ಮುಹೂರ್ತ ನಡೆಸಿದ ಅಮೃತ ಶಿಲೆಯ ಮಾಹಿತಿ ಫಲಕಕ್ಕೆ ಬೆಳ್ಳಿ ಹಬ್ಬ! ಸೇತುವೆ ?

ಮಣಿಪುರ ಪೊಸಮಠದ ಬಳಿ ಪಾಪನಾಶಿನಿ ಹೊಳೆಗೆ ಸೇತುವೆ...ಸಾರ್ವಜನಿಕರ ಆಕ್ರೋಶ

Team Udayavani, Mar 11, 2023, 3:07 PM IST

bridge …

ಕಟಪಾಡಿ: ಮಣಿಪುರ ಗ್ರಾ.ಪಂ. ವ್ಯಾಪ್ತಿಯಲ್ಲಿನ ಪೊಸಮಠದ ಬಳಿ ಪಾಪನಾಶಿನಿ ಹೊಳೆಗೆ ಸೇತುವೆ ನಿರ್ಮಿಸಲು 1997ರ ನ.2ರಂದು ಮುಹೂರ್ತ ನಡೆಸಿದ ಅಮೃತ ಶಿಲೆಯ ಮಾಹಿತಿ ಫಲಕವು ಕಂಡು ಬಂದಿದ್ದು, ಈ ಅಮೃತ ಫಲಕ ಮಾತ್ರ ಬೆಳ್ಳಿಹಬ್ಬ ಆಚರಿಸುವಂತಾಗಿದೆ. ಪಾಪನಾಶಿನಿ ತೀರ್ಥ ಕ್ಷೇತ್ರ ದೇವರಗಿರಿ ಪ್ರದೇಶದಲ್ಲಿ ಇಂದಿಗೂ ಸೇತುವೆ ನಿರ್ಮಾಣಗೊಂಡಿಲ್ಲ. ಫ‌ಲಕದಲ್ಲಿ ಅಂದಿನ ಬಂದರು, ಮೀನುಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕೆ. ಜಯಪ್ರಕಾಶ್‌ ಹೆಗ್ಡೆ, ಶಾಸಕರಾಗಿದ್ದ ಯು.ಆರ್‌ ಸಭಾಪತಿ, ವಸಂತ ವಿ. ಸಾಲಿಯಾನ್‌ ಅವರ ಹೆಸರುಗಳಿವೆ. ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿರುವರೆಂದೂ, ಅಮೃತ ಶಿಲೆಯ ಕೊಡುಗೆ ಕೆ. ವಾಮನ ಬಾಳಿಗ (ಹೊಟೇಲ್‌ ದ್ವಾದಶಿ ಕಲ್ಸಂಕ) ಎಂದೂ ಇದೆ.

ಮಣಿಪುರದ ಪೊಸಮಠ ಹಾಗೂ ಕುಂಜಾರುಗಿರಿಗೆ ಈ ಸಂಪರ್ಕ ಸೇತುವೆಯ ಮೂಲಕ ನೇರ ಸಂಪರ್ಕವನ್ನು ಸಾಧಿಸಲು ಸಾಧ್ಯವಾಗಲಿದೆ. ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದ ಕುಂಜಾರಮ್ಮನ ಜಳಕಕ್ಕೆ ಬರುವ ಸಂದರ್ಭ ಇಂದಿಗೂ ಒಂದು ಕಿ.ಮೀ. ನಷ್ಟು ದೂರವನ್ನು ದೋಣಿ ಬಳಸಿಯೇ ಪಾಪನಾಶಿನಿ ಹೊಳೆಯನ್ನು ದಾಟಿ ಪೊಸಮಠಕ್ಕೆ ದೇವರು ಬರುವ ಸಂಪ್ರದಾಯ ಚಾಲ್ತಿಯಲ್ಲಿದೆ. ದೇವರ ಸೇವೆಗೆ ದೆಂದೂರು, ಮಣಿಪುರ ಭಾಗದ ಸುಮಾರು 400ಕ್ಕೂ ಅಧಿಕ ಭಕ್ತರು ಇಂದಿಗೂ ಇಲ್ಲಿ ಜಮಾಯಿಸುತ್ತಾರೆ. 25 ವರ್ಷಗಳ ಹಿಂದೆಯೇ ಇಲ್ಲಿ ಸೇತುವೆಯು ನಿರ್ಮಾಣಗೊಂಡಿದ್ದಲ್ಲಿ ಮಣಿಪುರ ಮತ್ತು ಕುರ್ಕಾಲು ಉಭಯ ಗ್ರಾಮಗಳಲ್ಲಿ ಮತ್ತಷ್ಟು ಅಭಿವೃದ್ಧಿಯು ಕಾಣಲು ಸಾಧ್ಯವಾಗುತ್ತಿತ್ತು.

