ರಾಜ್ಯದ ಮೊದಲ ಕೋವಿಡ್ ಸಂಚಾರಿ ಲಸಿಕಾ ಸಾರಿಗೆ ಬಸ್ ಗೆ ಚಾಲನೆ

ಬೇಡಿಕೆ ಬಂದಲ್ಲಿ ಮತ್ತಷ್ಟು ಬಸ್‌ಗಳ ಸಿದ್ಧಪಡಿಸುವಿಕೆ

Team Udayavani, Jun 16, 2021, 7:05 PM IST

ರಾಜ್ಯದ ಮೊದಲ ಕೋವಿಡ್ ಸಂಚಾರಿ ಲಸಿಕಾ ಸಾರಿಗೆ ಬಸ್ ಗೆ ಚಾಲನೆ

ಕಲಬುರಗಿ: ಗ್ರಾಮೀಣ ಭಾಗದ ಜನರಿಗೆ ಕೋವಿಡ್ ಲಸಿಕೆ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಕೋರಿಕೆ ಮೇರೆಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸಿದ್ಧಪಡಿಸಿದ ರಾಜ್ಯದಲ್ಲಿಯೇ ಪ್ರಪ್ರಥಮ ಕೋವಿಡ್ ಸಂಚಾರಿ ಲಸಿಕಾ ಬಸ್‌ಗಳಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕರಾಗಿರುವ ರಾಜಕುಮಾರ ಪಾಟೀಲ್ ತೇಲ್ಕೂರ ಚಾಲನೆ ನೀಡಿದರು.

ಬುಧವಾರ ಜಿಲ್ಲಾಧಿಕಾರಿ ಆವರಣದಲ್ಲಿ ಹಳ್ಳಿ ಸಂಚರಿಸಿ ಜನರಿಗೆ ಕೊವಿಡ್- 19 ಲಸಿಕೆ ಹಾಕುವ ವೈದ್ಯಕೀಯ ಮಾದರಿಯಲ್ಲಿ ಸಿದ್ದಗೊಂಡ ಸಂಚಾರಿ ಲಸಿಕಾ ಬಸ್ ಗಳೆರಡಕ್ಕೆ ಹಸಿರು ನಿಶಾನೆ ತೋರಿಸಿ ಕೊವಿಡ್ 19 ಲಸಿಕಾ ಬಸ್ ವಾಹನಗಳ ಅಭಿಯಾನಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ವಿಶೇಷವಾಗಿ ಗ್ರಾಮೀಣ ಭಾಗ ಹಾಗೂ ತಾಂಡಾಗಳಲ್ಲಿ ವಾಸಿಸುವ ಜನರಿಗಾಗಿಯೇ ಈ ಬಸ್ ಗಳನ್ನು ಸಿದ್ದಪಡಿಸಲಾಗಿದೆ. ಇದು ರಾಜ್ಯದಲ್ಲಿಯೆ ಪ್ರಥಮ ಮಾದರಿ ಕಾರ್ಯವಾಗಿದೆ. ಸಂಚಾರಿ ವಾಹನವು ಮನೆ ಬಾಗಿಲಿಗೆ ತೆರಳಿ ಲಸಿಕೆ ಹಾಕಲಿದೆ. ಜನರು ಸದುಪಯೋಗ ಪಡೆದು ಕೊರೊನಾ ಹೊಡೆದೊಡಿಸಬೇಕೆಂದರು.

ಜಿಲ್ಲಾಡಳಿತದ ಹಾಗೂ ಅರೋಗ್ಯ ಇಲಾಖೆಯ ಕೋರಿಕೆಯಂತೆ ಈಗಾಗಲೇ 2 ಬಸ್ ಗಳನ್ನು ತಕ್ಷಣ ತಯಾರಿಸಲಾಗಿದೆ. ಇನ್ನು ಅಗತ್ಯ ಬಿದ್ದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರಿ ಲಸಿಕಾ ವಾಹನಗಳನ್ನು ತಯಾರಿಸಲಾಗುವುದು ಎಂದರು.

ಇದನ್ನೂ ಓದಿ :ಒಡಿಶಾದಲ್ಲಿ ಜುಲೈ 1ರವರೆಗೆ ಲಾಕ್ ಡೌನ್ ವಿಸ್ತರಣೆ, ವಾರಾಂತ್ಯದ ಲಾಕ್ ಡೌನ್ ಮುಂದುವರಿಕೆ

ಕೋವಿಡ್ ಸಂಚಾರಿ ಲಸಿಕಾ ವಾಹನವು ಒಟ್ಟು ಮೂರು ವಿಭಾಗಗಳನ್ನು ಹೊಂದಿದ್ದು, ಮೊದಲನೇ ವಿಭಾಗದಲ್ಲಿ ನೋಂದಣಿ ಪ್ರಕ್ರಿಯೆ ನಡೆಯಲ್ಲಿದೆ. ಎರಡನೇ ವಿಭಾಗದಲ್ಲಿ ಲಸಿಕಾಕರಣ ನೀಡಲಾಗುವುದು ಹಾಗೂ ಕೊನೆಯ ವಿಭಾಗದಲ್ಲಿ ಲಸಿಕೆ ಪಡೆದ ನಂತರ ವಿಶ್ರಾಂತಿಗೆ ವ್ಯವಸ್ಥೆ ಮಾಡಿದೆ. ಕುಡಿಯುವ ನೀರು ಸೇರಿದಂತೆ ಇತರ ವ್ಯವಸ್ಥೆ ಬಸ್ ನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ರಾಜಕುನಾರ ಪಾಟೀಲ ತೆಲ್ಕೂರ ಬಸ್‌ ವಿನ್ಯಾಸದ ಕುರಿತು ವಿವರಿಸಿದರು.

ಲಸಿಕೆ ಭಯ ಹಾಗೂ ಲಸಿಕೆ ಹಾಕುವ ಕೇಂದ್ರ ದೂರ ಇರುವ ಕಾರಣದಿಂದ ಹೆಚ್ಚಿನ ಜನರು ಲಸಿಕೆ ಹಾಕಿಕೊಳ್ಳಲು ಹೆಚ್ಚಿನ ಆಸಕ್ತಿ ತೋರಿರಲಿಲ್ಲ. ಆದರೆ ಈಗ ಜಾಗೃತಿ ಯಾಗಿದ್ದರಿಂದ ಜನರು ನಿರೀಕ್ಷೆ ಮೀರಿ ಲಸಿಕೆ ಆಗಮಿಸುತ್ತಿದ್ದು, ಗ್ರಾಮೀಣ ಭಾಗದ ಜನರಿಗೆ ಇದು ಹೆಚ್ಚಿನ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ವಿ.ವಿ.‌ಜೋತ್ಸ್ನಾ ಈ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಎಂ.ವೈ ಪಾಟೀಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಕೂರ್ಮಾರಾವ್, ಮುಖ್ಯ ಸಂಚಾರ ವ್ಯವಸ್ಥಾಪಕ ಡಿ. ಕೊಟ್ರಪ್ಪ, ಮುಖ್ಯ ತಾಂತ್ರಿಕ ಶಿಲ್ಪಿ ಗಜೇಂದ್ರಕುಮಾರ, ವಿಭಾಗೀಯ ನಿಯಂತ್ರಣಾಧಿಕಾರಿ ಸಂತೋಷ ಕುಮಾರ್, ವಿಭಾಗೀಯ ತಾಂತ್ರಿಕ ಶಿಲ್ಪಿ ನಾಗರಾಜ ಹಾಗೂ ಈರಣ್ಣ ದುಧನಿ ಮತ್ತಿತರ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.