ಪಶ್ಚಿಮ ಬಂಗಾಳಕ್ಕೆ ಹೆಚ್ಚು ಅಲ್ಖೈದಾ ನಂಟು: ಎನ್ಐಎ
6 ಮಂದಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಕಾಶ್ಮೀರ ಉಗ್ರರ ಜತೆ ನಿಕಟ ಸಂಪರ್ಕ ಹೊಂದಿದ್ದಾರೆ.
Team Udayavani, Sep 22, 2020, 1:31 PM IST
ಕೋಲ್ಕತ್ತಾ: ದೇಶದ ಇತರೆ ರಾಜ್ಯಗಳಿಗಿಂತ ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ಮಂದಿ ಅಲ್ಖೈದಾ ಉಗ್ರ ಸಂಘಟನೆ ಜತೆ ನಂಟು ಹೊಂದಿದ್ದಾರೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಮೂಲಗಳು ತಿಳಿಸಿವೆ.
ಶನಿವಾರವಷ್ಟೇ ಪ. ಬಂಗಾಳದ ಮುರ್ಷಿದಾಬಾದ್ನಲ್ಲಿ 6 ಅಲ್ಖೈದಾ ಉಗ್ರರನ್ನು ಎನ್ಐಎ ಬಂಧಿಸಿತ್ತು. “ಮುರ್ಷಿದಾಬಾದ್ನ ಮನೆಯಲ್ಲಿ ಗುರುವಾರ ರಾತ್ರಿ ಅಲ್ -ಖೈದಾ ಸಂಪರ್ಕಿತರ ಸಭೆ ನಡೆದಿತ್ತು. ಇದರಲ್ಲಿ ಮಾಲ್ಡಾ ಜಿಲ್ಲೆಗೆ ಸೇರಿದ ಇಬ್ಬರು ಉಗ್ರರು ಪಾಲ್ಗೊಂಡಿದ್ದರು.
ಶುಕ್ರವಾರ ನಸುಕಿನಲ್ಲೇ ಅವರು ಅಲ್ಲಿಂದ ಮಾಲ್ಡಾಕ್ಕೆ ಹೊರಟಿದ್ದಾರೆ. ಈಗ ಇಬ್ಬರೂ ಪರಾರಿಯಾಗಿದ್ದು, ತೀವ್ರ ಶೋಧ ನಡೆಯುತ್ತಿದೆ’ ಎಂದು ಹೇಳಿದೆ. ಬಂಧಿತ 6 ಮಂದಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಕಾಶ್ಮೀರ ಉಗ್ರರ ಜತೆ ನಿಕಟ ಸಂಪರ್ಕ ಹೊಂದಿದ್ದಾರೆ. ಇವರಿಗೆ ಸೇರಿದ ಕೆಲವು ಸಿಮ್ ಕಾರ್ಡ್ಗಳು, ಮೊಬೈಲ್ಗಳು, ಲ್ಯಾಪ್ಟಾಪ್ ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿವೆ.
ಕೇರಳದ 10 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
ಆರೆಂಜ್ ಅಲರ್ಟ್ ಬಂಗಾಳಕೊಲ್ಲಿಯ ಈಶಾನ್ಯ ಭಾಗದಲ್ಲಿ ಪುನಃ ವಾಯುಭಾರ ಕುಸಿತ ಉಂಟಾಗಿರುವ ಕಾರಣ, ಕೇರಳ ದಲ್ಲಿ ಮುಂದಿನ 2-3 ದಿನಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಪಾಲ ಕ್ಕಾಡ್, ಮಲಪ್ಪುರಂ, ಕಲ್ಲಿಕೋಟೆ, ವಯನಾಡ್, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಭಾನುವಾರ-ಸೋಮವಾರ ರಾಜ್ಯಾದ್ಯಂತ ಸರಾಸರಿ 7ಸೆಂ.ಮೀ. ಮಳೆಯಾಗಿದೆ. ತಿರುವನಂತಪುರದಲ್ಲಿ ಒಬ್ಬರು ಹಾಗೂ ಕಾಸರಗೋಡಿನಲ್ಲಿ ಇಬ್ಬರು ಮಳೆ ಸಂಬಂಧಿತ ಅವಘಡದಲ್ಲಿ ಸಾವನ್ನಪ್ಪಿದ್ದಾರೆ. ಕಾಸರಗೋಡಿನಲ್ಲಿ ಎಂಟು ಮನೆ ಗಳುಕುಸಿದುಬಿದ್ದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಪ್ರದೇಶದಲ್ಲೂ ವರ್ಷಧಾರೆ: ಮಧ್ಯಪ್ರದೇಶದಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಸಿಯೋನಿ, ಮಾಂಡ್ಲಾ, ಬಾಲಾಘಾಟ್, ದಿನದೋರಿ ಜಿಲ್ಲೆಗ ಳಲ್ಲಿ “ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.. ಜಬಲ್ ಪುರ್ ಸೇರಿದಂತೆ ಏಳು ಜಿಲ್ಲೆಗಳಲ್ಲಿ “ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