ಸಮನ್ವಯತೆ-ಸಂವರ್ಧನೆ; ಪಂಚ ಭಾಷಾ ಅಕಾಡೆಮಿ ಅಧ್ಯಕ್ಷರ ಸಂಕಲ್ಪ


Team Udayavani, Oct 23, 2019, 3:07 AM IST

samanvayate

ಮಂಗಳೂರು: ಪ್ರಾದೇಶಿಕ ಭಾಷೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಲೋಕದ ಉನ್ನತಿಗಾಗಿ ಕೊಡಗನ್ನು ಒಳಗೊಂಡಂತೆ ಕರಾವಳಿ ಭಾಗದ ಪಂಚಭಾಷಾ ಅಕಾಡೆಮಿಗಳು ಪರಸ್ಪರ ಸಮನ್ವಯದಿಂದ ಒಗ್ಗೂಡಿ ಕೆಲಸ ಮಾಡುವ ಮೂಲಕ ಭಾಷಾ ಸಾಮರಸ್ಯಕ್ಕೆ ಮಾದರಿಯಾಗುವ ಆಶಯ ವ್ಯಕ್ತಪಡಿಸಿವೆ.

ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ ಹಾಗೂ ಕೊಡವ ಸಾಹಿತ್ಯ ಅಕಾಡೆಮಿಗಳ ನೂತನ ಅಧ್ಯಕ್ಷರೊಂದಿಗೆ ಮಂಗಳವಾರ “ಉದಯವಾಣಿ’ಯ ಮಂಗಳೂರು ಕಚೇರಿಯಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ತುಳು ಸಾಹಿತ್ಯ ಅಕಾಡೆಮಿಯ ದಯಾನಂದ ಕತ್ತಲಸಾರ್‌, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ| ಜಗದೀಶ್‌ ಪೈ, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ, ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಹಾಗೂ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಪಾರ್ವತಿ ಅಪ್ಪಯ್ಯ ಅವರು ತಮ್ಮ ಕಾರ್ಯ ಯೋಚನೆ-ಯೋಜನೆಗಳ ಕುರಿತು ಸುದೀರ್ಘ‌ ವಿಚಾರ ವಿನಿಮಯ ಮಾಡಿದರು.

ತುಳು ರಾಜ್ಯ ಭಾಷೆಯಾಗಲಿ
ತುಳು ಭಾಷೆಗೆ ಮೊದಲು ರಾಜ್ಯದ ಅಧಿಕೃತ ಭಾಷೆಯ ಮಾನ್ಯತೆ ಸಿಗುವ ನಿಟ್ಟಿನಲ್ಲಿ ಡಾ|ಡಿ.ವೀರೇಂದ್ರ ಹೆಗ್ಗಡೆ ಸೇರಿದಂತೆ ಪ್ರಮುಖರ ನೇತೃತ್ವದಲ್ಲಿ, ಸಂಸದರು-ಶಾಸಕರ ಸಹಕಾರದೊಂದಿಗೆ ಒಟ್ಟು ಕಾರ್ಯಯೋಜನೆ ರೂಪಿಸಲಾಗುವುದು. ವಿಶ್ವಮಟ್ಟದ ತುಳು ಸಮ್ಮೇಳನ, ಮಕ್ಕಳ ತುಳು ಸಮ್ಮೇಳನ, ಶಾಲಾ ಮಕ್ಕಳಿಗೆ ತುಳುನಾಡಿನ ಆಟೋಟಗಳನ್ನು ಪರಿಚಯಿಸುವ ಕ್ರೀಡಾಕೂಟ, ತುಳು ಪಠ್ಯವನ್ನು ದ್ವಿತೀಯ ಪಿಯುಸಿವರೆಗೆ ವಿಸ್ತರಿಸುವ ಕಾರ್ಯಕ್ರಮ ಆಯೋಜಿಸಲಾಗುವುದು.
-ದಯಾನಂದ ಕತ್ತಲಸಾರ್‌, ಅಧ್ಯಕ್ಷರು, ತುಳು ಅಕಾಡೆಮಿ

