ಸದನದಲ್ಲಿ ಪ್ರತಿಧ್ವನಿಸಿದ ಮಂಗನ ಕಾಯಿಲೆ


Team Udayavani, Mar 17, 2020, 3:10 AM IST

sadanadalli

ವಿಧಾನಸಭೆ: ಮಲೆನಾಡು ಭಾಗದಲ್ಲಿ ವ್ಯಾಪಿಸಿರುವ ಮಂಗನ ಕಾಯಿಲೆ ನಿಯಂತ್ರಿಸುವಲ್ಲಿ ಸರ್ಕಾರ ವಿಫ‌ಲವಾಗಿರುವ ಬಗ್ಗೆ ಆಡಳಿತ ಪಕ್ಷದ ಸದಸ್ಯರೇ ಆಕ್ರೋಶ ಹೊರಹಾಕಿ, ಆರೋಗ್ಯ ಇಲಾಖೆ ಕಾರ್ಯವೈಖರಿ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಶೂನ್ಯ ವೇಳೆಯಲ್ಲಿ ಮಂಗನ ಕಾಯಿಲೆಯಿಂದ ಸಾವು ಉಂಟಾಗಿರುವ ಬಗ್ಗೆ ಬಿಜೆಪಿಯ ಹರತಾಳು ಹಾಲಪ್ಪ ಪ್ರಸ್ತಾಪಿಸಿ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸೂಕ್ತ ಚಿಕಿತ್ಸೆ ಕೊಡಿಸುತ್ತಿಲ್ಲ, ಅಧಿಕಾರಿಗಳು ಕೈಗೆ ಸಿಗುವುದಿಲ್ಲ. ಪರಿಸ್ಥಿತಿ ಗಂಭೀರ ವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದಕ್ಕೆ ದನಿಗೂಡಿಸಿದ ಬಿಜೆಪಿಯ ಅರಗ ಜ್ಞಾನೇಂದ್ರ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಪರಿಸ್ಥಿತಿಯ ಗಂಭೀರತೆಯೇ ಗೊತ್ತಿಲ್ಲ. ಅವರ ಕುಟುಂಬ ಸದಸ್ಯರಿಗೆ ಮಂಗನ ಕಾಯಿಲೆ ಬಂದು ಸಾವು ಸಂಭವಿಸಿದ್ದರೆ ಆಗ ಅದರ ನೋವು ಗೊತ್ತಾಗುತ್ತಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿಯ ಮತ್ತೂಬ್ಬ ಸದಸ್ಯ ಎಂ.ಪಿ.ಕುಮಾರಸ್ವಾಮಿ, ಕೊರೊನಾ ಎಂದಾಕ್ಷಣ ಎಷ್ಟೆಲ್ಲಾ ಮುನ್ನಚ್ಚರಿಕೆ ಕ್ರಮ ಕೈಗೊಂಡಿದ್ದೀರಿ, ಮಂಗನ ಕಾಯಿಲೆ ಬಗ್ಗೆ ಯಾಕೆ ನಿರ್ಲಕ್ಷ್ಯ ಎಂದು ತರಾಟೆಗೆ ತೆಗೆದುಕೊಂಡರು.

ಹರತಾಳು ಹಾಲಪ್ಪ ಮಾತು ಮುಂದುವರಿಸಿ ಹಿಂದಿನ ಸರ್ಕಾರದಲ್ಲಿ ಮಂಗನ ಕಾಯಿಲೆ ನಿಯಂತ್ರ ಣಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕಳುಹಿಸಿ ವೆಚ್ಚವನ್ನು ಸರ್ಕಾರವೇ ಭರಿಸುತ್ತಿತ್ತು. ಆದರೆ, ಈಗ ಚಿಕಿತ್ಸೆಗೆ ಮೆಗ್ಗಾನ್‌ ಆಸ್ಪತ್ರೆಗೆ ಕಳುಹಿಸ ಲಾಗುತ್ತಿದೆ, ಮೆಗ್ಗಾನ್‌ ಆಸ್ಪತ್ರೆ ಶಿವಮೊಗ್ಗದಲ್ಲಿ ಸಾವಿನ ಕೂಪವಾಗಿದೆ. ನಿನ್ನೆಯಷ್ಟೇ ಒಬ್ಬರು ಮೃತಪಟ್ಟಿದ್ದಾರೆ. ಆಸ್ಪತ್ರೆ ಯಿಂದ ಮರಣೋತ್ತರ ಪರೀಕ್ಷೆ ಸಹ ಸರಿಯಾಗಿ ಮಾಡದೆ ಲುಂಗಿಯನ್ನು ಮೈಮೇಲೆ ಹಾಕಿ ಕಳುಹಿಸಿ ದ್ದಾರೆ. ಅವರ ಕುಟುಂಬದ ಗೋಳು, ನೋವು ನೋಡಿದರೆ ನಾವು ಯಾಕಿದ್ದೇವೆ ಎನಿಸುತ್ತದೆ ಎಂದು ಹೇಳಿದರು.

