ಗೋವಾ ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಅಸ್ಸಾಂನಿಂದ ಹಣ: ಚೋಡಣಕರ್
11 ಶಾಸಕರನ್ನೂ ಪಕ್ಷಕ್ಕೆ ಎಳೆದುಕೊಳ್ಳುವುದು ಬಿಜೆಪಿಯ ಮೂಲ ಯೋಜನೆಯಾಗಿತ್ತು
Team Udayavani, Sep 22, 2022, 6:40 PM IST
ಪಣಜಿ: ಕಾಂಗ್ರೆಸ್ ನ 11 ಮಂದಿ ಶಾಸಕರನ್ನೂ ಪಕ್ಷಕ್ಕೆ ಎಳೆದುಕೊಳ್ಳುವುದು ಬಿಜೆಪಿಯ ಮೂಲ ಯೋಜನೆಯಾಗಿತ್ತು. ಅದಕ್ಕಾಗಿ ಅಪಾರ ಹಣವನ್ನೂ ನೀಡಲಾಗಿತ್ತು ಎಂದು ಕಾಂಗ್ರೆಸ್ ಮಾಜಿ ರಾಜ್ಯಾಧ್ಯಕ್ಷ ಗಿರೀಶ್ ಚೋಡಣಕರ್ ಆರೋಪಿಸಿದ್ದಾರೆ.
ಸುದ್ಧಿಗಾರರೊಂದಿಗೆ ಮಾತನಾಡಿ, ಗೋವಾದಲ್ಲಿ ಇತ್ತೀಚೆಗೆ ಕಾಂಗ್ರೆಸ್ ಪಕ್ಷದ 8 ಶಾಸಕರು ಬಿಜೆಪಿ ಸೇರಿದ್ದು,ರಾಜಕಾರಣಿಯೊಬ್ಬರು ಕೆಲವು ಶಾಸಕರಿಗೆ ಹಣದ ಚೀಲಗಳನ್ನು ಬಹಿರಂಗಪಡಿಸಿದ್ದರು. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಪಕ್ಷಾಂತರದ ಜವಾಬ್ದಾರಿ ನೀಡಿದ್ದರಿಂದ ಶಾಸಕರನ್ನು ಖರೀದಿಸಲು ಅಸ್ಸಾಂನಿಂದ ಹಣ ಬಂದಿದೆ ಎಂದರು.
ಗೋವಾ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಚುನಾವಣೆಯ ನಂತರ ಪಕ್ಷ ತೊರೆಯುವುದಿಲ್ಲ ಎಂದು ದೇವಸ್ಥಾನ ಮತ್ತು ಚರ್ಚ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಶಾಸಕರು ಪಕ್ಷ ಬದಲಿಸಿ ಬೇರೆ ಭಾಷೆ ಮಾತನಾಡುತ್ತಿದ್ದಾರೆ. ದಿಗಂಬರ ಕಾಮತ್ ರವರು ಅಪಾರ ದೈವ ಭಕ್ತರಾಗಿದ್ದರೂ ದ್ರೋಹ ಬಗೆದಿದ್ದಾರೆ ಎಂದು ಆರೋಪಿಸಿದರು.
ಚುನಾವಣೆಯ ಸಂದರ್ಭದಲ್ಲಿ ಕೆಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಹಣ ಪಡೆದಿರುವುದಾಗಿ ನನ್ನ ಮೇಲೆ ಆರೋಪ ಮಾಡಲಾಗುತ್ತಿದೆ. ಮಾಜಿ ಶಾಸಕ ಆಗ್ನೆಲ್ ಫರ್ನಾಂಡೀಸ್ ನನ್ನ ಮೇಲೆ ಆರೋಪ ಮಾಡಿದ್ದು, ದೇವಸ್ಥಾನಕ್ಕೆ ಬರಲಿ ಎಂದು ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿದ್ದೇನೆ ಮತ್ತು ಅವರೇ ಸ್ಥಳವನ್ನು ನಿರ್ಧರಿಸಬೇಕು. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ಚೋಡಣಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ
Delhi Liquor Scam:ತಿಹಾರ್ ಜೈಲಿನೊಳಗೆ ಬಿಆರ್ ಎಸ್ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ
Liquor Policy Case: ಅರವಿಂದ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ
Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್ ಕದತಟ್ಟಿದ ಕೇಜ್ರಿವಾಲ್