ಆದರೆ ಸೇತುವೆ ನಿರ್ಮಾಣಗೊಳ್ಳದೆ ಅಭಿವೃದ್ಧಿ ಕುಂಠಿತಗೊಳ್ಳುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಎಚ್ಚೆತ್ತು ಈ ಭಾಗದಲ್ಲಿ ಸುಸಜ್ಜಿತ ಸಂಪರ್ಕ ಸೇತುವೆಯನ್ನು ನಿರ್ಮಿಸಿ ಶಾಲೆಯ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ದೇವರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲತೆಯನ್ನು ಕಲ್ಪಿಸಿ ಗ್ರಾಮದ ಅಭಿವೃದ್ಧಿಯಲ್ಲಿ ಕೈ ಜೋಡಿಸುವಂತೆ ನಾಗರಿಕರು ಆಗ್ರಹಿಸುತ್ತಿದ್ದಾರೆ.

ಈ ಸೇತುವೆಯಿಂದ ಕುರ್ಕಾಲು ಗ್ರಾಮದ ಕುಂಜಾರುಗಿರಿಗೆ ನೇರ ಸಂಪರ್ಕ ಸಾಧ್ಯವಾಗಲಿದ್ದು ಆನಂದತೀರ್ಥ ವಿದ್ಯಾಲಯಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಹತ್ತಿರದ ದಾರಿಯಾಗಲಿದೆ. ಕುಂಜಾರುಗಿರಿಯಿಂದ ಸುತ್ತು ಬಳಸಿ ಉಡುಪಿ, ಮಣಿಪಾಲಕ್ಕೆ ಸಾಗುವ ಬದಲಿಗೆ ಬಹಳಷ್ಟು ಹತ್ತಿರದ ಸಂಪರ್ಕ ಸೇತುವೆಯಾಗಲಿದೆ.
-ಸಂತೋಷ್‌ ಶೆಟ್ಟಿ,ಸದಸ್ಯರು, ಮಣಿಪುರ ಗ್ರಾ.ಪಂ

ವೆಂಟೆಡ್‌ ಡ್ಯಾಂ ನಿರ್ಮಾಣ ಆಗಬೇಕೆಂಬ ಜನರ ಬೇಡಿಕೆ ಇದ್ದಲ್ಲಿ ಸಣ್ಣ ನೀರಾವರಿ ಇಲಾಖೆಯು ಹೊಸ ಪ್ರಸ್ತಾವನೆ ಮೂಲಕ ಯೋಜನೆಯನ್ನು ರೂಪಿಸಲಾಗುತ್ತದೆ.
-ಮಮತಾ, ಎ.ಇ., ಸಣ್ಣ ನೀರಾವರಿ ಇಲಾಖೆ

ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಬಂದಲ್ಲಿ ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಆದ್ಯತೆಯ ಮೇರೆಗೆ ಶಾಸಕರ ಶಿಫಾರಸ್ಸಿನಂತೆ ಯೋಜನೆಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲು ಮುಂದಾಗಲಿದ್ದೇವೆ.

-ಸವಿತಾ, ಎ.ಇ. ಲೋಕೋಪಯೋಗಿ ಇಲಾಖೆ

~ವಿಜಯ್‌ ಆಚಾರ್ಯ ಉಚ್ಚಿಲ

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.