ಕೋವಿಡ್‌ ನಿಯಮಾವಳಿಯಂತೆ 20ರಂದು ಮುರುಡೇಶ್ವರ ದೇವರ ರಥೋತ್ಸವ

ಕೋವಿಡ್‌ ನಿಯಮಾವಳಿಯಂತೆ ಜಾತ್ರೆ ನಡೆಸಲು ಎಸಿ ಮಮತಾದೇವಿ ಸಾರ್ವಜನಿಕರಿಗೆ ಸೂಚನೆ

Team Udayavani, Jan 12, 2022, 3:50 PM IST

ಕೋವಿಡ್‌ ನಿಯಮಾವಳಿಯಂತೆ 20ರಂದು ಮುರುಡೇಶ್ವರ ದೇವರ ರಥೋತ್ಸವ

ಭಟ್ಕಳ: ಮುರುಡೇಶ್ವರದ ಓಲಗ ಮಂಟಪದಲ್ಲಿ ಜ.20 ರಂದು ಮಹತೋಭಾರ ಶ್ರೀ ಮುರುಡೇಶ್ವರ ದೇವರ ರಥೋತ್ಸವಕ್ಕೆ ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಸಹಾಯಕ ಆಯುಕ್ತೆ ಮಮತಾದೇವಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೋವಿಡ್‌ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಿ ನಡೆಸಲು ಅನುಮತಿಸಲಾಯಿತು.

ಈ ಬಾರಿಯ ಮುಡೇìಶ್ವರ ದೇವರ ಜಾತ್ರೆ ಅತ್ಯಂತ ವಿಶೇಷವಾಗಿದ್ದು ಸುಮಾರು 400 ವರ್ಷಗಳ ನಂತರ ಆರ್‌.ಎನ್‌. ಶೆಟ್ಟಿಯವರ ಕುಟುಂಬದವರು ನೀಡಿದ ಹೊಸ ಬ್ರಹ್ಮರಥದಲ್ಲಿ ದೇವರು ಕುಳಿತುಕೊಳ್ಳಲಿದ್ದಾರೆ. ಈ ಒಂದು ಕ್ಷಣಕ್ಕಾಗಿ ಊರ ನಾಗರಿಕರು, ಭಕ್ತರು ಕಾತರದಿಂದ ಕಾಯುತ್ತಿದ್ದಾರೆ ಎಂದು ತಿಳಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್‌. ಮಾತನಾಡಿ, ಸರಕಾರ ಈಗಾಗಲೇ ಹಲವಾರು ನಿರ್ಬಂಧ ವಿಧಿಸಿದೆ, ಯಾವುದೇ ಜಾತ್ರೆ, ಸಭೆ ಸಮಾರಂಭವನ್ನು ಮಾಡಲು ಸರಕಾರ ಅನುಮತಿ ನೀಡುತ್ತಿಲ್ಲ. ಇಲ್ಲಿ ಜಾತ್ರೆಯಲ್ಲಿ
ಸಾವಿರಾರು ಜನ ಸೇರುವುದರಿಂದ ಕೋವಿಡ್‌ ಹರಡುವಿಕೆಗೆ ಕಾರಣವಾಗಬಹುದು ಎಂದರು.

ಇದರಿಂದ ಸಮಾಧಾನಗೊಳ್ಳದ ನಾಗರಿಕರು ಯಾವುದೇ ಕಾರಣಕ್ಕೂ ಈ ವರ್ಷದ ಜಾತ್ರೆ ನಿಲ್ಲಿಸಲು ಸಾಧ್ಯವಿಲ್ಲ, ಸರಕಾರ ಯಾವುದೇ ಷರತ್ತು ವಿಧಿಸಿದರೂ ಸಹ ಅದರಂತೆಯೇ ನಡೆದುಕೊಂಡು ಜಾತ್ರೆ ನಡೆಸಲು ನಾವು ಸಿದ್ಧರಿದ್ದೇವೆ. ಜನರು ಸೇರಬಾರದು ಎನ್ನುವ ಕುರಿತು ಸಾಕಷ್ಟು ಪ್ರಚಾರ ಪಡಿಸುತ್ತೇವೆ. ಜಾತ್ರೆಗೆ ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಜನರನ್ನು ಸೇರಿಸಿ
ಧಾರ್ಮಿಕ ವಿಧಿ-ವಿಧಾಗಳ ಮೂಲಕ ಆಚರಿಸುತ್ತೇವೆ. ತಾವು ಸರಕಾರದ ನಿಯಮಾವಳಿಗಳನ್ನೇ ಮುಂದಿಟ್ಟು ಜಾತ್ರೆಗಳನ್ನು ಬಂದ್‌ ಮಾಡುವುದು ಸರಿಯಲ್ಲ, ಇಲ್ಲಿ ಜನರ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದರಲ್ಲದೇ ರಾಜಕೀಯ ಸಭೆ ಸಮಾರಂಭಗಳಿಗೆ ಸರಕಾರ ಅವಕಾಶ ನೀಡುವಾಗ ಜಾತ್ರೆಗೆ ನಿಬಂಧನೆಯೊಂದಿಗೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದರು.

