರಿ ಅಭಿಯಾನ ಹಮ್ಮಿಕೊಳ್ಳ ಲಾಗು ವುದು. ಪ್ರತೀ ಜಿಲ್ಲೆಯಲ್ಲೂ ಸ್ವತಃ ನಾನೇ ಚಾಲನೆ ನೀಡಲಿದ್ದೇನೆ ಎಂದರು.

ಅಮಾಯಕರು, ಸರಕಾರಿ ಕಚೇರಿ ಯನ್ನೇ ನೋಡದವರು, ಸಮಸ್ಯೆ ಇತ್ಯರ್ಥಕ್ಕಾಗಿ ಕಚೇರಿಗಳಿಗೆ ಅಲೆ ದಾಡುವವರಿಗೆ ಈ ಅಭಿಯಾನ ಧ್ವನಿ ಯಾಗಬೇಕು. ಸಾಮಾನ್ಯ ಜನತೆಯ ನೋವುಗಳಿಗೆ ಸ್ಪಂದಿಸುವ ಕೆಲಸ ಆಗಬೇಕು. ಅಂಗವಿಕಲರ, ಪಿಂಚಣಿ ದಾರರ ಸಮಸ್ಯೆ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಬೇಕು ಎಂದರು.

ಒತ್ತುವರಿ ವ್ಯವಸಾಯ
ಜಮೀನು ಲೀಸ್‌ಗೆ
ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಸರಕಾರಿ ಜಮೀನು ಒತ್ತುವರಿ ಮಾಡಿ ವ್ಯವಸಾಯ, ತೋಟ ಮಾಡಿಕೊಂಡಿದ್ದರೆ ಅಂತಹ ಜಮೀನುಗಳನ್ನು ಕೃಷಿಕರಿಗೆ 30 ವರ್ಷ ಅವಧಿಗೆ ಲೀಸ್‌ನಲ್ಲಿ ನೀಡುವ ಚಿಂತನೆ ಇದೆ. ಪ್ರಸ್ತುತ ಇಂಥ ಜಮೀನುಗಳ ಬಗ್ಗೆ ಅತಂತ್ರ ಸ್ಥಿತಿ ಇದೆ. ನಿರ್ದಿಷ್ಟ ಮೊತ್ತ ಪಾವತಿಸಿ ಲೀಸ್‌ಗೆ ನೀಡಿದರೆ, ಸರಕಾರಕ್ಕೂ ಆದಾಯ, ರೈತರ ಗೊಂದಲ ಪರಿಹಾರಗೊಳ್ಳುತ್ತದೆ. ಚಿಕ್ಕಮಗಳೂರಿನಲ್ಲಿ 45 ಸಾವಿರ ಎಕರೆ, ಹಾಸನದಲ್ಲಿ 25 ಸಾವಿರ ಎಕರೆ ಇಂತಹ ಜಮೀನು ಇದೆ ಎಂದರು.

ಕರಾವಳಿ ಜಿಲ್ಲೆಯಲ್ಲಿ ಕುಮ್ಕಿ, ಕಾನ, ಬಾಣೆ ಜಮೀನು ಸಮಸ್ಯೆ ಇತ್ಯರ್ಥಕ್ಕೆ ಈಗಾಗಲೇ ಕಂದಾಯ ಸಚಿವರ ನೇತೃತ್ವದಲ್ಲಿ ಸಮಿತಿ ರಚಿಸ ಲಾಗಿದ್ದು ಶೀಘ್ರದಲ್ಲೇ ಕ್ರಮ ಕೈಗೊಳ್ಳ ಲಾಗುವುದು. ಕುಮ್ಕಿ ಅಥವಾ ಗೋಮಾಳ ಜಮೀನನ್ನು ಸಂಘ- ಸಂಸ್ಥೆಗಳಿಗೆ ನೀಡುವ ಯಾವುದೇ ಪ್ರಸ್ತಾವನೆ ಇಲ್ಲ. ಈ ಜಮೀನು ರೈತರಿಗೆ ನೀಡಿ ನ್ಯಾಯ ಒದಗಿಸಬೇಕು ಎಂಬುದು ನನ್ನ ನಿಲುವು ಆಗಿದೆ. ನಾನು ರೈತ ಪರವಾಗಿ ಇದ್ದೇನೆ ಎಂದರು.

