ಆನ್‌ಲೈನ್‌ನತ್ತ ನಗರಸಭೆ : ದೂರು ಕೊಡಲು ಸಾಮಾಜಿಕ ಜಾಲತಾಣ ಖಾತೆ


Team Udayavani, Feb 28, 2022, 2:11 PM IST

NAGARA-SABHE

ಪುತ್ತೂರು : ಇಂಟರ್‌ನೆಟ್‌ ಆಧಾರಿತ ಸೇವೆ ಪ್ರಧಾನವಾಗುತ್ತಿರುವ ಈ ಕಾಲಘಟ್ಟದಲ್ಲಿ ಪುತ್ತೂರು ನಗರಸಭೆಗೆ ಸಂಬಂಧಿಸಿದ ದೂರು ದುಮ್ಮಾನಗಳನ್ನು ದಾಖಲಿಸಲೆಂದು ಜನಹಿತ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದ್ದು ಹಲವು ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಿಗೆ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯಾದ್ಯಂತ ಸ್ಥಳೀಯ ಆಡಳಿತಗಳು ಈಗಾಗಲೇ ಹೆಚ್ಚಿನ ಸೇವೆಗಳನ್ನು ಆನ್‌ಲೈನ್‌ ಮೂಲಕ ನೀಡಲು ಮುಂದಡಿ ಇಟ್ಟಿದ್ದು ಅದರ ಭಾಗವಾಗಿ ಪುತ್ತೂರು ನಗರಸಭೆಯು ಹತ್ತಾರು ಸೌಲಭ್ಯಗಳನ್ನು ಆನ್‌ಲೈನ್‌ ಮೂಲಕ ನೀಡಲು ನಿರ್ಧರಿಸಿದೆ.

ದೂರು ಸಲ್ಲಿಸಲು ಹಲವು ಖಾತೆ
ಸಾರ್ವಜನಿಕರಿಗೆ ದೂರುಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ಜನಹಿತ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಇದರೊಂದಿಗೆ ಫೇಸುºಕ್‌, ಟ್ವಿಟರ್‌, ವಾಟ್ಸ್‌ಆ್ಯಪ್‌, ಇನ್‌ಸ್ಟಾಗ್ರಾಮ್‌, ವೆಬ್‌ ಸೈಟ್‌, ಸ್ವತ್ಛತಾ ಆ್ಯಪ್‌, ಜನಹಿತ ಮೊಬೈಲ್‌ ಆ್ಯಪ್‌ ಹಾಗೂ ದೂರವಾಣಿ ಮುಖಾಂತರ ದೂರುಗಳನ್ನು ಸಲ್ಲಿಸಿ ದೂರಿನ ಸ್ಥಿತಿಯನ್ನು ಪರಿಶೀಲಿಸಲು ಅವಕಾಶ ನೀಡಲಾಗಿದೆ. ಹೀಗಾಗಿ ಜನರು ಸಮಸ್ಯೆಗಳನ್ನು ಹೊತ್ತು ನಗರಸಭೆಗೆ ಬರುವ ಬದಲು ಕುಳಿತಲ್ಲಿಯೇ ಆಡಳಿತದ ಗಮನ ಸೆಳೆಯಲು ಅವಕಾಶ ನೀಡಲಾಗಿದೆ.

ಉದ್ದಿಮೆ ಪರವಾನಿಗೆ ಸ್ವಯಂ ನವೀಕರಣ
ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಉದ್ದಿಮೆಗಳ ಪರವಾನಿಗೆಗಳ ನವೀಕರಣವನ್ನು ಸರಳಗೊಳಿಸಲು ಎಲ್ಲ ಉದ್ದಿಮೆದಾರರಿಗೆ ಪರವಾನಿಗೆಯನ್ನು ಪಡೆಯಲು ಸುಲಭವಾಗುವಂತೆ ವ್ಯಾಪಾರ ತಂತ್ರಾಂಶದಲ್ಲಿ ಪರವಾನಿಗೆಯ ಸ್ವಯಂ ನವೀಕರಣವನ್ನು ಜಾರಿಗೆ ತರಲಾಗಿದೆ. ಇದರ ಅನ್ವಯ ಪರವಾನಿಗೆಗೆ ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಸಲ್ಲಿಸಿ ಆನ್‌ಲೈನ್‌ ಮುಖಾಂತರ ಶುಲ್ಕವನ್ನು ಪಾವತಿಸಿ, ಆನ್‌ಲೈನ್‌ನಲ್ಲಿಯೇ ಪರವಾನಿಗೆ ಪ್ರತಿಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೊಸದಾಗಿ ಪರವಾನಿಗೆ ಶುಲ್ಕಕ್ಕೆ ಅರ್ಜಿ ಸಲ್ಲಿಸುವವರು ಮಾತ್ರ ಕಚೇರಿಗೆ ಬಂದು ನೋಂದಣಿ ಮಾಡಿಕೊಂಡರೆ ಸಾಕು. ಒಂದು ವರ್ಷದ ಅನಂತರ ನವೀಕರಣದ ಸಂದರ್ಭದಲ್ಲಿ ಆನ್‌ಲೈನ್‌ ಮೂಲಕ ಸ್ವಯಂ ನವೀಕರಣ ಮಾಡಿಕೊಳ್ಳಲು ಇಲ್ಲಿ ಅವಕಾಶ ಇದೆ.

