ಮರೆಯಾದ “ಕೆರೆ’ಗಳಿಗೆ ಮುಡಾದಿಂದ ಮರುಜೀವ!


Team Udayavani, Mar 21, 2022, 3:37 PM IST

ಮರೆಯಾದ “ಕೆರೆ’ಗಳಿಗೆ ಮುಡಾದಿಂದ ಮರುಜೀವ!

ಮಂಗಳೂರು : ಕೆರೆಗಳನ್ನು ಪುನರುಜ್ಜೀವನಗೊಳಿಸಿ ಸಂರಕ್ಷಣೆ, ಅಂತರ್ಜಲ ವೃದ್ಧಿಸುವ ನೆಲೆಯಲ್ಲಿ ಮಂಗಳೂರು ವ್ಯಾಪ್ತಿಯಲ್ಲಿ ಸದ್ದಿಲ್ಲದೆ ಕಾರ್ಯಯೋಜನೆಗಳು ಸಾಕಾರಗೊಳ್ಳು ತ್ತಿವೆ. ಪುರಾತನ ಗುಜ್ಜರಕೆರೆ ಅಭಿವೃದ್ಧಿಯಾದ ಸ್ವರೂಪದಲ್ಲಿಯೇ ನಗರದ ಸಣ್ಣ ಪುಟ್ಟ ಕೆರೆಗಳು ಕೂಡ ಇದೀಗ ಅಭಿವೃದ್ಧಿಗೆ ಮುನ್ನುಡಿ ಬರೆಯುತ್ತಿದೆ. ಮರೆಯಾಗಿದೆ ಎಂದೇ ಭಾವಿಸುತ್ತಿದ್ದ ಸಣ್ಣ ಪುಟ್ಟ ಕೆರೆಗಳಿಗೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮೂಲಕ ಮರುಜೀವ ನೀಡುವ ವಿಶೇಷ ಪ್ರಯತ್ನ ನಗರದಲ್ಲಿ ಸಾಕಾರವಾಗುತ್ತಿದೆ. ಶಾಸಕ ವೇದವ್ಯಾಸ ಕಾಮತ್‌, ಮುಡಾ ಅಧ್ಯಕ್ಷ ರವಿಶಂಕರ ಮಿಜಾರು ಅವರು ಈ ನೆಲೆಯಲ್ಲಿ ಮಹತ್ವದ ಕಾರ್ಯ ನಡೆಸಿದ್ದಾರೆ.

ಆಕರ್ಷಕ ದೇಖೀ!
ಜಪ್ಪುವಿನಲ್ಲಿ “ಮೊಲಿ ಕೆರೆ’ ಎಂದೇ ಗುರುತಿಸಿ ಕೊಂಡಿದ್ದ ಸಣ್ಣ ಕೆರೆ ಕಾಲ ಕಳೆದಂತೆ ಕಸದ ರಾಶಿಯಿಂದ ಕಣ್ಮರೆಯಾಗಿತ್ತು. ಹೀಗಾಗಿ ಕಡತದಲ್ಲಿ ಮಾತ್ರ ಈ ಕೆರೆಯ ಉಲ್ಲೇಖವಾಗುತ್ತಿತ್ತು. ಅಂತಹ ಕೆರೆಯನ್ನು ಇದೀಗ ಸುಂದರಗೊಳಿಸಲಾಗಿದೆ. ಒಂದೆಡೆ ಅಂತರ್ಜಲಕ್ಕೆ ಸೂಕ್ತವಾಗುವ ನೆಲೆಯಲ್ಲಿ ಮತ್ತೂಂದೆಡೆ ಪ್ರವಾಸಿಗರಿಗೆ ತಕ್ಕುದಾದ ರೀತಿಯಲ್ಲಿ ಕೆರೆ ಅಭಿವೃದ್ಧಿಪಡಿಸಲಾಗಿದೆ. ಕುಲಶೇಖರ, ಕದ್ರಿ ಕೆರೆಗಳು ಕೂಡ ಮರೆಯಾದ ಸ್ವರೂಪದಲ್ಲೇ ಇದ್ದವು. ಇದೀಗ ಅವು ಗ ಳನ್ನು ಅಭಿವೃದ್ಧಿಗೊಳಿಸಲಾಗಿದೆ.