ಕೊಂಕಣಿ ಭವನಕ್ಕೆ ಯತ್ನ
ಕೊಂಕಣಿ ಮಾತನಾಡುವ ಎಲ್ಲ 42 ಸಮುದಾಯಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೊಂಕಣಿ ಭಾಷೆ ಮತ್ತು ಸಂಸ್ಕೃತಿಯ ಉಳಿವು ಮತ್ತು ಬೆಳವಣಿಗೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯಗತ ಮಾಡಲಾಗುವುದು. ಕೊಂಕಣಿ ಭವನ ನಿರ್ಮಾಣಕ್ಕೂ ಪ್ರಯತ್ನಿಸಲಾಗುವುದು.
-ಡಾ.ಜಗದೀಶ್‌ ಪೈ, ಅಧ್ಯಕ್ಷರು, ಕೊಂಕಣಿ ಅಕಾಡೆಮಿ

ಪಂಚಭಾಷಾ ಸಮ್ಮೇಳನ
ಬ್ಯಾರಿ ಕಲೆ, ಸಾಹಿತ್ಯ, ಸಂಸ್ಕೃತಿಗೆ ಅಮೂಲ್ಯ ಸೇವೆ ಸಲ್ಲಿಸಿದ ಕಲಾವಿದರಿಗೆ ಮಾಸಾಶನ, ಬ್ಯಾರಿ, ತುಳು, ಕೊಂಕಣಿ, ಅರೆ ಭಾಷೆ ಹಾಗೂ ಕೊಡವ ಭಾಷಾ ಅಕಾಡೆಮಿಗಳನ್ನು ಒಟ್ಟು ಸೇರಿಸಿ ಪಂಚಭಾಷಾ ಸಮ್ಮೇಳನ ಆಯೋಜಿಸುವ ಚಿಂತನೆಯಿದೆ. ಬ್ಯಾರಿ ಸಾಹಿತ್ಯ ಅಕಾಡೆಮಿಯು ಬ್ಯಾರಿ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಯ ಸೇವೆಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿದ್ದು, ಇದಕ್ಕೆ ಜಾತಿ, ಧರ್ಮದ ನೆರಳು ಬೀಳಬಾರದು.
-ರಹೀಂ ಉಚ್ಚಿಲ, ಅಧ್ಯಕ್ಷರು, ಬ್ಯಾರಿ ಅಕಾಡೆಮಿ

ಅರೆಭಾಷಾ ಮ್ಯೂಸಿಯಂ
ಅರೆಭಾಷಾ ಸಂಸ್ಕೃತಿ, ಸಾಧನೆಗಳನ್ನು ಸಮಾಜಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಮ್ಯೂಸಿಯಂ ನಿರ್ಮಿಸುವ ಉದ್ದೇಶವಿದೆ. ಅದರೊಂದಿಗೆ ಅರೆಭಾಷೆಯಲ್ಲಿ ಉತ್ತಮ ಪ್ರಾದೇಶಿಕ ಚಲನಚಿತ್ರ ಮತ್ತು ರಂಗ ಪ್ರಯೋಗ ಚಟುವಟಿಕೆಯ ದೂರದೃಷ್ಟಿ ಹೊಂದಲಾಗಿದೆ.
-ಲಕ್ಷ್ಮೀನಾರಾಯಣ ಕಜೆಗದ್ದೆ, ಅಧ್ಯಕ್ಷರು, ಅರೆಭಾಷೆ ಅಕಾಡೆಮಿ

ಕೊಡವ ಭಾಷಿಕರ ವಿಶ್ವಮೇಳ
ಕೊಡವ ಭಾಷಾ ಸಂಸ್ಕೃತಿಗೆ ಸಂಬಂಧಿಸಿ ಆಚಾರ-ವಿಚಾರ, ಪದ್ಧತಿ, ಪರಂಪರೆಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಜಗತ್ತಿನಾದ್ಯಂತ ಇರುವ ಕೊಡವ ಭಾಷಿಕರನ್ನು ಒಂದೆಡೆ ಸೇರಿಸಿ ವಿಶ್ವಮೇಳ ನಡೆಸಲಾಗುವುದು. ಎಲ್ಲ ಕೊಡವ ಭಾಷಿಕರನ್ನು ಸೇರಿಸಿ ಸಂಸತ್‌ ಆಯೋಜನೆಯ ಯೋಚನೆಯಿದೆ. ತುಳುವಿನಂತೆ ಕೊಡವ ಭಾಷೆಯೂ 8ನೇ ಪರಿಚ್ಛೇದಕ್ಕೆ ಸೇರಬೇಕಿದೆ.
-ಡಾ.ಪಾರ್ವತಿ ಅಪ್ಪಯ್ಯ, ಅಧ್ಯಕ್ಷರು, ಕೊಡವ ಅಕಾಡೆಮಿ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.