ಆಸ್ತಿ ತೆರಿಗೆ, ಕಟ್ಟಡ ಪರವಾನಗಿ ಹಾಗೂ ಜನಹಿತ ತಂತ್ರಾಂಶ
ಸಾರ್ವಜನಿಕರಿಗೆ ತೆರಿಗೆ ಮತ್ತು ಇತರ ಶುಲ್ಕಗಳನ್ನು ಪಾವತಿಸಲು ಅನೂಕೂಲವಾಗುವಂತೆ ಇ-ಸ್ವೀಕೃತಿ ಎಂಬ ಶೀರ್ಷಿಕೆಯಡಿಯಲ್ಲಿ ತಂತ್ರಾಂಶವನ್ನು ಗಣಕೀಕರ ಣಗೊ ಳಿಸಲಾಗಿದೆ. ಸಾರ್ವ ಜನಿಕರು ಆನ್‌ಲೈನ್‌ ಮುಖಾಂತರ ತೆರಿಗೆಯನ್ನು ಪಾವತಿಸಲು ತಂತ್ರಾಂಶವನ್ನು ಉಪಯೋಗಿಸಬಹುದಾಗಿದೆ. ರಾಜ್ಯ ಸರಕಾರವು ನಿರ್ಮಾಣ್‌- 2 ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು ಕಟ್ಟಡ ಪರವಾನಗಿಯನ್ನು ಆನ್‌ಲೈನ್‌ ಮುಖಾಂತರ ಪಡೆಯಬಹುದು.

ಆನ್‌ಲೈನ್‌ನಲ್ಲಿಯೇ ಅನುಮತಿ
ನಗರ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು, ಬ್ಯಾನರ್‌ ಹಾಗೂ ಇತರ ಪ್ರಚಾರವನ್ನು ತಡೆಯಲು ಹಾಗೂ ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಸಲ್ಲಿಸಿ ಆನ್‌ಲೈನಲ್ಲಿಯೇ ಅನುಮತಿಯನ್ನು ಪಡೆಯಲು ಅವಕಾಶ ನೀಡಲಾಗಿದೆ. ಇದರಿಂದ ನಗರದಲ್ಲಿ ಅನುಮತಿ ರಹಿತವಾಗಿ ಪ್ರಚಾರ ಸಾಮಗ್ರಿ ಅಳವಡಿಕೆ ನಿಯಂತ್ರಣ ಸಾಧ್ಯವಾಗಿ ನಗರಸಭೆಗೆ ಆದಾಯ ದೊರೆಯಲಿದೆ.

ಶೀಘ್ರ ಕೈಪಿಡಿ ಬಿಡುಗಡೆ
ಎಲ್ಲ ಪರವಾನಿಗೆಗಳನ್ನು ಡಿಜಿಟಲ್‌ ಸಹಿ ಮೂಲಕ ಸಾರ್ವಜನಿಕರಿಗೆ ನೀಡಲಾಗುತ್ತಿದೆ. ಸಾರ್ವಜನಿಕರಿಗೆ ತಂತ್ರಾಂಶವನ್ನು ಉಪಯೋಗಿಸಿ ವಿವಿಧ ಸೇವೆಗಳ ಮಾಹಿತಿಯನ್ನು ನಗರಸಭೆ ಕಾರ್ಯಾಲಯದ ವೆಬ್‌ಸೈಟ್‌ ಮುಖಾಂತರ ನೀಡಲಾಗುವುದು ಹಾಗೂ ಸಾರ್ವಜನಿಕರ ಉಪಯೋಗಕ್ಕೆ ಮಾಡಲಾಗಿರುವ ತಂತ್ರಾಂಶಗಳ ಕೈಪಿಡಿಯನ್ನು ಮುಂದಿನ ದಿನಗಳಲ್ಲಿ ಬಿಡುಗಡೆಗೊಳಿಸಲಾಗುವುದು.
– ಜೀವಂಧರ್‌ ಜೈನ್‌, ನಗರಸಭೆ ಅಧ್ಯಕ್ಷ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.