ಎಂ.ಒ.4 ಭತ್ತದ ಬಿತ್ತನೆ ಬೀಜ ಕೊರತೆ : ರೈತ ಸಂಪರ್ಕ ಕೇಂದ್ರಕ್ಕೆ ಬಂದು ಬರಿಗೈಲಿ ವಾಪಸ್‌


Team Udayavani, Jun 12, 2020, 11:09 AM IST

ಎಂ.ಒ.4 ಭತ್ತದ ಬಿತ್ತನೆ ಬೀಜ ಕೊರತೆ

ಸಾಂದರ್ಭಿಕ ಚಿತ್ರ

ಕುಂದಾಪುರ: ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಆರಂಭಗೊಂಡಿದೆ. ಆದರೆ ಹೆಚ್ಚು ಫಸಲು ಬರುವ ಹಾಗೂ ಕರಾವಳಿಯ ಮಣ್ಣಿಗೆ ಬಹುವಾಗಿ ಹೊಂದಿಕೆಯಾಗುವ ಎಂ.ಒ. 4 ಭತ್ತದ ಬಿತ್ತನೆ ಬೀಜ ಲಭ್ಯವಾಗುತ್ತಿಲ್ಲ. ಉಡುಪಿ ಜಿಲ್ಲೆಯ 9 ಹಾಗೂ ದ.ಕ. ಜಿಲ್ಲೆಯ 16 ಹೋಬಳಿಗಳಲ್ಲಿರುವ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿಯೂ ಎಂ.ಒ. 4 ಬಿತ್ತನೆ ಬೀಜ ಖಾಲಿಯಾಗಿದೆ.

ಬರಿಗೈಯಲ್ಲಿ ವಾಪಸ್‌
ಕಮಲಶಿಲೆ, ಹಳ್ಳಿಹೊಳೆ ಮೊದಲಾದ ದೂರ-ದೂರದ ರೈತರು ವಂಡ್ಸೆಗೆ ವಾಹನ ಬಾಡಿಗೆ ಮಾಡಿಕೊಂಡು ಬರುತ್ತಿದ್ದು, ಬರಿಗೈಯಲ್ಲಿ ವಾಪಸು ಹೋಗುತ್ತಿದ್ದಾರೆ. ಇದೇ ಪರಿಸ್ಥಿತಿ ಕರಾವಳಿಯ ಎಲ್ಲ ಹೋಬಳಿಗಳಲ್ಲೂ ಇದೆ. ನಗರ ಪ್ರದೇಶ, ಬೇರೆ ಊರುಗಳಲ್ಲಿ ಕೆಲಸ ಮಾಡಿಕೊಂಡಿದ್ದವರು ಲಾಕ್‌ಡೌನ್‌ ಪರಿಣಾಮ ತಮ್ಮ ಊರಿಗೆ ಮರಳಿದ್ದು, ಅಲ್ಲೇ ನೆಲೆಸಿ ಕೃಷಿಯತ್ತ ಆಸಕ್ತರಾಗಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದಿದೆ.

ಹೆಚ್ಚಿನ ಬೇಡಿಕೆ
ಉಡುಪಿಯಲ್ಲಿ ಪ್ರತಿ ವರ್ಷ 1,800 ರಿಂದ 2 ಸಾವಿರ ಕ್ವಿಂಟಾಲ್‌ ವರೆಗೆ ಎಂ.ಒ.4 ಬಿತ್ತನೆ ಬೀಜ ರೈತ ಸಂಪರ್ಕ ಕೇಂದ್ರಗಳಲ್ಲಿ ಖರೀದಿಯಾಗುತ್ತಿತ್ತು; ಈ ಬಾರಿ ಈ ವರೆಗೆ 2,518 ಕ್ವಿಂಟಾಲ್‌ ವಿತರಣೆಯಾಗಿದೆ. ಹಿಂದಿನ ವರ್ಷಗಳಲ್ಲಿ 4,000ದಿಂದ 4,500 ಮಂದಿ ರೈತರಿಗೆ ವಿತರಿಸಲಾಗುತ್ತಿದ್ದರೆ ಈ ಬಾರಿ ಈವರೆಗೆ 5,780 ಮಂದಿ ರೈತರು ಪಡೆದುಕೊಂಡಿದ್ದಾರೆ. ದ.ಕ.ದಲ್ಲಿ ಕಳೆದ ವರ್ಷ ಒಟ್ಟಾರೆ 750 ಕ್ವಿಂಟಾಲ್‌ ವಿತರಣೆಯಾಗಿದ್ದರೆ ಈ ವರ್ಷ ಈವರೆಗೆ 650 ಕ್ವಿಂಟಾಲ್‌ ಬೀಜವನ್ನು 2,500ಕ್ಕೂ ಮಿಕ್ಕಿ ರೈತರು ಪಡೆದುಕೊಂಡಿದ್ದಾರೆ.

