ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೋಮವಾರ ಮಳೆಗಾಲದ ಅನುಭವ


Team Udayavani, Jun 2, 2020, 5:25 AM IST

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೋಮವಾರ ಮಳೆಗಾಲದ ಅನುಭವ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಮಳೆ ಸುರಿದಿದ್ದು, ಮಳೆಗಾಲ ಆರಂಭಕ್ಕೆ ಮುನ್ನುಡಿ ಬರೆದಿದೆ. ಆ ಮೂಲಕ, ವಾಡಿಕೆಯಂತೆ ಜೂ.1ರಂದೇ ಮುಂಗಾರು ಕೇರಳ ತೀರವನ್ನು ಪ್ರವೇಶಿಸುವುದರೊಂದಿಗೆ ಕರಾವಳಿಯಲ್ಲಿಯೂ ಮಳೆಗಾಲ ಪ್ರಾರಂಭದ ಮುನ್ಸೂಚನೆ ಕಾಣಿಸುತ್ತಿದೆ.

ಮಂಗಳೂರು ಸಹಿತ ಜಿಲ್ಲೆಯಾದ್ಯಂತ ಸೋಮವಾರ ನಸುಕಿನ ವೇಳೆಯಿಂದಲೇ ಜಿಟಿಜಿಟಿ ಮಳೆ ಸುರಿದಿದೆ. ಒಂದೆಡೆ ಮೋಡ ಕವಿದ ವಾತಾವರಣ; ಇನ್ನೊಂದೆಡೆ ತುಂತುರು ಮಳೆಯೊಂದಿಗೆ ಮಳೆಗಾಲದ ವಾತಾವರಣ ಕಂಡುಬಂದಿತ್ತು.

ಬೆಳಗ್ಗೆಯಿಂದಲೇ ಸುರಿದ ಮಳೆ ಯಿಂದಾಗಿ ದ್ವಿಚಕ್ರ ವಾಹನ ಸವಾರರಿಗೆ ಸ್ವಲ್ಪ ಮಟ್ಟಿಗೆ ಕಿರಿಕಿರಿಯುಂಟು ಮಾಡಿತ್ತು. ಕೆಲವೆಡೆ ರಸ್ತೆಯಲ್ಲೇ ನೀರು ನಿಂತು ವಾಹನ ಸವಾರರು ಪ್ರಯಾಸಪಡುವಂತಾಯಿತು. ಕೂಳೂರು, ನಂತೂರು, ಕಂಕನಾಡಿ, ಪಡೀಲು ಮುಂತಾದೆಡೆ ರಸ್ತೆಯಲ್ಲಿ ನೀರು ನಿಂತಿದ್ದುದು ಕಂಡು ಬಂತು.

ಇನ್ನು ಕೆಲವು ಮುಖ್ಯ ರಸ್ತೆಗಳಲ್ಲಿ ದುರಸ್ತಿ ಕೆಲಸ ನಡೆಯುತ್ತಿರುವುದರಿಂದ ಸಮಸ್ಯೆ ಉಂಟಾಯಿತು. ನಂತೂರು ಸಿಗ್ನಲ್‌ ಬಳಿ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ನಂತೂರಿನಿಂದ ಕುಲಶೇಖರ ಕಡೆಗೆ ತೆರಳುವ ಮತ್ತು ಕುಲಶೇಖರ, ಪಡೀಲು ಕಡೆಯಿಂದ ಬರುವ ವಾಹನಗಳಿಗೆ ಸಿಗ್ನಲ್‌ ಬಳಿ ಏಕಮುಖ ಸಂಚಾರದ ವ್ಯವಸ್ಥೆ ಮಾಡಿಕೊಡಲಾಗಿತ್ತು. ಸದಾ ವಾಹನ ದಟ್ಟಣೆಯಿಂದ ಕೂಡಿರುವ ಈ ರಸ್ತೆಯಲ್ಲಿ ಏಕಮುಖ ಸಂಚಾರದಿಂದಾಗಿ ವಾಹನ ಸವಾರರು ಗಂಟೆಗಟ್ಟಲೆ ಕಾಯಬೇಕಾಯಿತು. ಕೂಳೂರು ಸೇತುವೆಯಿಂದ ಮುಂದಕ್ಕೆ ಮಂಗಳೂರು ಕಡೆಗೆ ಸಂಪರ್ಕ ರಸ್ತೆಯ ಕಾಂಕ್ರೀಟ್‌ ಕಾಮಗಾರಿ ಪ್ರಗತಿಯಲ್ಲಿದ್ದು, ಅಲ್ಲಿ ಸೋಮವಾರ ಬೆಳಗ್ಗೆ ಸುರಿದ ಮಳೆಯಿಂದಾಗಿ ನೀರು ನಿಂತು ಸಂಚಾರ ವ್ಯತ್ಯಯವಾಯಿತು.