ಬಾಕಿ ಅರ್ಜಿ ವಿಲೇವಾರಿ: ಸುನಿಲ್‌
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್‌ ಮಾತನಾಡಿ, ಆಡಳಿತಕ್ಕೆ ವೇಗ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ನೀಡು ವುದು ಮತ್ತು ಮಧ್ಯವರ್ತಿಗಳು, ವಶೀಲಿ ಬಾಜಿ ಇಲ್ಲದೆ ಸರಕಾರಿ ಕಚೇರಿ ಗಳಲ್ಲಿ ಜನಸಾಮಾನ್ಯರ ಕೆಲಸ ಆಗಬೇಕು ಎಂಬುದು ಕಡತ ವಿಲೇವಾರಿ ಅಭಿಯಾನದ ಉದ್ದೇಶ ವಾಗಿದೆ ಎಂದರು.

ಸಾಂಕೇತಿಕವಾಗಿ ಕಡತ ವಿಲೇವಾರಿ ನಡೆಸಿ, ಫ‌ಲಾನುಭವಿಗಳಿಗೆ ವಿವಿಧ ಸೌಲಭ್ಯ ಪತ್ರಗಳನ್ನು ಹಸ್ತಾಂತರಿಸಲಾಯಿತು.

ಶಾಸಕರಾದ ವೇದವ್ಯಾಸ ಕಾಮತ್‌, ಡಾ| ವೈ.ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್‌, ವಿಧಾನಪರಿಷತ್‌ ಸದಸ್ಯ ಪ್ರತಾಪ್‌ಸಿಂಹ ನಾಯಕ್‌, ಮೇಯರ್‌ ಪ್ರೇಮಾನಂದ ಶೆಟ್ಟಿ, ಉಪ ಮೇಯರ್‌ ಸುಮಂಗಲಾ ರಾವ್‌, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ, ಜಿ.ಪಂ. ಸಿಇಒ ಡಾ| ಕುಮಾರ್‌, ಪಾಲಿಕೆ ಆಯುಕ್ತ ಅಕ್ಷಯ ಶ್ರೀಧರ್‌ ಉಪಸ್ಥಿತರಿದ್ದರು.

82,400 ಕಡತಗಳು ಬಾಕಿ
ಸರಕಾರಿ ಕಚೇರಿಗಳಲ್ಲಿ ಬಾಕಿ ಇರುವ ಕಡತಗಳನ್ನು ಹಳೆ ಕಡತ, ದೂರು ಅರ್ಜಿ ಹಾಗೂ ವಿವಿಧ ಸೇವೆಗಳ ಅರ್ಜಿ ಎಂಬುದಾಗಿ 3 ವರ್ಗೀಕರಣ ಮಾಡಲಾಗಿದೆ. 28,728 ಹಳೆ ಕಡತಗಳು, 2,099 ದೂರು ಅರ್ಜಿ, 51,573 ವಿವಿಧ ಸೇವೆಗಳ ಅರ್ಜಿ ಸೇರಿ ಒಟ್ಟು 82,400 ಕಡತಗಳು ವಿಲೇವಾರಿಗೆ ಬಾಕಿ ಇವೆ. 10 ದಿನಗಳ ಅಭಿಯಾನದಲ್ಲಿ ಎಲ್ಲ ಕಡತಗಳನ್ನು ವಿಲೇವಾರಿ ಮಾಡಲಾಗುವುದು. ಫೆ. 28ರ ಬಳಿಕ ಮಾರ್ಚ್‌ನಲ್ಲಿ ಆಯಾ ತಾಲೂಕುಗಳಲ್ಲಿ ಕಂದಾಯ ಮೇಳ ಆಯೋಜನೆ ಮಾಡಿ ಫ‌ಲಾನುಭವಿಗಳಿಗೆ ಹಕ್ಕುಪತ್ರ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಹಸ್ತಾಂತರಿಸಲಾಗುವುದು ಎಂದು ಸಚಿವ ಸುನಿಲ್‌ ಕುಮಾರ್‌ ವಿವರಿಸಿದರು.

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.