ನಾಗರಹೊಳೆ ಪಕ್ಷಿ ಸಮೀಕ್ಷೆಯಲ್ಲಿ 290 ಕ್ಕೂ ಹೆಚ್ಚು ಪಕ್ಷಿ ಪ್ರಬೇಧಗಳ ಪತ್ತೆ
ಬೆಳೆ-ಜೀವಹಾನಿಯ ನಡುವೆಯೂ ಜನರ ಸಹಕಾರ ಅನನ್ಯ: ಎಪಿಸಿಸಿಎಫ್ ಮನೋಜ್ ಕುಮಾರ್
Team Udayavani, Feb 13, 2023, 10:15 PM IST
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವು 300 ಕ್ಕೂ ಹೆಚ್ಚು ಪ್ರಬೇಧಗಳಿಗೆ ಸೇರಿದ ಪಕ್ಷಿಗಳಿಗೆ ಆಶ್ರಯ ನೀಡಿರುವ ಹಸಿರು ಉದ್ಯಾನವಾಗಿದೆ ಎಂದು ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ರಾಜ್ಯ ಜಂಗಲ್ ಇನ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ಹೇಳಿದರು.
ನಾಗರಹೊಳೆ ಉದ್ಯಾನದಲ್ಲಿ ಕಳೆದ 3ದಿನದಿಂದ ನಡೆದಿದ್ದ ಪಕ್ಷಿ ಸಮೀಕ್ಷೆ ಅಭಿಯಾನ ಮುಕ್ತಾಯಗೊಂಡಿದ್ದು, ವೀರನಹೊಸಹಳ್ಳಿ ವಲಯದಲ್ಲಿ ಆಯೋಜಿಸಿದ್ದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ನಾಗರಹೊಳೆ ಅರಣ್ಯದಲ್ಲಿ ಪಕ್ಷಿ ಸಮೀಕ್ಷೆ ನಡೆಸಲು ದೇಶದ ೮ ರಾಜ್ಯಗಳಿಂದ ಪಕ್ಷಿ ಪ್ರಿಯರು ಆಗಮಿಸಿದ್ದು, ಇವರಲ್ಲಿ ಅನೇಕರಿಗೆ ಬೇರೆಲ್ಲೂ ಸಿಗದ ಅಪರೂಪದ ಪಕ್ಷಿಗಳು ಗೋಚರಿಸಿದ್ದು, ಉದ್ಯಾನವನ ಸರ್ವ ರೀತಿಯ ವನ್ಯಪ್ರಾಣಿ ಪಕ್ಷಿಗಳ ವಂಶಾಭಿವೃದ್ಧಿಗೆ ಪೂರಕವಾಗಿದೆ ಎಂದರು.
ಕೊಡುಗೆ
ನಾಗರಹೊಳೆ ಅಭಯಾರಣ್ಯದ ಅಭಿವೃದ್ಧಿಗೆ ಅರಣ್ಯದಂಚಿನ ಗ್ರಾಮಸ್ಥರ ಕೊಡುಗೆ ಅಪಾರವಾಗಿದ್ದು, ವನ್ಯಪ್ರಾಣಿಗಳ ಹಾವಳಿಗೆ ಬದುಕು ನಲುಗಿದ್ದರೂ ಅಭಯಾರಣ್ಯದ ಅಭಿವೃದ್ಧಿಗೆ ಪೂರಕ ಸಹಕಾರದಿಂದಾಗಿ ಇಂದು ನಾಗರಹೊಳೆ ಈ ಮಟ್ಟಕ್ಕೆ ಅಭಿವೃದ್ಧಿಯಾಗಿದೆ. ವನ್ಯಮೃಗಳ ದಾಳಿಗೆ ಬೆಳೆ ಮತ್ತು ಜೀವಹಾನಿ ಆದರೂ ಸ್ಥಳಿಯರು ಅರಣ್ಯ ಇಲಾಖೆಯೊಂದಿಗೆ ಸಕಾರಾತ್ಮಕ ಸ್ಪಂದನೆ ಇಲಾಖೆಗೆ ನೈತಿಕ ಸ್ಥೈರ್ಯ ಎನ್ನುವುದು ಗಮನಾರ್ಹ ಎಂದರು.