ಇತ್ತೀಚೆಗೆ ಅಭಿವೃದ್ಧಿಗೊಂಡ ಕೆರೆ
ಜಪ್ಪಿನಮೊಗರು ಗ್ರಾಮದ ಕಂರ್ಬಿಸ್ಥಾನ ಕೆರೆ, ಕೊಣಾಜೆ ಸಮೀಪದ ದಡಸ ಕೆರೆ, ಬಜಾಲ್‌ ಗ್ರಾಮದ ಕುಂದೋಡಿ ಕೆರೆ, ಕಸ್ಬಾ ಬಜಾರ್‌ ಗ್ರಾಮದ ನಡುಪಳ್ಳಿ ಜುಮ್ಮಾ ಮಸೀದಿ ಕೆರೆ, ಪಡುಪಣಂಬೂರು ಗ್ರಾ.ಪಂ.ವ್ಯಾಪ್ತಿಯ ಜಳಕದ ಕೆರೆ, ಕಾಟಿಪಳ್ಳ ಕೆರೆ.

ಇದನ್ನೂ ಓದಿ :10 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವರ್ಣರಂಜಿತ ತೆರೆ : ಕಿಕ್ಕಿರಿದ ಪ್ರೇಕ್ಷಕರು

ಅಭಿವೃದ್ಧಿಯ ನಿರೀಕ್ಷೆಯಲ್ಲಿರುವ ಕೆರೆಗಳು
ಬೋಳೂರು ವಾರ್ಡ್‌ನ ಕುಟ್ಟಿನಾಡ್‌ ಕೆರೆ, ಅಳಪೆಯ ಕಂರ್ಭಿಮಾರ್‌ ಕೆರೆ, ಮಹಾಮ್ಮಾಯ ಕೆರೆ, ಟ್ಯಾಂಕ್‌ ಕಾಲನಿ ಕೆರೆ, ಹರೇಕಳ ಗ್ರಾಮದ ರಾಜಗುಡ್ಡೆಯ ತಾವರಕೆರೆ, ಕೊಣಾಜೆಯ ಪುಲಿಂಡಿ ಕೆರೆ, ಅಂಬ್ಲಿಮೊಗರು ವಾಡ ಕೆರೆ, ಉಳ್ಳಾಲ ನಗರಸಭೆಯ ಒಂಬತ್ತು ಕೆರೆ ಬಳಿಯ ಸಾರ್ವಜನಿಕ ಕೆರೆ, ಬೆಳ್ಮಗ್ರಾಮದ ಬೆಳ್ಮದೋಟ ಸಾರ್ವಜನಿಕ ಕೆರೆ ಮುಂತಾದ ಕೆರೆಗಳು ಅಭಿವೃದ್ಧಿಯ ನಿರೀಕ್ಷೆಯಲ್ಲಿವೆ. ಮುಡಾ ವ್ಯಾಪ್ತಿಯಲ್ಲಿ ಬರುವ ಮಂಗಳೂರು, ಮೂಲ್ಕಿ, ಉಳ್ಳಾಲ ಪ್ರದೇಶಗಳಲ್ಲಿ ಪ್ರಸ್ತುತ ಉಳಿದಿರುವ ಕೆರೆಗಳನ್ನು ಸಮೀಕ್ಷೆ ನಡೆಸಿ ಪ್ರಾಧಿಕಾರದಲ್ಲಿರುವ ಕೆರೆಗಳ ಅಭಿವೃದ್ಧಿ ಮೊತ್ತವನ್ನು ಬಳಸಿಕೊಂಡು ಪುನರುಜ್ಜೀವನಗೊಳಿಸಲು ನಿರ್ಧರಿಸಲಾಗಿದೆ.

ಗುಜ್ಜರಕೆರೆ ಹೊಸ ಸ್ವರೂಪ
ರಾಜ್ಯ ಸರಕಾರದ ವಿವಿಧ ಅನುದಾನಗಳಿಂದ ಗುಜ್ಜರಕೆರೆ ವಿಶೇಷ ಮಾದರಿಯಲ್ಲಿ ಅಭಿವೃದ್ಧಿ ಗೊಂಡಿದೆ. ಬೈರಾಡಿ ಕೆರೆ ಹಾಗೂ ಕಾವೂರು ಕೆರೆ ಮತ್ತಷ್ಟು ಅಭಿವೃದ್ಧಿಗೆ ತೆರೆದುಕೊಳ್ಳುತ್ತಿದೆ. ಇದರ ಜತೆಗೆ ನಗರದ ಸಣ್ಣ ಪುಟ್ಟ ಕೆರೆಗಳು ಕೂಡ ಇದೀಗ ಅಭಿವೃದ್ಧಿಯಾಗುತ್ತಿರುವುದು ಗಮನೀಯ ಅಂಶ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.