Mandya ಟಿಕೆಟ್ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ
ಬಿಜೆಪಿ ಅಧ್ಯಕ್ಷ ನಡ್ಡಾ ಭೇಟಿ; ನಿಶ್ಚಿಂತರಾಗಿರಿ ಎಂಬ ಭರವಸೆ ಸಿಕ್ಕಿದೆ ಎಂದ ಸುಮಲತಾ ಅಂಬರೀಷ್
Team Udayavani, Mar 19, 2024, 6:23 AM IST
ಬೆಂಗಳೂರು: ಖಾಲಿ ಇರುವ ಕ್ಷೇತ್ರಗಳಿಗೆ ನನ್ನ ಹೆಸರು ಜೋಡಿಸುವ ಕೆಲಸ ಮಾಧ್ಯಮಗಳಲ್ಲಿ ಆಗುತ್ತಿದೆ. ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಜೆ.ಪಿ.ನಡ್ಡಾ ಅವರನ್ನು ದಿಲ್ಲಿಯಲ್ಲಿ ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾತ್ರಿ ಸಿಇಸಿ ಸಭೆ ಬಳಿಕ ಏನಾಗಲಿದೆ ಎಂಬುದನ್ನು ನೋಡುತ್ತೇನೆ. ನಾಳೆಯವರೆಗೆ ಇಲ್ಲೇ ಇರಲು ಹೇಳಿದ್ದಾರೆ. ಅವಕಾಶ ಸಿಕ್ಕರೆ ಅಮಿತ್ ಶಾ ಅವರನ್ನೂ ಭೇಟಿ ಮಾಡುತ್ತೇನೆ ಎಂದರು.
ನನ್ನನ್ನು ಮನವೊಲಿಸಲು ಕರೆದಿರಲಿಲ್ಲ. ನನ್ನ ಮನಸ್ಸಿ ನಲ್ಲಿರುವ ಅನುಮಾನಗಳನ್ನು ಬಗೆಹರಿಸಲು ಕರೆದಿದ್ದರು. ಒಂದು ಸುದೀರ್ಘ ಚರ್ಚೆ ನಡೆ ಯಿತು. ಮಂಡ್ಯ ಹಾಗೂ ಕರ್ನಾಟಕ ರಾಜಕಾರಣದ ಬಗ್ಗೆ ಚರ್ಚೆ ಆಯಿತು. ನನ್ನ ಕಾಳಜಿಯನ್ನು ವ್ಯಕ್ತಪಡಿಸಿದ್ದೇನೆ. ಅವರೂ ಒಂದಿಷ್ಟು ಸಲಹೆಗಳನ್ನು ಕೊಟ್ಟರು. ಇನ್ನೂ ಅಂತಿಮ ನಿರ್ಧಾರವಾಗಿಲ್ಲ. ನೀವು ನಿಶ್ಚಿಂತರಾಗಿರಿ ಪಕ್ಷ ನಿಮ್ಮೊಂದಿಗಿದೆ ಎಂಬ ಭರವಸೆ ಕೊಟ್ಟಿದ್ದಾರೆ ಎಂದರು.
ಮೋದಿ ಅವರಿಗೆ ನಿಮ್ಮ ಬಗ್ಗೆ ತುಂಬಾ ಭರವಸೆ, ಒಳ್ಳೆಯ ಗೌರವ ಇದೆ. ನಿಮ್ಮಂತಹ ನಾಯಕರು ಪಕ್ಷಕ್ಕೆ ಬೇಕು ಎಂಬ ಅಭಿಪ್ರಾಯ ಇದೆ. ನಮ್ಮ ನಿರ್ಧಾರ ಅಂತಿಮಗೊಂಡ ಬಳಿಕ ತಿಳಿಸುತ್ತೇವೆ ಎಂದು ನಡ್ಡಾ ತಿಳಿಸಿದ್ದಾರೆ. ಬಿಜೆಪಿ ಸ್ಥಾನ ಉಳಿಸಿಕೊಳ್ಳಬೇಕು ಎಂಬುದು ನನ್ನ ನಿಲುವು. ವಿಧಾನಸಭೆ ಚುನಾವಣೆಯಲ್ಲಿ ಕಷ್ಟಪಟ್ಟು ಮಂಡ್ಯದಲ್ಲಿ ಪಕ್ಷ ಕಟ್ಟುತ್ತೇವೆ. ಮಂಡ್ಯಕ್ಕೆ ಬಿಜೆಪಿಯ ಸಂಸದರೇ ಸಿಗುವುದಕ್ಕೆ ಅವಕಾಶವಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದರು.
ಚಿಕ್ಕಬಳ್ಳಾಪುರದಿಂದ ಕಣಕ್ಕೆ ಇಳಿಯುವಂತೆ ಸಲಹೆ ವ್ಯಕ್ತವಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ಸಾಕಷ್ಟು ಊಹಾಪೋಹ ಇದೆ. ಯಾವ ಕ್ಷೇತ್ರ ಖಾಲಿ ಇದ್ದರೂ ನನ್ನ ಹೆಸರು ಜೋಡಿಸುವ ಕೆಲಸ ಮಾಧ್ಯಮಗಳಲ್ಲಿ ಆಗುತ್ತಿದೆ ಎಷ್ಟೇ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