Qatar: ಯೋಧರ ಬಿಡುಗಡೆಗೆ ಕತಾರ್ಗೆ ಮೋದಿ ಧನ್ಯವಾದ
ಭಾರತ-ಕತಾರ್ ದ್ವಿಪಕ್ಷೀಯ ಮಾತುಕತೆ: ಉಭಯ ರಾಷ್ಟ್ರಗಳ ಬಾಂಧವ್ಯಕ್ಕೆ ಹೊಸ ಚೈತನ್ಯ: ಮೋದಿ
Team Udayavani, Feb 16, 2024, 12:53 AM IST
ದೋಹಾ: ಯುಎಇ ಪ್ರವಾಸದ ಬಳಿಕ ಕತಾರ್ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಗುರುವಾರ ಕತಾರ್ ದೊರೆ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಕತಾರ್ ಮತ್ತು ಭಾರತದ ನಡುವಿನ ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಇಂಧನ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಬಾಂಧವ್ಯ ಮತ್ತಷ್ಟು ವೃದ್ಧಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಿರುವುದಾಗಿ ಹೇಳಿದ್ದಾರೆ.
ಕತಾರ್ನಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ 8 ಯೋಧರನ್ನು ಬಿಡುಗಡೆಗೊಳಿಸಿದ ಬಳಿಕ ಆ ರಾಷ್ಟ್ರಕ್ಕೆ ಪ್ರಧಾನಿ ಮೋದಿ ಅವರ ಮೊದಲನೇ ಭೇಟಿ ಇದಾಗಿದ್ದು, ಯೋಧರ ಬಿಡುಗಡೆ ಬಗ್ಗೆ ಪ್ರಧಾನಿ ಸಂತಸ ವ್ಯಕ್ತಪಡಿಸಿ ತಮೀಮ್ ಅವರಿಗೆ ಭಾರತದ ಪರವಾಗಿ ಧನ್ಯವಾದಗಳನ್ನೂ ಅರ್ಪಿಸಿದ್ದಾರೆ. ಅಲ್ಲದೇ, ಕತಾರ್ನಲ್ಲಿರುವ ಭಾರತೀಯರ ಕ್ಷೇಮಾಭಿವೃದ್ಧಿಗಾಗಿ ಅಲ್ಲಿನ ಸರಕಾರ ವಹಿಸುತ್ತಿರುವ ಕಾಳಜಿಯನ್ನೂ ಪ್ರಶಂಸಿಸಿದ್ದಾರೆ.
ಇನ್ನು ಭೇಟಿ ಪೂರ್ಣಗೊಂಡ ಬಳಿಕ ಈ ಕುರಿತು ಪಿಎಂ ಟ್ವೀಟ್ ಮಾಡಿ, ” ಹಮೀಮ್ ಅವರೊಂದಿಗೆ ಅದ್ಭುತವಾದ ಸಭೆ ನಡೆಸಿ, ಉಭಯ ರಾಷ್ಟ್ರಗಳು ಜಗತ್ತಿಗೆ ಉತ್ತಮವಾದ ಕೊಡುಗೆಗಳನ್ನು ನೀಡುವ ನಿಟ್ಟಿನಲ್ಲಿ ಹಲವು ವಿಚಾರಗಳನ್ನು ಚರ್ಚಿಸಿದೆವು. ಭಾರತ ಮತ್ತು ಕತಾರ್ ನಡುವಿನ ಬಾಂಧವ್ಯಕ್ಕೆ ಈ ಭೇಟಿ ಹೊಸ ಚೈತನ್ಯ ಮೂಡಿಸಿದೆ’ ಎಂದಿದ್ದಾರೆ.
ಯುಎಇ ದೇಗುಲಕ್ಕೆ ಅನಿವಾಸಿಗಳ ಶ್ರಮದಾನ
ಯುಇಎಯಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ ಹಿಂದೂ ದೇವಾಲಯಕ್ಕೆ ಬ್ರಿಟನ್, ಅಮೆರಿಕ, ಆಸ್ಟ್ರೇಲಿಯಾ ಸೇರಿದಂತೆ ವಿಶ್ವಾದ್ಯಂತ ಇರುವಂಥ ಅನೇಕ ಅನಿವಾಸಿ ಭಾರತೀಯರು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದ್ದಾರೆ. ಆಸ್ಟ್ರೇಲಿಯಾದ ಸಿಡ್ನಿ ನಿವಾಸಿ, ಗರ್ಭಿಣಿ ಟೆಕಿ ಶೀನಾ ಪಟೇಲ್ ದೇಗುಲ ನಿರ್ಮಾಣದ ವಿಚಾರ ತಿಳಿದು 4 ವಾರ ಸೇವೆ ಸಲ್ಲಿಸಲೆಂದು ಯುಎಇಗೆ ಬಂದವರು ಇಲ್ಲಿಯೇ ಮಗುವಿಗೆ ಜನ್ಮ ನೀಡಿ, ದೇಗುಲ ಉದ್ಘಾಟನೆ ಕಣ್ತುಂಬಿಕೊಂಡಿದ್ದಾರೆ. ಶಿಕ್ಷಕರಾದ ಉಮೇಶ್ ರಾಜ್ ಬ್ರಿಟನ್ನಿಂದ ಮತ್ತು ಅಮೆರಿಕದಿಂದ ಭಾರತೀಯ ದಂಪತಿ ಗಳು ಸೇವೆಗೆಂದು ಬಂದವರು ಅಲ್ಲೇ ನೆಲೆಸಿರುವುದಾಗಿ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!