ಇದಕ್ಕೆ ಉತ್ತರಿಸಿದ ಉಪ ವಿಭಾಗಾಧಿಕಾರಿಗಳು ಜಾತ್ರೆಯ ವಿಧಿ ವಿಧಾನಗಳನ್ನು ಆರಂಭಿಸಿ ಜಾತ್ರೆಯನ್ನು ನಡೆಸಲು ಅನುಮತಿಸಲಾಗುವುದು. ಆದರೆ ಜಾತ್ರೆಯಲ್ಲಿ ನೂರು ಜನರಿಗಷ್ಟೇ ಅವಕಾಶ ಮಾಡಿಕೊಡಬೇಕು ಎನ್ನುವ ಶರತ್ತನ್ನು ವಿಧಿಸಿದರು. ಇದಕ್ಕೂ ಕೂಡಾ ಆಕ್ಷೇಪ ವ್ಯಕ್ತಪಡಿಸಿದ ಸಭೆಯಲ್ಲಿ ಒಮ್ಮೆ ಗೊಂದಲ ಮೂಡಿತು. ಜಾತ್ರೆಯಲ್ಲಿ 100 ಜನರಿಗಷ್ಟೇ ಅವಕಾಶ ಎಂದರೆ ಹೇಗೆ?  ನಾವು ಜನರನ್ನು ಹೇಗೆ ತಡೆಯುವುದು, ಕೇವಲ ಗ್ರಾಪಂ ಸದಸ್ಯರು, ಊರಿನ ಹಿರಿಯರು ಸೇರಿದರೆ ನೂರರ ಗಡಿ ದಾಟುವಾಗ ನಿಯಂತ್ರಣ ಕಷ್ಟ ಸಾಧ್ಯ ಎನ್ನುವ ಮಾತು
ಕೇಳಿ ಬಂತು. ಕೊನೆಗೂ ಜನರ ಒತ್ತಡಕ್ಕೆ ಮಣಿದ ಅಧಿಕಾರಿಗಳು ರಥೋತ್ಸವದ ವೇಳೆ ಸಾಕಷ್ಟು ಅಂತರ ಕಾಯ್ದುಕೊಳ್ಳುವುದು, ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಅಗತ್ಯಕ್ಕೆ ತಕ್ಕಷ್ಟು ಜನ ಮಾತ್ರ ಜಾತ್ರೆ ಸಮಯದಲ್ಲಿದ್ದು ಉಳಿದವರು ದರ್ಶನ ಮಾಡಿ ತಕ್ಷಣ ಹೊರಡುವುದು ಇತ್ಯಾದಿ ಶರತ್ತನ್ನ ಪಾಲಿಸುವಂತೆ ಸೂಚಿಸಿ ಸಭೆಯನ್ನು ಮುಕ್ತಾಯ ಗೊಳಿಸಿದರು.

ಡಿವೈಎಸ್‌ಪಿ ಕೆ.ಯು. ಬೆಳ್ಳಿಯಪ್ಪ, ಗ್ರಾಮಾಂತರ ಸರ್ಕಲ್‌ ಇನ್ಸ್‌ಪೆಕ್ಟರ್‌ ಮಹಾಬಲೇಶ್ವರ ನಾಯ್ಕ, ಮುರ್ಡೇಶ್ವರ ಸಬ್‌ ಇನ್ಸ್‌ಪೆಕ್ಟರ್‌ ರವೀಂದ್ರ ಬಿರಾದಾರ, ತಹಶೀಲ್ದಾರ್‌ ಎಸ್‌. ರವಿಚಂದ್ರ,
ರೆವೆನ್ಯೂ ಇನ್ಸ್‌ಪೆಕ್ಟರ್‌ ಶ್ರೀನಿವಾಸ ಎಂ., ಮಾವಳ್ಳಿ-1 ಗ್ರಾಪಂ ಅಧ್ಯಕ್ಷೆ ಮಾದೇವಿ ಮೊಗೇರ, ಮಾವಳ್ಳಿ-2ರ ಅಧ್ಯಕ್ಷ ಮಹೇಶ ನಾಯ್ಕ, ಸದಸ್ಯ ಕೃಷ್ಣಾ ನಾಯ್ಕ, ರಿಕ್ಷಾ ಚಾಲಕರ ಸಂಘದ ಅಧಕ್ಷ ಸತೀಶ ನಾಯ್ಕ, ಶಂಕರ ದೇವಾಡಿಗ, ತಿಮ್ಮಪ್ಪ ನಾಯ್ಕ ಸೇರಿದಂತೆ ಗ್ರಾಪಂ ಸದಸ್ಯರು, ಊರಿನ ಹಿರಿಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.