ಗಡಿಭಾಗದ ಅನ್ಯ ಮಾರ್ಗಗಳಲ್ಲಿ ನಿಗಾ ಅವಶ್ಯ


Team Udayavani, Dec 4, 2021, 11:51 AM IST

5border

ಅಫಜಲಪುರ: ಕೊರೊನಾ ಮಹಾಮಾರಿ ತನ್ನ ರೂಪ ಬದಲಿಸಿಕೊಂಡು ಮತ್ತೆ ಕಾಲಿಟ್ಟಿದ್ದರಿಂದ ಸರ್ಕಾರ ಮತ್ತೆ ಕೋವಿಡ್‌ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿದೆ. ಆದರೆ ಈ ನಿಯಮಗಳ ಪಾಲನೆಗೆ ನಿರ್ಮಿಸಲಾದ ಚೆಕ್‌ಪೋಸ್ಟ್‌ ಬಿಟ್ಟು ಗಡಿಭಾಗದ ಜನರು ಅನ್ಯಮಾರ್ಗದಿಂದ ರಾಜ್ಯದೊಳಗೆ ಪ್ರವೇಶಿಸುತ್ತಿದ್ದಾರೆ.

ನಾಮಕೇವಾಸ್ತೆ ಚೆಕ್ಪೋಸ್ಟ್

ತಾಲೂಕಿನ ಮಾಶಾಳ, ಬಳೂರ್ಗಿ, ಅರ್ಜುಣಗಿ ಗ್ರಾಮಗಳ ಮಹಾರಾಷ್ಟ್ರ ಗಡಿಯಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಇಲ್ಲಿಂದ ತಾಲೂಕಿಗೆ ಪ್ರವೇಶ ಪಡೆಯುವ ವಾಹನಗಳ ಮೇಲೆ ನಿಗಾ ಇಡುವ ಕೆಲಸ ನಡೆಯುತ್ತಿದೆ. ಆದರೆ ಸಿಬ್ಬಂದಿ ಕೊರತೆಯಿಂದ ಇದ್ದ ಚೆಕ್‌ಪೋಸ್ಟ್‌ ಗಳು ನಾಮಕೇವಾಸ್ತೆ ಎನ್ನುವಂತೆ ಆಗಿದೆ.

ಮಣೂರ ಹೈದ್ರಾದಲ್ಲಿಲ್ಲ ನಿಯಮ

ತಾಲೂಕಿನ ಪ್ರಸಿದ್ಧ ಪುಣ್ಯಸ್ಥಳವಾಗಿರುವ ಮಣೂರ ಗ್ರಾಮದ ಯಲ್ಲಮ್ಮ ದೇವಸ್ಥಾನಕ್ಕೆ ಭಕ್ತರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದರೆ ಯಾರೊಬ್ಬರು ಮಾಸ್ಕ್ ಧರಿಸುತ್ತಿಲ್ಲ, ಸಾಮಾಜಿಕ ಅಂತರವಿಲ್ಲ. ಹೀಗಾಗಿ ಕೋವಿಡ್‌ ರೂಪಾಂತರಿ ಆವರಿಸುವ ಭೀತಿ ಹೆಚ್ಚಾಗಿದೆ. ಅಲ್ಲದೇ ಕರ್ನಾಟಕ ಮಹಾರಾಷ್ಟ್ರದ ಪುಣ್ಯಸ್ಥಳವಾಗಿರುವ ಹೈದ್ರಾದಲ್ಲೂ ಭಕ್ತರ ದಂಡು ಹೆಚ್ಚಾಗಿದೆ. ಇಲ್ಲಿಂದಲೂ ತಾಲೂಕಿಗೆ ಹೆಚ್ಚು ಜನರು ಬರುತ್ತಿದ್ದಾರೆ. ಮಹಾರಾಷ್ಟ್ರ, ಕರ್ನಾಟಕ ಸರ್ಕಾರಗಳು ಈ ಗ್ರಾಮದ ದರ್ಗಾದಲ್ಲಿ ಹೆಚ್ಚಿನ ನಿಗಾ ವಹಿಸುವ ಅವಶ್ಯತೆಯಿದೆ.