ಸರ್ಕಾರದ ಪರವಾಗಿ ಆರೋಗ್ಯ ಸಚಿವ ಶ್ರೀರಾಮುಲು ಉತ್ತರಿಸಿ, ಮಂಗನ ಕಾಯಿಲೆಗೆ ಇದುವರೆಗೂ 15 ಮಂದಿ ಮೃತಪಟ್ಟಿದ್ದು ಸರ್ಕಾರ ಕೆಲವೊಂದು ಕ್ರಮ ಕೈಗೊಂಡಿದೆ ಎಂದು ಹೇಳಿದರು. ಆಗ, ಮತ್ತೆ ಹರತಾಳು ಹಾಲಪ್ಪ ಎದ್ದುನಿಂತು, ತಪ್ಪು ಮಾಹಿತಿ ಕೊಡಬೇಡಿ. ಇದುವರೆಗೂ 23 ಮಂದಿ ಸತ್ತಿದ್ದಾರೆ. ಅಧಿಕಾರಿಗಳು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಕಳೆದ ಸರ್ಕಾರದ ಅವಧಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಘೋಷಿಸಿದ ಪರಿಹಾರದ ಹಣ ಇನ್ನೂ 8 ಲಕ್ಷ ರೂ. ಪಾವತಿಯಾಗಿಲ್ಲ. ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಕಚೇರಿಯಲ್ಲಿ ಸಿಗುವುದೇ ಇಲ್ಲ ಎಂದು ಆರೋಪಿಸಿದರು.

ಪ್ರಯೋಗಾಲಯ ಸ್ಥಾಪನೆಯಾಗಿಲ್ಲ: ಮಾಜಿ ಸಚಿವ ಯು.ಟಿ.ಖಾದರ್‌ ಮಾತನಾಡಿ, ಮಂಗನ ಕಾಯಿಲೆ ನಿಯಂತ್ರಣ ಆರೋಗ್ಯ ಮತ್ತು ಅರಣ್ಯ ಇಲಾಖೆ ಜತೆಗೂಡಿ ಮಾಡಬೇಕು ಎಂದು ಹೇಳಿದರು. ಮಾಜಿ ಸಚಿವ ಶಿವಾನಂದ ಪಾಟೀಲ್‌ ಅವರು, ಹಿಂದೆ ನಾವು ಪ್ರಯೋಗಾಲಯ ಸ್ಥಾಪನೆಗೆ ಹಣ ಬಿಡುಗಡೆ ಮಾಡಿದ್ದೆವು ಆದರೆ ಇದುವರೆಗೂ ಪ್ರಯೋಗಾಲಯ ಸ್ಥಾಪನೆಯಾಗಿಲ್ಲ. ಹೊಸ ಔಷಧ ಕಂಡು ಹಿಡಿಯಲು ಸೂಚಿಸಲಾಗಿತ್ತು. ಆ ಕೆಲಸವೂ ಆಗಿಲ್ಲ ಎಂದು ಹೇಳಿದರು. ಮಾಜಿ ಸಚಿವ ಕೃಷ್ಣ ಬೈರೇಗೌಡರು, ಸರ್ಕಾರ ಯಾವುದೇ ಇರಲಿ.

ಸಮಸ್ಯೆಗೆ ಪರಿಹಾರ ಕಲ್ಪಿಸುವುದು ಮುಖ್ಯ. ತಕ್ಷಣ ಸರ್ಕಾರ ಆ ಬಗ್ಗೆ ಗಮನಹರಿಸಲಿ ಎಂದು ಸಲಹೆ ನೀಡಿದರು. ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ನನ್ನ ಮತ ಕ್ಷೇತ್ರದಲ್ಲೂ ಒಬ್ಬರ ಸಾವು ಸಂಭವಿಸಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು. ನಂತರ ಆರೋಗ್ಯ ಸಚಿವ ಶ್ರೀರಾಮುಲು ಅವರು, ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಸರ್ಕಾರದ ಕಡೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ವಿಧಾನಸೌಧಕ್ಕೂ ತಟ್ಟಿದ ಕೊರೊನಾ ಆತಂಕ: ಕೊರೊನಾ ಆತಂಕ ವಿಧಾನಸೌಧಕ್ಕೂ ತಟ್ಟಿದ್ದು, ವಿಧಾನಸಭೆ ಕಲಾಪ ವೀಕ್ಷಿಸಲು ಬರುವ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಮಾರ್ಚ್‌ 17 ರಿಂದ 20 ರವರೆಗೆ ಸ್ಪೀಕರ್‌ ಗ್ಯಾಲರಿ ಹಾಗೂ ಸಾರ್ವಜನಿಕರ ಗ್ಯಾಲರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಸೋಮವಾರ ಸದನದಲ್ಲಿ ಈ ಕುರಿತು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಣೆ ಹೊರಡಿಸಿದ್ದು, ಕೊರೊನಾ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಗ್ಯಾಲರಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಶಾಸಕರು ಹಾಗೂ ಸಚಿವರು ಸಹ ಗ್ಯಾಲರಿ ಪ್ರವೇಶ ಕೋರಿ ಮನವಿ ಸಲ್ಲಿಸಬಾರದು. ಪಾಸ್‌ ಸಹ ವಿತರಿಸಬಾರದು ಎಂದು ಹೇಳಿದರು.

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.