ಮೋದಿ, ಶಾ ಅವರಿಂದಲೇ ಆಪರೇಷನ್ ಕಮಲ
ಮೋದಿ, ಶಾ, ಆಪರೇಷನ್ ಬಿಜೆಪಿ, Modi, Shah, Operation BJP
Team Udayavani, Jul 4, 2019, 3:09 AM IST
ಮೈಸೂರು: ಶಾಸಕ ಆನಂದಸಿಂಗ್ ಹೊರತುಪಡಿಸಿ ಬೇರ್ಯಾರು ರಾಜೀನಾಮೆ ನೀಡಿಲ್ಲ. ಸದ್ಯಕ್ಕೆ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ಕರೆಯುವ ಸಂದರ್ಭ, ವಾತಾವರಣ ನಿರ್ಮಾಣವಾಗಿಲ್ಲ. ರಾಜೀನಾಮೆ ಕೊಟ್ಟಿರುವ ಶಾಸಕ ಆನಂದಸಿಂಗ್ ಜತೆ ನಾನು ಮಾತನಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯನಗರ ಕ್ಷೇತ್ರದ ಶಾಸಕ ಆನಂದಸಿಂಗ್ ಸಚಿವ ಸ್ಥಾನದ ವಿಚಾರಕ್ಕೆ ರಾಜೀನಾಮೆ ಕೊಟ್ಟಿಲ್ಲ. ಶಾಸಕ ಆನಂದ ಸಿಂಗ್ ರಾಜೀನಾಮೆ ಹಿಂದೆ ಬೇರೆಯದ್ದೇ ಕಾರಣವಿದೆ. ಜಿಂದಾಲ್ ಕಂಪನಿಗೆ ಭೂಮಿ ನೀಡುವುದನ್ನು ವಿರೋಧಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಕೊಟ್ಟ ನಂತರ ಆನಂದಸಿಂಗ್ ತಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ, ಅವರೊಂದಿಗೆ ನಾನು ಮಾತನಾಡುತ್ತೇನೆ ಎಂದರು.
ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಟ್ಟಿಲ್ಲ. ಮಾಧ್ಯಮಗಳಲ್ಲಿ ಬಂದಿರುವುದು ಸುಳ್ಳೆಂದು ಸ್ಪೀಕರ್ ರಮೇಶ್ಕುಮಾರ್ ಅವರೇ ತಮ್ಮ ಕಚೇರಿಯಲ್ಲಿ ಪರಿಶೀಲಿಸಿ ಸ್ಪಷ್ಟಪಡಿಸಿದ್ದಾರೆ. ರಮೇಶ್ ಜಾರಕಿಹೊಳಿ ತಮ್ಮ ಲೆಟರ್ ಹೆಡ್ನಲ್ಲಿ ರಾಜೀನಾಮೆ ಬರೆದು ಸಾಮಾಜಿಕ ಜಾಲ ತಾಣದಲ್ಲಿ ಹರಿಬಿಟ್ಟರೆ ಅದನ್ನು ರಾಜೀನಾಮೆ ಎನ್ನುವುದಿಲ್ಲ. ರಾಜೀನಾಮೆ ಕೊಡಲು ರೀತಿ ನೀತಿ ಇದೆ ಎಂದು ಹೇಳಿದರು.
ಜಿಟಿಡಿಗೆ ಟಾಂಗ್: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಬಿಜೆಪಿ ನಾಯಕರು ಆಪರೇಷನ್ ಕಮಲ ಮಾಡುತ್ತಿಲ್ಲ ಎಂಬ ಹೇಳಿಕೆ ನೀಡಿರುವುದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಆತನಿಗೆ ಆ ರೀತಿಯ ಮಾಹಿತಿ ಇರಬಹುದು. ಆದರೆ, ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿದ್ದಾರೆ. ಸ್ವತಃ ನರೇಂದ್ರ ಮೋದಿ, ಅಮಿತ್ ಶಾ ಅವರೇ ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂದು ಮತ್ತೂಮ್ಮೆ ಆರೋಪಿಸುವ ಮೂಲಕ ಸಚಿವ ಜಿಟಿಡಿಗೆ ಟಾಂಗ್ ಕೊಟ್ಟರು.
ವರುಣಾ ಕ್ಷೇತ್ರದ ಸಭೆ: ರಾಜ್ಯರಾಜಕೀಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಮಧ್ಯೆ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA