ಬಹುನಿರೀಕ್ಷಿತ ಮಂಗಳೂರು ವೀಕೆಂಡ್‌ ಸ್ಟ್ರೀಟ್‌ ಫೆಸ್ಟಿವಲ್‌ ಆಯೋಜನೆ ವಿಳಂಬ,ಚುನಾವಣೆಯೂ ಅಡ್ಡಿ

ಪ್ರವಾಸೋದ್ಯಮ, ವ್ಯಾಪಾರ ವಹಿವಾಟು ಪ್ರೋತ್ಸಾಹಿಸುವ ಉದ್ದೇಶ

Team Udayavani, Feb 27, 2023, 10:53 AM IST

street

ಮಂಗಳೂರು: ಕೋವಿಡ್‌ ಅನಂತರದ ದಿನಗಳಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ಮತ್ತು ಜಿಲ್ಲೆಯ ವ್ಯಾಪಾರ ವಹಿವಾಟನ್ನು ಪ್ರೋತ್ಸಾಹಿಸುವ ಸಲುವಾಗಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಲು ಉದ್ದೇಶಿಸಿದ್ದ ಬಹುನಿರೀಕ್ಷಿತ ವೀಕೆಂಡ್‌ ಸ್ಟ್ರೀಟ್‌ ಫೆಸ್ಟಿವಲ್‌ ಮತ್ತಷ್ಟು ವಿಳಂಬವಾಗಲಿದೆ. ಹಿಂದಿನ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಮಂಗಳೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯ ಭಾಗವಾಗಿ ನಗರದ ಹಂಪನಕಟ್ಟೆ ಕ್ಲಾಕ್‌ಟವರ್‌ ಬಳಿ ಯಿಂದ ಎ.ಬಿ.ಶೆಟ್ಟಿ ವೃತ್ತದ ವರೆಗಿನ ಲೂಪ್‌ ರಸ್ತೆ (ಏಕಮುಖ ರಸ್ತೆ)ಯ ಎರಡೂ ಬದಿಯಲ್ಲಿ ವಾರಾಂತ್ಯದಲ್ಲಿ ಸ್ಟ್ರೀಟ್‌ ಫೆಸ್ಟಿವಲ್‌ ಆಯೋಜನೆಗೆ ಉದ್ದೇಶಿಸಿದ್ದರು. ಆಹಾರ ಮಳಿಗೆಗಳು, ಕರಕುಶಲ ವಸ್ತುಗಳ ಮಾರಾಟ, ಮಕ್ಕಳಿಗೆ ಮನರಂಜನೆ ಹೀಗೆ ಒಂದು ಸಂತೆಯ ಮಾದರಿಯಲ್ಲಿ ಸ್ಟ್ರೀಟ್‌ ಫೆಸ್ಟಿವಲ್‌ ಆಯೋಜಿ ಸುವುದು ಉದ್ದೇಶವಾಗಿತ್ತು.

ಈ ಕುರಿತು ಜಿಲ್ಲಾ ಪ್ರವಾಸೋದ್ಯಮ ಸಮಿತಿ ಸಭೆಯಲ್ಲೂ ಚರ್ಚೆಯಾಗಿ ಕೆಲವೊಂದು ಸಲಹೆ ಸೂಚನೆ ಮೂಲಕ ಯೋಜನೆ ಸಿದ್ಧವಾಗಿತ್ತು. ಆದರಂತೆ ಕದ್ರಿ ಪಾರ್ಕ್‌ನ ನೂತನ ಸ್ಮಾರ್ಟ್‌ ರಸ್ತೆ, ಕ್ಲಾಕ್‌ ಟವರ್‌ ಲೂಪ್‌ ರಸ್ತೆ ಈ ಎರಡೂ ಕಡೆಗಳಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಒಂದು ವಾರ ಕದ್ರಿಯಲ್ಲಿ ಆಯೋಜನೆಗೊಂಡರೆ ಇನ್ನೊಂದು ವಾರ ಕ್ಲಾಕ್‌ ಟವರ್‌ ಈ ರೀತಿ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಚರ್ಚೆಗಳು ನಡೆದಿತ್ತು. ಆದರೆ ಅನಂತರದ ಅನುಷ್ಠಾನದಲ್ಲಿ ವಿಳಂಬವಾಗಿದ್ದು, ಜಿಲ್ಲಾಧಿಕಾರಿಯವರೂ ವರ್ಗಾವಣೆಗೊಂಡರು.

