ಮುಂಬಯಿ ರೈಲುಗಳ ನಿರೀಕ್ಷೆಯಲ್ಲಿ ಕರಾವಳಿ ಜಿಲ್ಲೆಗಳ ಪ್ರಯಾಣಿಕರು


Team Udayavani, Oct 12, 2020, 1:25 PM IST

ಮುಂಬಯಿ ರೈಲುಗಳ ನಿರೀಕ್ಷೆಯಲ್ಲಿ ಕರಾವಳಿ ಜಿಲ್ಲೆಗಳ ಪ್ರಯಾಣಿಕರು

ಮಂಗಳೂರು: ಮಂಗಳೂರಿನಿಂದ ಮುಂಬಯಿಗೆ ರೈಲು ಸಂಚಾರ ಸ್ಥಗಿತಗೊಂಡು 7 ತಿಂಗಳು ಸಮೀಪಿಸುತ್ತಿದ್ದು, ಕರಾವಳಿ ಕರ್ನಾಟಕದ  ಪ್ರಮುಖ ಸಂಚಾರ ವ್ಯವಸ್ಥೆಯೊಂದು ಸ್ತಬ್ಧಗೊಂಡಿದೆ.

ರೈಲ್ವೇ ಮಂಡಳಿ ದೇಶದ ವಿವಿಧ ಭಾಗಗಳಲ್ಲಿ ಆರಂಭಿಸಲುದ್ದೇಶಿಸಿರುವ 200 ವಿಶೇಷ ರೈಲುಗಳಲ್ಲಿ ಮಂಗಳೂರು-ಮುಂಬಯಿ ಮಾರ್ಗವನ್ನು ಸೇರಿಸಿ ಅವಕಾಶ ಕಲ್ಪಿಸಬೇಕು ಎಂಬ ಬೇಡಿಕೆ ವ್ಯಕ್ತವಾಗಿದೆ. ಈ ವಿಚಾರವಾಗಿ ಸೆಂಟ್ರಲ್‌ ರೈಲ್ವೇ ವಲಯ ಕೂಡ ರೈಲ್ವೇ ಮಂಡಳಿಗೆ ಪ್ರಸ್ತಾವನೆ ಕಳುಹಿಸಿದೆ.

ಕೊರೊನಾ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್‌ – ಮುಂಬಯಿ ಲೋಕಮಾನ್ಯ ತಿಲಕ್‌ ಮತ್ಸ éಗಂಧ ಎಕ್ಸ್‌ ಪ್ರಸ್‌ ಹಾಗೂ ಮಂಗಳೂರು ಜಂಕ್ಷನ್‌- ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಸ್‌ ರೈಲು ಮಾ. 21ರಿಂದ ಸ್ಥಗಿತಗೊಂಡಿದೆ. ಪ್ರಸ್ತುತ ಮಂಗಳೂರು ಜಂಕ್ಷನ್‌ ನಿಲ್ದಾಣದ ಮೂಲಕ ತಿರುವನಂತಪುರ-ಕುರ್ಲಾ ವಿಶೇಷ ರೈಲು (ರೈಲು ನಂ. 06345/346) ಹಾದು ಹೋಗುತ್ತಿದೆ. ಕರಾವಳಿ ಕರ್ನಾಟಕದ ಜನರು ಈ ರೈಲು ಸೇವೆಯನ್ನು ಅವಲಂಬಿಸಬೇಕಾಗಿದೆ.

ಇದನ್ನೂ ಓದಿ:ಸಚಿವರುಗಳ ದಿಢೀರ್ ಖಾತೆ ಬದಲಾವಣೆ: ಬಿಜೆಪಿ ನಾಯಕರಲ್ಲಿ ಅಸಮಾಧಾನ, ರಾಮುಲು ಬೇಸರ

ಹಬ್ಬಗಳ ಹಿನ್ನೆಲೆಯಲ್ಲಿ ಅ. 15ರಿಂದ ನವೆಂಬರ್‌ 30ರ ವರೆಗೆ ದೇಶದೆಲ್ಲಡೆ 200 ವಿಶೇಷ ರೈಲುಗಳನ್ನು ಓಡಿಸಲು ಮಂಡಳಿ ನಿರ್ಧರಿಸಿದೆ. ಪ್ರಥಮ ಹಂತವಾಗಿ 39 ವಿಶೇಷ ರೈಲುಗಳಿಗೆ ಅನುಮತಿಸಲಾಗಿದ್ದು, ಇದರಲ್ಲಿ ಕರ್ನಾಟಕ ಭಾಗದಿಂದ ಯಶವಂತಪುರದಿಂದ ಕಾಮಕ್ಯ, ಬಾರ್ಮಾರ್‌, ಹೌರಾ ಹಾಗೂ ಬೆಂಗಳೂರು -ಚೆನ್ನೈ ಸೇರಿದಂತೆ 5 ರೈಲುಗಳಿವೆ.