ಹಾರ್ನ್ ಬಿಲ್
ದಾಂಡೇಲಿ ಅರಣ್ಯದಲ್ಲಿ ಗೋಚರಿಸುವ ಹಾರ್ನ್ ಬಿಲ್ (ಕೊಂಬಿನ ಹಕ್ಕಿ) ಅಳಿವಿನಂಚಿನಲ್ಲಿದ್ದು, ಈ ಪಕ್ಷಿ ಸಂರಕ್ಷಣೆಗೆ ಇಲಾಖೆ ಆಧ್ಯತೆ ನೀಡಿದೆ. ಹುಲಿ ಸಂರಕ್ಷಣೆ ಕಾಯ್ದೆ ಅಡಿಯಲ್ಲೇ ಈ ಪಕ್ಷಿಯನ್ನು ಸೇರಿಸಿದ್ದು, ಅಕ್ರಮ ಭೇಟೆ ಮಾಡಿದಲ್ಲಿ ಉಗ್ರ ಶಿಕ್ಷೆಗೆ ಗುರಿಯಾಗಲಿದ್ದಾರೆ ಎಂದರು.
ಹುಲಿ ಯೋಜನೆ ನಿರ್ದೇಶಕ ಮತ್ತು ಪಕ್ಷಿ ಸಮೀಕ್ಷೆ ಅಭಿಯಾನದ ರುವಾರಿ ಹರ್ಷಕುಮಾರ್ ಚಿಕ್ಕನರಗುಂದ ಮಾತನಾಡಿ ಮೂರು ದಿನದ ಪಕ್ಷಿ ಸಮೀಕ್ಷೆ ಅಭಿಯಾನಕ್ಕೆ 700 ಸ್ವಯಂ ಸೇವಕರು ನೊಂದಣಿಯಾಗಿದ್ದು, ಈ ಪೈಕಿ 130 ಜನರನ್ನು ಆಯ್ಕೆ ಮಾಡಲಾಗಿತ್ತು. ಅವರಲ್ಲಿ 118 ಸ್ವಯಂ ಸೇವಕರು ಭಾಗವಹಿಸಿದ್ದರು, ಸ್ವಯಂಸೇವಕರ ಮನವಿಯಂತೆ ಮುಂದಿನ ಸಮೀಕ್ಷೆಯಲ್ಲಿ ಪ್ರತಿಬೀಟ್ಗೆ ಇಬ್ಬರು ಸ್ವಯಂಸೇವಕರನ್ನು ನಿಯೋಜಿಸಲು ಪ್ರಯತ್ನಿಸಲಾಗುವುದೆಂದರು.
ಕಳೆದ ಬಾರಿ 260, ಈಬಾರಿ 290 ಪ್ರಬೇಧ ದಾಖಲು
೮೬೪ ಚದರ ಕಿ.ಮಿ. ವ್ಯಾಪ್ತಿಯ ನಾಗರಹೊಳೆಯನ್ನು 8 ವಲಯಗಳನ್ನಾಗಿ ವಿಭಾಗಿಸಿದ್ದು 91 ಬೀಟ್ ಗಳಲ್ಲಿ118 ಸ್ವಯಂ ಸೇವಕರ ತಂಡ ರಚಿಸಿ ಇಲಾಖೆ ಸಿಬಂದಿಯೊಂದಿಗೆ ಸಮೀಕ್ಷೆಗೆ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಈ ಸಮೀಕ್ಷೆಯಲ್ಲಿ 290 ಪ್ರಬೇಧಕ್ಕೆ ಸೇರಿದ ಪಕ್ಷಿಗಳು ಗುರುತಿಸಿ ಇ–ಬರ್ಡ್ಆಪ್ ನಲ್ಲಿ ದಾಖಲಿಸಲಾಗಿದೆ. ಕಳೆದ ಸಾಲಿನಲ್ಲಿ 260, ಪ್ರಬೇಧಕ್ಕೆ ಸೇರಿದ ಪಕ್ಷಿಗಳು ದಾಖಲಾಗಿದ್ದವು ಎಂದರು.
ಕಾರ್ಯಕ್ರಮದಲ್ಲಿ ಪಕ್ಷಿ ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಸ್ವಯಂ ಸೇವಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಎಸಿಎಫ್. ಎಸಿಎಫ್ ದಯಾನಂz, ನ್ಯಾಚುರಲಿಸ್ಟ್ ಗೋಪಿ, ಹಲವು ಸ್ವಯಂಸೇವಕರು ಅಭಿಪ್ರಾಯ ಹಂಚಿಕೊಂಡರು. ಎಲ್ಲ 8 ವಲಯಗಳ ಆರ್ಎಫ್ಓ ಗಳು ಮತ್ತು ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