ಬಂಟ್ವಾಳ: ಸಾಧಾರಣ ಮಳೆ
ಬಂಟ್ವಾಳ: ಜೂನ್‌ ತಿಂಗಳ ಆರಂಭದಲ್ಲೇ ಮಳೆಗಾಲದ ಲಕ್ಷಣಗಳು ಕಂಡುಬಂದಿದ್ದು, ರವಿವಾರ ರಾತ್ರಿಯಿಂದಲೇ ಮಳೆ ಆರಂಭಗೊಂಡಿತ್ತು. ಸೋಮವಾರ ದಿನವಿಡೀ ಬಿಟ್ಟುಬಿಟ್ಟು ಮಳೆಯಾಗಿದೆ.

ಲಾಕ್‌ಡೌನ್‌ ಸಡಿಲಿಕೆ ಬಳಿಕ ಸೋಮವಾರ ಹೆಚ್ಚಿನ ಜನಸಂಚಾರ ಕಂಡುಬಂದಿದ್ದು, ಮಳೆಯ ಕಾರಣದಿಂದ ಜನ ಕೊಡೆ ಹಿಡಿದು ಸಾಗುವ ದೃಶ್ಯ ಕಂಡುಬಂತು.

ಬೆಳ್ತಂಗಡಿ: ಉತ್ತಮ ಮಳೆ
ಬೆಳ್ತಂಗಡಿ: ತಾಲೂಕಿನಾದ್ಯಂತ ಸೋಮವಾರವು ಉತ್ತಮ ಮಳೆ ಸುರಿದಿದೆ.ಮುಂಜಾನೆಯಿಂದಲೆ ಮೋಡಕವಿದ ವಾತಾವರದಿಂದ ಕೂಡಿದ್ದು, ಬೆಳ್ತಂಗಡಿ, ಧರ್ಮಸ್ಥಳ, ಕೊಯ್ಯೂರು, ದಿಡುಪೆ, ಮಿತ್ತಬಾಗಿಲು, ಕಡಿರುದ್ಯಾವರ, ಕಲ್ಮಂಜ, ಮುಂಡಾಜೆ, ಬರಾಯ ಕನ್ಯಾಡಿ, ನೆರಿಯಾ, ಚಾರ್ಮಾಡಿ ಮುಂತಾದೆಡೆ ಉತ್ತಮ ಮಳೆಯಾಗಿದೆ.

ಯಾವುದೇ ಹಾನಿಯಾಗಿರುವ ಕುರಿತು ವರದಿಯಾಗಿಲ್ಲ. ರವಿವಾರ ಸಂಜೆ ಸುರಿದ ಮಳೆಗೆ ಮಲವಂತಿಗೆ ಗ್ರಾಮದ ಕರಿಯಾಲು ಮಹೇಶ್‌ ಗೌಡ ಅವರ ತೋಟಕ್ಕೆ ನದಿ ನೀರು ನುಗ್ಗಿ 60ಕ್ಕೂ ಅಧಿಕ ಅಡಿಕೆ ಸಸಿಗಳಿಗೆ ಹಾನಿಯಾಗಿದೆ.

ಸುಳ್ಯ: ಸಾಧಾರಣ ಮಳೆ
ಸುಳ್ಯ: ತಾಲೂಕಿನೆಲ್ಲೆಡೆ ಬೆಳಗ್ಗೆ ಹಾಗೂ ಸಂಜೆ ವೇಳೆ ಸಾಧಾರಣ ಮಳೆಯಾಗಿದೆ. ದಿನವಿಡೀ ಮೋಡ ಕವಿದ ವಾತಾವರಣ ಕಂಡು ಬಂತು.

ಟಾಪ್ ನ್ಯೂಸ್

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.