Mulki ಮಹಿಳೆಯರ ಸರ ಅಪಹರಣಕಾರನ ಬಂಧನ
Team Udayavani, Nov 3, 2023, 10:16 PM IST
ಮೂಲ್ಕಿ: ಇಲ್ಲಿಯ ಠಾಣಾ ವ್ಯಾಪ್ತಿಯ ಹಳೆಯಂಗಡಿಯ ಪಾವಂಜೆಯ ಬಳಿ ಕಳೆದ ಅ. 14ರಂದು ಮಹಿಳೆಯೊರ್ವರ ಕುತ್ತಿಗೆಯ ಚಿನ್ನದ ಸರ ಅಪಹರಣ ಮಾಡಲು ಯತ್ನಿಸಿದ ಹಾಗೂ ಉಡುಪಿಯ ಕಟಪಾಡಿಯಲ್ಲಿ ಮಹಿಳೆಯೊರ್ವರ ಕುತ್ತಿಗೆಯ ಹವಳದ ಚಿನ್ನದ ಸರವನ್ನು ಅಪಹರಿಸಿದ ಪ್ರಕರಣದ ಆರೋಪಿಯನ್ನು ಮೂಲ್ಕಿ ಪೊಲೀಸರ ತಂಡ ಬಂಧಿಸಿದ್ದು, ಆತ ಉಪಯೋಗಿಸುತ್ತಿದ್ದ ದ್ವಿಚಕ್ರ ವಾಹನವನ್ನು ಮತ್ತು ಚಿನ್ನದ ಸರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿ ವಿನಯ ಪ್ರಸಾದ್ (30) ಬಂಧಿತ ಯುವಕ. ಈತ ಮಂಗಳೂರು ಮಾಲೆಮಾರ್ ಬಳಿಯ ಬಾಡಿಗೆ ಮನೆಯಲ್ಲಿ ವಾಸ ಇದ್ದ. ಕಳವಾದ, ಪೊಲೀಸರು ವಶಕ್ಕೆ ಪಡೆದ ಸೊತ್ತಿನ ಒಟ್ಟು ಮೌಲ್ಯ 2.53 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ದಾರ್ಥ ಗೋಯಲ್ ಮತ್ತು ದಿನೇಶ್ ಕುಮಾರ್ ಅವರ ನಿರ್ದೇಶನದಲ್ಲಿ ಎಸಿಪಿ ಮಂಗಳೂರು ಉತ್ತರ ಮನೋಜ್ ಕುಮಾರ್ ಅವರ ನೇತೃತ್ವದಲ್ಲಿ ಮೂಲ್ಕಿ ಇನ್ಸ್ಪೆಕ್ಟರ್ ವಿಧ್ಯಾಧರ್ ಬಾಯ್ಕೆರಿಕಾರ್ ಹಾಗೂ ಪಿಎಸ್ಐ ವಿನಾಯಕ ಬಾವಿಕಟ್ಟೆ ಮತ್ತು ಮಾರತಿ ಪಿ. ಹಾಗೂ ಇತರ ಸಿಬಂದಿಗಳ ತಂಡ ಆರೋಪಿಯನ್ನು ಬಂಧಿಸಿ ಕಳವಿನ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ಲಾಸ್ಟಿಕ್ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್!
Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್ ಜೆಹಾದ್ ತಡೆಗೆ ಸಹಾಯವಾಣಿ
Saudi Arabia ದಮಾಮ್ನಲ್ಲಿ ಅಗ್ನಿ ದುರಂತ; ಮೂಡುಬಿದಿರೆ ಮೂಲದ ಉದ್ಯಮಿಯ ಮಗು ಸಾವು
Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್’
ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ
MUST WATCH
ಹೊಸ ಸೇರ್ಪಡೆ
Insults ; ಮತ್ತೆ ಆರ್ ಸಿಬಿ, ಕೊಹ್ಲಿಗೆ ಟಾಂಗ್ ನೀಡಿ ಆಕ್ರೋಶಕ್ಕೆ ಗುರಿಯಾದ ರಾಯುಡು
ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್
Pendrive Case: ಮೇ 31ಕ್ಕೆ ‘SIT’ ಮುಂದೆ ವಿಚಾರಣೆಗೆ ಹಾಜರಾಗ್ತೀನಿ… ಪ್ರಜ್ವಲ್ ರೇವಣ್ಣ
Viral: ಪ್ರಿಯತಮೆ ಭೇಟಿ ಆಗಲು ಹೆಣ್ಣಿನ ವೇಷ ಧರಿಸಿ ಮನೆಗೆ ಬಂದು ಸಿಕ್ಕಿಹಾಕಿಕೊಂಡ ಪ್ರಿಯಕರ.!
Tragedy: ಕೆರೆಗೆ ಈಜಲು ಹೋದ ಬಾಲಕ ನೀರುಪಾಲು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