ಕಾರ್ಕಳದಲ್ಲೂ ಮಂಕಿಮ್ಯಾನ್‌ ಖ್ಯಾತಿಯ ಜ್ಯೋತಿರಾಜ್‌ ಬಹುಮಹಡಿ ಕಟ್ಟಡವೇರಿ ಸಾಹಸ

ಮಣಿಪಾಲದಲ್ಲಿ ಸಾಹಸಗೈಯಲಿದ್ದೇನೆ ಎಂದ ಮಂಕಿಮ್ಯಾನ್‌

Team Udayavani, Feb 16, 2023, 10:59 AM IST

monkey man

ಕಾರ್ಕಳ: ಎತ್ತರದ ಬೆಟ್ಟ, ಕಟ್ಟಡಗಳನ್ನು ತಾನು ಏರುವ ಸಾಹಸವನ್ನು ನೀವು ನೋಡಿ ಖುಷಿಪಡಿ. ಯಾವತ್ತೂ ಇದೇ ತರಹ ಅನುಸರಿಸುವ ಸಾಹಸಕ್ಕೆ ಇಳಿಯಬೇಡಿ. ಅಪಾಯ ತಂದುಕೊಳ್ಳಬೇಡಿ ಎಂದು ಜ್ಯೋತಿರಾಜ್‌ ಆಲಿಯಾಸ್‌ ಕೋತಿರಾಜ್‌ ಹೇಳಿದರು. ಭಾರತದ ಮಂಕಿಮ್ಯಾನ್‌ ಎಂಬ ಖ್ಯಾತಿ ಪಡೆದಿರುವ ಜ್ಯೋತಿರಾಜ್‌ ಕಾರ್ಕಳದ ಸಾಲ್ಮರ ಬಳಿಯಿರುವ ಬಹುಮಹಡಿ ಕಟ್ಟಡವೇರುವ ಸಾಹಸವನ್ನು ಬುಧವಾರ ಬೆಳಗ್ಗೆ ಪ್ರದರ್ಶಿಸಿದ್ದರು.

125 ಅಡಿ ಎತ್ತರದ ಕಟ್ಟಡವನ್ನು ಕೇವಲ 10 ನಿಮಿಷಗಳಲ್ಲಿ ಸರಸರನೇ ಹತ್ತಿಳಿದಾಗ ಅಲ್ಲಿದ್ದವರು ನಿಟ್ಟುಸಿರು ಬಿಟ್ಟರು. ಇದನ್ನು ನೋಡಲು 500ಕ್ಕೂ ಅಧಿಕ ಕುತೂಹಲಿಗಳು ನೆರೆದಿದ್ದರು. ಪೊಲೀಸರು ಭದ್ರತೆ ವ್ಯವಸ್ಥೆ ಮಾಡಿ, ವಾಹನಗಳನ್ನು ಏಕಮುಖ ರಸ್ತೆಯಾಗಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕಟ್ಟಡದ ತುತ್ತತುದಿಯಲ್ಲಿ ಕನ್ನಡ ನಾಡಿನ ಬಾವುಟ ಹಾರಿಸುವ ಮೂಲಕ ಕನ್ನಡಾಭಿಮಾನವನ್ನು ಅವರು ಮೆರೆದರು.

ಕಾರ್ಕಳದ ಪ್ರೀತಿಗೆ ಚಿರಋಣಿ

ರಾಜ್ಯದೆಲ್ಲೆಡೆ ಸುತ್ತಾಟ ಆರಂಭಿಸಿದ್ದೇನೆ. ಜೋಗ ಜಲಪಾತ ಏರುವಾಗ ಬಿದ್ದು ಗಾಯಗೊಂಡಿದ್ದೆ. ಎರಡು ವರ್ಷಗಳ ಬಳಿಕ ಮತ್ತೆ ಸಾಹಸ ವೃತ್ತಿಗೆ ಮರಳಿದ್ದೇನೆ. ಮೊದಲ ಪ್ರಯತ್ನವಾಗಿ ಬೆಳ್ತಂಗಡಿಯ ಗಡಾಯಿಕಲ್ಲು ಹತ್ತಿಳಿದ ಬಳಿಕ ಕಾರ್ಕಳದ ಸಮೃದ್ಧಿ ಕಟ್ಟಡ ಏರಿದ್ದೇನೆ.

ಅನುಮತಿಗಾಗಿ ಸಚಿವ ವಿ. ಸುನಿಲ್‌ ಕುಮಾರ್‌ ಹಾಗೂ ಉದ್ಯಮಿ ಶ್ರೀನಿವಾಸ್‌ ಕಾಮತ್‌ ಮತ್ತಿತರರು ನೆರವು ನೀಡಿದ್ದಾರೆ. ಬಾಲಾಜಿ ಹೊಟೇಲ್‌ನವರು ಉತ್ತಮ ಆತಿಥ್ಯ ನೀಡಿದರು. ಸಾಹಸ ಪ್ರದರ್ಶಿಸಿ ದೊರಕುವ ಹಣವನ್ನು ಫೌಂಡೇಶನ್‌ ಸ್ಥಾಪಿಸಿ ಬಡ ಮಕ್ಕಳ ನೆರವಿಗೆ ವಿನಿಯೋಗಿಸುವುದಾಗಿ ತಿಳಿಸಿದರು.

ಸಾಹಸಿಗೆ ಗೌರವಾರ್ಪಣೆ

ಉದ್ಯಮಿ ನಿತ್ಯಾನಂದ ಪೈ ಜ್ಯೋತಿರಾಜ್‌ ಅವರನ್ನು ಅಭಿನಂದಿಸಿದರು. ಉದ್ಯಮಿ ಬೋಳ ಶ್ರೀನಿವಾಸ್‌ ಕಾಮತ್‌, ಸತೀಶ್‌ ಹೆಗ್ಡೆ ಬೈಲೂರು, ಅವಿನಾಶ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಮಣಿಪಾಲದಲ್ಲಿ ಸಾಹಸಗೈಯಲಿದ್ದೇನೆ
ಸಮೃದ್ಧ ಕಟ್ಟಡ ಬಳಕೆಯಾಗದೆ ಇದ್ದಿರುವದರಿಂದ ಕೈ ಹಿಡಿತ ಸಾಧ್ಯವಾಗದೇ ಏರುವಾಗ ಕೈ ಉರಿ ಬಂತು. ಬ್ಯಾಲೆನ್ಸ್‌ ಮಾಡಿಕೊಂಡು ಹತ್ತಿದೆ. ಜನಬಳಕೆಯಿಲ್ಲದೆ ಕಟ್ಟಡ ಹಾಳಾಗುತ್ತಿದೆ. ಇಲ್ಲಿಂದ ಮಣಿಪಾಲಕ್ಕೆ ತೆರಳುತ್ತೇನೆ. ಅಲ್ಲಿಯೂ ಬಹುಮಹಡಿ ಕಟ್ಟಡ ಏರಲಿದ್ದೇನೆ. ಅನುಮತಿ ಪಡೆದು ಆ ಕಾರ್ಯನಿರ್ವಹಿಸುವೆ. ಮಹಾಶಿವರಾತ್ರಿ ಮುಗಿಸಿಕೊಂಡು ಅಲ್ಲಿಂದ ತನ್ನ ಪ್ರವಾಸ ಮುಂದುವರಿಸುವುದಾಗಿ ಸಾಹಸಿಗ ಹೇಳಿದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.