ವಿಶೇಷ ರೈಲು ಸಂಚಾರಕ್ಕೆ ಅವಕಾಶ
ಪ್ರಸ್ತುತ ಮಂಗಳೂರು ಸೆಂಟ್ರಲ್‌ನಿಂದ ಚೆನ್ನೈ ಎಕ್ಸ್‌ ಪ್ರಸ್‌ ಮಾತ್ರ ಸಂಚರಿಸುತ್ತಿದೆ. ಬೆಂಗಳೂರು ವಿಶೇಷ ರೈಲನ್ನು ಪ್ರಯಾಣಿಕರ ಕೊರತೆ ನೆಪವೊಡ್ಡಿ ಸ್ಥಗಿತಗೊಳಿಸಲಾಗಿದೆ. ಕೊರೊನಾ ಪೂರ್ವದಲ್ಲಿ ಮಂಗಳೂರು ಜಂಕ್ಷನ್‌ನಿಂದ ಸಂಚರಿಸುತ್ತಿದ್ದ ಮಂಗಳೂರು ಜಂಕ್ಷನ್‌-ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಸ್‌ ರೈಲನ್ನು ರೈಲು ಸಂಚಾರ ಸಾಮಾನ್ಯಸ್ಥಿತಿಗೆ ಬರುವವರೆಗೆ ವಿಶೇಷ ರೈಲು ಆಗಿ ಓಡಿಸಬಹುದಾಗಿದೆ ಎಂಬ ಬೇಡಿಕೆಯನ್ನು ಕರಾವಳಿ ಕರ್ನಾಟಕದ ರೈಲ್ವೇ ಬಳಕೆದಾರರು ಮಂಡಿಸಿದ್ದಾರೆ. ಕೊಂಕಣ ಮಾರ್ಗದ ವ್ಯಾಪ್ತಿಯನ್ನು ಹೊಂದಿರುವ ಕೇಂದ್ರ ರೈಲ್ವೇ ಕೂಡ ಹಬ್ಬಗಳ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಮುಂಬಯಿಗೆ ಕೋವಿಡ್‌-19 ವಿಶೇಷ ರೈಲು ಸಂಚಾರದ ಪ್ರಸ್ತಾವನೆಯನ್ನು ರೈಲ್ವೇ ಮಂಡಳಿಯ ಮುಂದಿರಿಸಿದೆ.

ಇದನ್ನೂ ಓದಿ:ಪ್ರಯಾಣಿಕರ ಸೆಳೆಯಲು ನಮ್ಮ ಮೆಟ್ರೋ ಪ್ಲಾನ್‌ : ಪೇಟಿಎಂ, ಗೂಗಲ್‌ಪೇ ನಲ್ಲೇ ರಿಚಾರ್ಜ್‌

ವಿಶೇಷ ರೈಲಿನ ಆವಶ್ಯಕತೆ
ಕೊರೊನಾ ಕಾರಣದಿಂದಾಗಿ ಉದ್ಯೋಗ, ವಾಣಿಜ್ಯ ಚಟುವಟಿಕೆಗಳನ್ನು ತೊರೆದು ಊರಿಗೆ ಬಂದಿದ್ದವರು ಮರಳಿ ಮುಂಬಯಿಯತ್ತ ತೆರಳಲು ಆರಂಭಿಸಿದ್ದಾರೆ. ಅದುದರಿಂದ ವಿಶೇಷ ರೈಲು ಸಂಚಾರ ಅತೀ ಅವಶ್ಯವಾಗಿದೆ.

ಮಂಗಳೂರಿನಿಂದಲೂ ವಿಶೇಷ ರೈಲುಗಳ ಸಂಚಾರ ಅಗತ್ಯವಿದೆ. ರೈಲ್ವೇ ಮಂಡಳಿ ಆರಂಭಿಸಲುದ್ದೇಶಿಸಿರುವ 200 ರೈಲುಗಳಲ್ಲಿ ಮಂಗಳೂರು-ಮುಂಬಯಿ ಸೇರಿದಂತೆ ಮಂಗಳೂರು ಭಾಗಕ್ಕೂ ಕೆಲವು ವಿಶೇಷ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ರೈಲ್ವೇ ಸಚಿವರನ್ನು ಕೋರಲಾಗುವುದು.
– ನಳಿನ್‌ ಕುಮಾರ್‌ ಕಟೀಲು, ಸಂಸದರು, ದ.ಕ.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.