ಮೊರಟೋರಿಯಂ ಚಕ್ರಬಡ್ಡಿ ಮನ್ನಾ : ಬ್ಯಾಂಕ್ಗಳಿಗೆ ಸುಪ್ರೀಂ ಕೋರ್ಟ್ ತಾಕೀತು
Team Udayavani, Mar 24, 2021, 9:00 AM IST
ಹೊಸದಿಲ್ಲಿ: ಲಾಕ್ಡೌನ್ ಅವಧಿಯಲ್ಲಿ 6 ತಿಂಗಳ ಸಾಲದ ಕಂತು ಪಾವತಿ “ಅವಧಿ ವಿಸ್ತರಣೆ’ ಯೋಜನೆಯನ್ನು ಬಳಸಿ ಕೊಂಡ ಗ್ರಾಹಕರಿಗೆ ಸುಪ್ರೀಂ ಕೋರ್ಟ್ ಸಮಾಧಾನ ಒದಗಿಸಿದೆ. ಈ ಅವಧಿಯಲ್ಲಿ ಇಎಂಐ ಮೊತ್ತಕ್ಕೆ ವಿಧಿಸಲಾದ ಬಡ್ಡಿಯ ಮೇಲಿನ ಬಡ್ಡಿ (ಚಕ್ರಬಡ್ಡಿ)ಯನ್ನು ಪೂರ್ಣವಾಗಿ ಮನ್ನಾ ಮಾಡುವಂತೆ ಬ್ಯಾಂಕ್ಗಳಿಗೆ ಅದು ತಾಕೀತು ಮಾಡಿದೆ.
ಎಷ್ಟೇ ಮೊತ್ತದ ಸಾಲ ಪಡೆದಿದ್ದರೂ ಎಲ್ಲ ಸಾಲಗಾರರು ಇದಕ್ಕೆ ಅರ್ಹರಾಗುತ್ತಾರೆ ಎಂದೂ ಕೋರ್ಟ್ ಹೇಳಿದೆ.
ಕಳೆದ ವರ್ಷ ಲಾಕ್ಡೌನ್ ಅವಧಿಯಲ್ಲಿ ಮಾ. 1ರಿಂದ ಆ. 31ರ ವರೆಗೆ ಆರ್ಬಿಐ ಸಾಲದ ಕಂತು ಪಾವತಿ ಅವಧಿ ವಿಸ್ತರಣೆ (ಮೊರಟೋರಿಯಂ) ಪ್ರಕಟಿಸಿತ್ತು. ಆದರೆ ಕೆಲವು ಬ್ಯಾಂಕುಗಳು ಈ ಅವಧಿಯ ಕಂತಿನ ಮೇಲೆ ಚಕ್ರಬಡ್ಡಿ ವಿಧಿಸಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಕೋರ್ಟ್ ಮಂಗಳವಾರ ಈ ಆದೇಶ ಹೊರಡಿಸಿದೆ.
ಅವಧಿ ವಿಸ್ತರಣೆ ಸಾಧ್ಯವಿಲ್ಲ
ಇದೇ ವೇಳೆ, ಮೊರಟೋರಿಯಂ ಅವಧಿಯನ್ನು ಆ. 31ಕ್ಕಿಂತ ವಿಸ್ತರಣೆ ಮಾಡಲಾಗದು ಎಂಬ ಕೇಂದ್ರ ಮತ್ತು ಆರ್ಬಿಐ ನಿರ್ಧಾರದಲ್ಲಿ ಮಧ್ಯಪ್ರವೇಶ ಮಾಡುವು ದಿಲ್ಲ ಎಂದೂ ಕೋರ್ಟ್ ಹೇಳಿದೆ. ಇದು ದೇಶದ ಆರ್ಥಿಕತೆಗೆ ಸಂಬಂಧಿಸಿದ ವಿಚಾರ ಎಂದು ಕೋರ್ಟ್ ತಿಳಿಸಿದೆ. ಮೊರಟೋರಿಯಂ ಅವಧಿಯ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂಬ ಅರ್ಜಿ
ದಾರರ ಕೋರಿಕೆಯನ್ನೂ ನ್ಯಾಯಪೀಠ ತಿರಸ್ಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