ಜನವರಿಯಿಂದ 332 ಟೆಕ್‌ ಕಂಪೆನಿಗಳಿಂದ ಉದ್ಯೋಗಿಗಳಿಗೆ ಗೇಟ್‌ಪಾಸ್‌

ವರ್ಷಾರಂಭದಲ್ಲೇ 1 ಲಕ್ಷ ಮಂದಿ ವಜಾ

Team Udayavani, Feb 11, 2023, 7:45 AM IST

ಜನವರಿಯಿಂದ 332 ಟೆಕ್‌ ಕಂಪೆನಿಗಳಿಂದ ಉದ್ಯೋಗಿಗಳಿಗೆ ಗೇಟ್‌ಪಾಸ್‌

ಹೊಸದಿಲ್ಲಿ: ಈ ವರ್ಷದ ಜನವರಿಯಿಂದ ಇಲ್ಲಿಯವರೆಗೆ 332 ಟೆಕ್‌ ಕಂಪೆನಿಗಳು ಬರೋಬ್ಬರಿ 1,00,746 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿವೆ. ವೆಚ್ಚ ತಗ್ಗಿಸುವ ಉದ್ದೇಶದಿಂದ ಮತ್ತು ಸಂಭಾವ್ಯ ಆರ್ಥಿಕ ಹಿಂಜರಿಕೆಯ ಆತಂಕದಿಂದ ಈ ಕ್ರಮ ಕೈಗೊಂಡಿವೆ.

ವರದಿಯೊಂದರ ಪ್ರಕಾರ, ಗೂಗಲ್‌, ಮೈಕ್ರೋಸಾಫ್ಟ್, ಸೇಲ್ಸ್‌ ಫೋರ್ಸ್‌, ಅಮೆಜಾನ್‌ ಸಹಿತ ಅನೇಕ ದೊಡ್ಡ ಟೆಕ್‌ ಕಂಪೆನಿಗಳು 2023ರಲ್ಲಿ ತಮ್ಮ ಕಂಪೆನಿಯ ಒಟ್ಟು ಉದ್ಯೋಗಿಗಳ ಸಂಖ್ಯೆಯನ್ನು ತಗ್ಗಿಸಿವೆ. ಟೆಕ್‌ ದೈತ್ಯ ಗೂಗಲ್‌ ಅತೀ ಹೆಚ್ಚು ಅಂದರೆ 12,000 ಉದ್ಯೋಗಿಗಳನ್ನು ವಜಾಗೊಳಿಸಿವೆ. ಇದು ಕಂಪೆನಿಯ ಒಟ್ಟು ಉದ್ಯೋಗಿಗಳ ಪೈಕಿ ಶೇ.6ರಷ್ಟು ಆಗಿದೆ. ಅದೇ ರೀತಿ ಪ್ರಮುಖವಾಗಿ ಮೈಕ್ರೋಸಾಫ್ಟ್ 10,000 ಉದ್ಯೋಗಿಗಳು, ಅಮೆಜಾನ್‌ 8,000, ಸೇಲ್ಸ್‌ಫೋರ್ಸ್‌ 8,000, ಡೆಲ್‌ 6,650, ಐಬಿಎಂ 3,900, ಸ್ಯಾಪ್‌ 3,000, ಜೂಮ್‌ 1,300, ಕಾಯಿನ್‌ಬೇಸ್‌ 950 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿವೆ.

ಯಾಹೂ ಸೇರ್ಪಡೆ: ಯಾಹೂ ಕಂಪೆನಿಯು ಈ ಸಾಲಿಗೆ ಹೊಸ ಸೇರ್ಪಡೆಯಾಗಿದೆ. 1,600 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಯಾಹೂ ಘೋಷಿಸಿದೆ. ಕಂಪೆನಿಯ ಒಟ್ಟು ಉದ್ಯೋಗಿಗಳ ಪೈಕಿ ಶೇ.20ರಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಕಂಪೆನಿ ಗುರುವಾರ ಪ್ರಕಟಿಸಿದೆ. ಮೈಕ್ರೋಸಾಫ್ಟ್ ಮಾಲಕತ್ವದ ಗಿಟ್‌ಹಬ್‌ ಕೂಡ ಮುಂದಿನ ತ್ತೈಮಾಸಿಕದಲ್ಲಿ ಒಟ್ಟು ಉದ್ಯೋಗಿಗಳ ಪೈಕಿ ಶೇ.10ರಷ್ಟು ಅಂದರೆ 300 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದೆ.

9 ತಿಂಗಳ ವೇತನ ಪರಿಹಾರ?
ಭಾರತದಲ್ಲಿ ಚೀನ ಮೂಲದ ಟಿಕ್‌ಟಾಕ್‌ಗೆ 2020ರ ಜೂನ್‌ನಲ್ಲೇ ನಿಷೇಧ ಹೇರಲಾಗಿದೆ. ಆದರೆ ಇದೀಗ ಟಿಕ್‌ಟಾಕ್‌ ಇಂಡಿಯಾ ಕಂಪೆನಿ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿದ್ದ 40 ಉದ್ಯೋಗಿಗಳನ್ನು ವಜಾಗೊಳಿಸಿದೆ. ಅವರಿಗೆ ಪರಿಹಾರವಾಗಿ ಬರೋಬ್ಬರಿ 9 ತಿಂಗಳ ವೇತನ ನೀಡಲಾಗಿದೆ ಎಂದು ಹಲವು ಮಾಧ್ಯಮಗಳಲ್ಲಿನ ವರದಿಗಳು ಹೇಳಿವೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.