ಅನ್ಯ ಮಾರ್ಗದಿಂದ ಬರುವ ಜನ

ತಾಲೂಕಿನ ಮೂರು ಚೆಕ್‌ಪೋಸ್ಟ್‌ಗಳ ಕಣ್ಣು ತಪ್ಪಿಸಿ ಅನ್ಯ ಮಾರ್ಗದಿಂದ ಜನರು ತಾಲೂಕಿಗೆ ಆಗಮಿಸುತ್ತಿದ್ದಾರೆ. ತಾಲೂಕಿನ ಜೇವರ್ಗಿ, ಹೈದ್ರಾ, ಮಾಶಾಳ ತಾಂಡಾ, ಅರ್ಜುಣಗಿ, ಸಿನ್ನೂರ ಬಡದಾಳ ಮಾರ್ಗವಾಗಿ ಹೆಚ್ಚಿನವರು ಮಹಾರಾಷ್ಟ್ರದಿಂದ ತಾಲೂಕಿಗೆ ಪ್ರವೇಶ ಪಡೆಯುತ್ತಿದ್ದಾರೆ. ಹೀಗೆ ಬರುವ ಜನರಿಂದ ಕೋವಿಡ್‌ ರೂಪಾಂತರಿ ವ್ಯಾಪಿಸುವ ಭೀತಿ ಹೆಚ್ಚಾಗಿದೆ.

ತಾಲೂಕು ಆಡಳಿತ, ಆರೋಗ್ಯ ಇಲಾಖೆ, ಪೊಲೀಸ್‌ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮತ್ತೆ ಕೋವಿಡ್‌ ಮಹಾಮಾರಿ ಹರಡುವ ಸಾಧ್ಯತೆಯಿದೆ. ಗಡಿ ಪ್ರದೇಶಗಳಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಿದ್ದು ಒಳ್ಳೆಯದಾಗಿದೆ. ಜತೆಗೆ ಸಿಬ್ಬಂದಿಗಳನ್ನು ಹೆಚ್ಚಿಸಿ ಸರಿಯಾಗಿ ಕೋವಿಡ್‌ ನಿಯಮಗಳನ್ನು ಪರೀಕ್ಷಿಸಬೇಕು. ಇನ್ನುಳಿದ ಗಡಿ ಗ್ರಾಮಗಳ ರಸ್ತೆಗಳಿಂದ ಜನರು ಒಳಗೆ ನುಸುಳುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು. ಸಿದ್ಧರಾಮ ವಾಘ್ಮೋರೆ, ಸಾಮಾಜಿಕ ಕಾರ್ಯಕರ್ತ

ಈಗಾಗಲೇ ಗಡಿ ಭಾಗದಲ್ಲಿ ಮೂರು ಚೆಕ್‌ಪೋಸ್ಟ್‌ಗಳಿವೆ. ಅನ್ಯ ದಾರಿಯಿಂದ ಜನರು ಬರುವ ಕುರಿತು ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಇನ್ನೂ ಮೂರ್‍ನಾಲ್ಕು ಕಡೆ ಚೆಕ್‌ಪೋಸ್ಟ್‌ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ತಾಲೂಕಿನಲ್ಲಿ ಪ್ರಖ್ಯಾತವಾಗಿರುವ ಹಾಗೂ ಇನ್ನಿತರ ದೇಗುಲಗಳಿದ್ದು, ಅಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಜನರು ಮಾಸ್ಕ್ ಧರಿಸಿ, ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಭಾಗವಹಿಸಬೇಕು. -ಕೆ. ನಾಗಮ್ಮ, ತಹಶೀಲ್ದಾರ್‌

ಜಿಲ್ಲಾಧಿಕಾರಿಗಳು ಆದೇಶ ನೀಡಿದರೆ ಗಡಿಭಾಗದ ಹೊಸೂರು, ಹೈದ್ರಾ ಕ್ರಾಸ್‌ ಹಾಗೂ ಇನ್ನಿತರ ಕಡೆಗಳಲ್ಲಿಯೂ ಚೆಕ್‌ಪೋಸ್ಟ್‌ ಸ್ಥಾಪಿಸಲಾಗುವುದು. ಜಗದೇವಪ್ಪ ಪಾಳಾ, ಸಿಪಿಐ

-ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.