12 ಚೀಲ ಕೇಳಿದರೆ ಒಂದು ಚೀಲ ಸಿಕ್ಕಿತು!
ನಮಗೆ 25 ಕೆ.ಜಿ.ಯ 12 ಚೀಲ ಎಂ.ಒ. 4 ಬಿತ್ತನೆ ಬೀಜ ಬೇಕಿತ್ತು. ರೈತ ಸಂಪರ್ಕ ಕೇಂದ್ರಕ್ಕೆ ಬಂದು ಕೇಳಿದರೆ ಖಾಲಿಯಾಗಿದ್ದು, 1 ಚೀಲ ಮಾತ್ರ ಸಿಕ್ಕಿತು. ಇಲ್ಲಿ ಸಬ್ಸಿಡಿ ಸಹಿತ 1 ಚೀಲಕ್ಕೆ 600 ರೂ. ಇದ್ದರೆ, ಹೊರಗಡೆ 1 ಚೀಲಕ್ಕೆ 825 ರೂ. ಕೊಡಬೇಕು. ಉಮಾ, ಜ್ಯೋತಿ ತಳಿಯ ಬೀಜ ಲಭ್ಯವಿದ್ದರೂ ಈ ಭಾಗದಲ್ಲಿ ಮುಂಗಾರು ಹಂಗಾಮಿಗೆ ಹೊಂದಿಕೆಯಾಗುವುದು ಕಷ್ಟ ಎಂದು ಅಸೋಡು ಕೃಷಿಕ ಸುಜಿತ್‌ ಕುಮಾರ್‌ ತಿಳಿಸಿದ್ದಾರೆ.

ಕರ್ನಾಟಕ ಬೀಜ ನಿಗಮ ಪೂರೈಸಿದಷ್ಟನ್ನು ಈಗಾಗಲೇ ವಿತರಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಹೆಚ್ಚಿನ ಬೇಡಿಕೆ ಸಲ್ಲಿಸಲಾಗುವುದು. ರೈತ ಸಂಪರ್ಕ ಕೇಂದ್ರಗಳಲ್ಲಿ ಸುಮಾರು 45 ಕ್ವಿಂಟಾಲ್‌ಗ‌ೂ ಅಧಿಕ ಉಮಾ ಹಾಗೂ ಜ್ಯೋತಿ ಬೀಜ ಲಭ್ಯವಿದೆ. ಈ ತಳಿಗಳನ್ನು ರೈತರು ಬಳಸುವುದೇ ಕಡಿಮೆ. ಬಳಸಿದರೆ ಖಂಡಿತ ಉತ್ತಮ ಫಸಲು ಬರುತ್ತದೆ.
– ಕೆಂಪೇಗೌಡ, ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಉಡುಪಿ

ದ.ಕ. ಜಿಲ್ಲೆಯಲ್ಲಿ ಬಿತ್ತನೆ ಬೀಜ ಕೊರತೆಯಾಗಿಲ್ಲ. ಆದರೆ ಈ ಬಾರಿ ಎಂ.ಒ. 4 ತಳಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಇನ್ನೂ 15 ಕ್ವಿಂಟಾಲ್‌ನಷ್ಟು ಅಗತ್ಯವಿತ್ತು. ಬದಲಿಯಾಗಿ ಜಯ ಹಾಗೂ ಜ್ಯೋತಿ ಬೀಜಗಳು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನಿದೆ.
– ಸೀತಾ, ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ ದ.ಕ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.