ಒಳಜಗಳದಿಂದಲೇ ಕಾಂಗ್ರೆಸ್ನ ಅವನತಿ: ಶೋಭಾ ಕರಂದ್ಲಾಜೆ
Team Udayavani, May 7, 2022, 11:00 PM IST
ಉಡುಪಿ: ರಾಷ್ಟ್ರ ಮಟ್ಟದಲ್ಲಿ ಸಮರ್ಥ ನೇತೃತ್ವ ಇಲ್ಲದೆ, ಒಳ ಜಗಳದಿಂದ ಕಾಂಗ್ರೆಸ್ ಅವನತಿಯತ್ತ ಸಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಬಿಜೆಪಿ ಸಿದ್ಧಾಂತ ಹಾಗೂ ಪ್ರಧಾನಿ ಮೋದಿಯವರ ಆಡಳಿತ ನೋಡಿ ಅನೇಕರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.
ಮೋದಿಯವರು ಅಭಿವೃದ್ಧಿ, ಪ್ರಾಮಾಣಿಕ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ನಾಯಕರು ಬಿಜೆಪಿಗೆ ಸೇರಲಿದ್ದಾರೆ. ಪಕ್ಷದ ತಣ್ತೀ, ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತವಿದೆ. ಕ್ರಿಮಿನಲ್ ಕೇಸ್ ಇದ್ದವರಿಗೆ ಬಿಜೆಪಿ ಪ್ರವೇಶಕ್ಕೆ ಅವಕಾಶವಿಲ್ಲ ಎಂದರು.
ಪಾಕಿಸ್ಥಾನದ ಪರ ಘೋಷಣೆ ಕೂಗಿರುವುದು ಸೇರಿದಂತೆ ಹಲವು ಪ್ರಕರಣಗಳ ಎನ್ಐಎಯಿಂದ ತನಿಖೆಯಾಗುತ್ತಿದೆ. ಇದರ ಹಿಂದಿರುವ ಷಡ್ಯಂತ್ರ ಹಾಗೂ ಯಾರ ಬೆಂಬಲವಿದೆ ಎಂಬುದು ತನಿಖೆಯಿಂದ ಹೊರಬರಲಿದೆ ಎಂದರು.