ಚುನಾವಣೆ ಹಿನ್ನೆಲೆ ಸದ್ಯ ಅಸಾಧ್ಯ

ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಟಿ ಯಿಂದ ಪ್ರತಿವರ್ಷ ಜಿಲ್ಲಾಡಳಿತ ವತಿಯಿಂದ ಆಯೋಜನೆಗೊಳ್ಳುತ್ತಿದ್ದ ಕರಾವಳಿ ಉತ್ಸವ- ಬೀಚ್‌ ಉತ್ಸವ ಈ ಬಾರಿಯೂ ಆಯೋಜನೆಗೊಂಡಿಲ್ಲ. ವೀಕೆಂಡ್‌ ಸ್ಟ್ರೀಟ್‌ ಫೆಸ್ಟಿವಲ್‌ ಆಯೋಜನೆ ಮೂಲ ಕವಾದರೂ ಪ್ರವಾಸಿಗರನ್ನು ಆಕರ್ಷಿಸಲು ಉದ್ದೇಶಿ
ಸಲಾಗಿತ್ತಾದರೂ ಅದೂ ಸಾಧ್ಯವಾಗಿಲ್ಲ. ನೂತನ ಜಿಲ್ಲಾಧಿಕಾರಿಯವರು ಈ ನಿಟ್ಟಿನಲ್ಲಿ ಉತ್ಸುಕತೆ ತೋರಿಸಿದ್ದರು. ಆದರೆ ಇನ್ನು ಕೆಲವೇ ದಿನಗಳಲ್ಲಿ ನೀತಿ ಸಂಹಿತೆ ಜಾರಿ ಯಾಗುವುದರಿಂದ ಮತ್ತು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಯವರು ಈಗಾಗಲೇ ನೀತಿ ಸಂಹಿತೆಗೆ ಒಳಪಟ್ಟಿರುವುದರಿಂದ ಆಯೋಜನೆ ದೂರದ ಮಾತು. ಚುನಾವಣೆ ಮುಗಿಯುತ್ತಲೇ ಮುಂಗಾರು ಆರಂಭವಾಗಲಿದ್ದು, ಮಳೆ ನಿಂತ ಬಳಿಕ ಅಂದಿನ ಪರಿಸ್ಥಿತಿಗೆ ಅನುಗುಣವಾಗಿ ಆಯೋಜನೆ ನಿರ್ಧಾರವಾಗಲಿದೆ.

ಸ್ಟ್ರೀಟ್‌ ಫೆಸ್ಟಿವಲ್‌ ಆಯೋಜನೆಗೆ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಉದ್ದೇಶಿಸಿದೆ. ಆದರೆ ಮುಂದಿನ ದಿನಗಳಲ್ಲಿ ಚುನಾವಣೆ ಇರುವುದರಿಂದ ಸದ್ಯ ಆಯೋಜನೆ ಕಷ್ಟ. ಚುನಾವಣೆ ನಂತರದಲ್ಲಿ ಮಳೆಗಾಲ ಆರಂಭವಾಗುವುದರಿಂದ ಮಳೆಗಾಲ ಮುಗಿದ ಬಳಿಕ ಆಯೋಜಿಸುವ ಚಿಂತನೆಯಿದೆ.
-ಮಾಣಿಕ್ಯ, ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ

ವಿದೇಶಗಳಲ್ಲಿ ಹೆಚ್ಚು ಪ್ರಸಿದ್ಧಿ

ಸ್ಟ್ರೀಟ್‌ ಫೆಸ್ಟಿವಲ್‌ ಪರಿಕಲ್ಪನೆ ವಿದೇಶಗಳಲ್ಲಿ ಹೆಚ್ಚು ಪ್ರಸಿದ್ಧವಾಗಿದೆ. ಭಾರತದ ಕೆಲವು ನಗರಗಳಲ್ಲೂ ಇತ್ತೀಚಿನ ದಿನಗಳಲ್ಲಿ ವಿವಿಧ ಮಾದರಿಗಳಲ್ಲಿ ಸ್ಟ್ರೀಟ್‌ ಫೆಸ್ಟಿವಲ್‌ನಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮಂಗಳೂರಿಗೆ ಹೊಸದಾಗಿರುವ ಈ ಕಾರ್ಯಕ್ರಮ ಪ್ರತಿ ವಾರಾಂತ್ಯ ಆಯೋಜನೆಗೊಳ್ಳಬೇಕಾದ ಅಗತ್ಯವಿದೆ. ಈಗಾಲೇ ಹೊಟೇಲ್‌ ಮಾಲಕರ ಸಂಘ ಸಹಿತ, ವಿವಿಧ ಸಂಘ – ಸಂಸ್ಥೆಗಳು ಸ್ಟ್ರೀಟ್‌ ಫೆಸ್ಟಿವಲ್‌ನಲ್ಲಿ ಭಾಗವಹಿಸಲು ಉತ್ಸುಕತೆ ತೋರಿಸಿವೆ ಎನ್ನುತ್ತಾರೆ ಅಧಿಕಾರಿಗಳು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.