ಮಣಿಪುರಕ್ಕೆ ದಿಲ್ಲಿಯನ್ನು ತಂದಿದ್ದೇನೆ; ಇಂಫಾಲದಲ್ಲಿ ಹಲವು ಯೋಜನೆಗಳಿಗೆ ಪ್ರಧಾನಿ ಶಿಲಾನ್ಯಾಸ


Team Udayavani, Jan 5, 2022, 6:20 AM IST

ಮಣಿಪುರಕ್ಕೆ ದಿಲ್ಲಿಯನ್ನು ತಂದಿದ್ದೇನೆ; ಇಂಫಾಲದಲ್ಲಿ ಹಲವು ಯೋಜನೆಗಳಿಗೆ ಪ್ರಧಾನಿ ಶಿಲಾನ್ಯಾಸ

ಪ್ರಧಾನಿ ಮೋದಿ ಇಂಫಾಲದಲ್ಲಿ ಕಲಾವಿದರೊಬ್ಬರ ಬಳಿ ಇದ್ದ ಸಾಂಪ್ರದಾಯಿಕ ವಾದ್ಯ ನುಡಿಸಿದರು.

ಇಂಫಾಲ/ಲಕ್ನೋ: “ನಾನು ಪ್ರಧಾನಿಯಾದ ಬಳಿಕ ಈಶಾನ್ಯ ರಾಜ್ಯಕ್ಕೆ ಮತ್ತು ಮಣಿಪುರದ ಜನರ ಮನೆ ಬಾಗಿಲಿಗೆ ಹೊಸದಿಲ್ಲಿಯನ್ನು ಮತ್ತು ಭಾರತ ಸರಕಾರವನ್ನೇ ತಂದಿದ್ದೇನೆ’.

– ಹೀಗೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶೀಘ್ರದಲ್ಲಿಯೇ ವಿಧಾನಸಭೆ ಚುನಾವಣೆ ನಡೆಯಲಿರುವ ಮಣಿಪುರ ರಾಜಧಾನಿ ಇಂಫಾಲ್‌ನಲ್ಲಿ ಮಂಗಳವಾರ 1,850 ಕೋಟಿ ರೂ. ಮೌಲ್ಯದ 13 ಯೋಜನೆಗಳ ಉದ್ಘಾಟನೆ ಮತ್ತು 2,950 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಮಣಿಪುರದಲ್ಲಿ ಈ ಹಿಂದೆ ಆಡಳಿತ ನಡೆಸಿದ್ದ ಸರಕಾರಗಳು ಯಾವತ್ತೂ ಆರ್ಥಿಕ ದಿಗ್ಬಂಧನಕ್ಕೆ ಕಾರಣಗಳಾಗಿದ್ದವು. ಜತೆಗೆ ಹೊಸದಿಲ್ಲಿಯಲ್ಲಿದ್ದ ಸರಕಾರಗಳೂ ರಾಜ್ಯವನ್ನು ನಿರ್ಲಕ್ಷಿಸಿದ್ದವು ಎಂದರು. ಸದ್ಯ ರಾಜ್ಯದಲ್ಲಿ ಹಿಂಸೆ ಸೇರಿದಂತೆ ಅಹಿತಕರ ಘಟನೆಗಳು ನಡೆಯುವುದಿಲ್ಲ. ಇಲ್ಲಿ ನಾವು ಶಾಂತಿ ಮತ್ತು ಅಭಿವೃದ್ಧಿಯ ವಾತಾವರಣ ನಿರ್ಮಾಣ ಮಾಡಿದ್ದೇವೆ ಎಂದರು ಪ್ರಧಾನಿ.

ಇದನ್ನೂ ಓದಿ:ಕೋವಿಡ್ ಹೆಚ್ಚಳ : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ, ಬೆಂಗಳೂರಿನಲ್ಲಿ 2 ವಾರ ಶಾಲೆ ಬಂದ್

ಕನಸಿನಲ್ಲಿ ಕೃಷ್ಣ ಬರುತ್ತಿದ್ದಾನೆ..: “ಪ್ರತೀ ದಿನ ನನಗೆ ಕನಸಿನಲ್ಲಿ ಶ್ರೀಕೃಷ್ಣ ಬರುತ್ತಿದ್ದಾನೆ. ಮುಂದಿನ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವೇ ಅಧಿಕಾರಕ್ಕೆ ಏರಲಿದೆ ಎಂದು ಹೇಳುತ್ತಿದ್ದಾನೆ’ ಹೀಗೆಂದು ಮಾಜಿ ಮುಖ್ಯಮಂತ್ರಿ ಅಖೀಲೇಶ್‌ ಯಾದವ್‌ ಹೇಳಿದ್ದಾರೆ. ಲಕ್ನೋದಲ್ಲಿ ಮಾತನಾಡಿದ ಅವರು, ಶಾಸಕಿ ಮಾಧುರಿ ವರ್ಮಾ ಅವರು ಬಿಜೆಪಿ ಸೇರಿದ್ದಕ್ಕೆ ವ್ಯಂಗ್ಯವಾಗಿ ಅವರು ಈ ಮಾತುಗಳನ್ನಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ತಮ್ಮ ಪಕ್ಷ ಗೆದ್ದರೆ ಉತ್ತರ ಪ್ರದೇಶದಲ್ಲಿ ರಾಮ ರಾಜ್ಯ ಸ್ಥಾಪನೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ನಾನು ಹೇಳಿದ್ದೇನಾಯಿತು?
ರಾಜ್ಯದ ಕ್ರೀಡಾಪುಟಗಳ ಜತೆ ಮಾತುಕತೆ ವೇಳೆ ಪ್ರಧಾನಿ ಮೋದಿ ಕ್ರೀಡಾಪಟು ಎಸ್‌.ಮೀರಾ ಬಾಯಿ ಚಾನು ಜತೆಗೆ “ನಾನು ಹೇಳಿದ್ದ ಕೆಲಸ ಏನಾಯಿತು’ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಅವರು “ಅದು ಪ್ರಗತಿಯಲ್ಲಿದೆ’ ಎಂದು ಉತ್ತರಿಸಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾಳುಗಳನ್ನು ದಿಲ್ಲಿಯಲ್ಲಿ ಭೇಟಿಯಾಗಿದ್ದ ಪ್ರಧಾನಿ, ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮನವೊಲಿಸಬೇಕು ಎಂದಿದ್ದರು. ಆ ಬಗ್ಗೆ ಪ್ರಧಾನಿ, ಚಾನು ಅವರಲ್ಲಿ ಆತ್ಮೀಯವಾಗಿ ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.