ಮುರುಡೇಶ್ವರ ಮಹಾ ರಥೋತ್ಸವ
Team Udayavani, Jan 20, 2021, 7:15 PM IST
ಭಟ್ಕಳ: ಪ್ರತಿ ವರ್ಷ ಮಕರ ಸಂಕ್ರಮಣದ ಪುಣ್ಯ ಕಾಲದಲ್ಲಿ ಮುರುಡೇಶ್ವರ ದೇವರ ಮಹಾ ರಥೋತ್ಸವದ ಧಾರ್ಮಿಕ ವಿಧಿ
ವಿಧಾನಗಳು ಆರಂಭವಾಗಿ ಮಂಗಳವಾರ ಸಂಜೆ ಮುರುಡೇಶ್ವರ ದೇವರ ಮಹಾರಥೋತ್ಸವ ನಡೆಯಿತು.
ರಥೋತ್ಸವದ ಅಂಗವಾಗಿ ಬೆಳಗ್ಗೆ ಕಲಶ ಸ್ಥಾಪನೆ, ಅಧಿವಾಸ ಹವನ, ರಥಾಧಿವಾಸ ಹವನ ನಂತರ ದೇವರ ರಥಾರೋಹಣ ನಡೆಯಿತು.
ನಂತರ ಶಾಸಕ ಸುನಿಲ್ ನಾಯ್ಕ ಆದಿಯಾಗಿ ಊರಿನ ಮಹಾಜನತೆ ಹಾಗೂ ಭಕ್ತರು ರಥ ಕಾಣಿಕೆ ಸಲ್ಲಿಸಿದರು. ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಮುರುಡೇಶ್ವರ ದೇವರ ಮಹಾ ರಥೋತ್ಸವ ನಡೆಯಿತು. ರಥೋತ್ಸವದಲ್ಲಿ ದೇವಸ್ಥಾನದ ವ್ಯವಸ್ಥಾಪಕರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಜನಪ್ರತಿನಿಧಿಗಳು, ಸ್ಥಳೀಯ ಗ್ರಾಪಂ ಸದಸ್ಯರು, ವಿವಿಧ ಸಮಾಜದ ಮುಖಂಡರು, ಊರಿನ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್
ಏರ್ಪಡಿಸಲಾಗಿತ್ತು.
ಜ.21 ರಂದು ಚೂರ್ಣೋತ್ಸವ, ಅವಭೃತ ಸ್ನಾನ, ಧ್ವಜಾವರೋಹಣ, ಅಂಕುರಾರ್ಪಣ ನಡೆಯುವ ಮೂಲಕ ರಥೋತ್ಸವದ ಧಾರ್ಮಿಕ ವಿಧಿ ವಿಧಾನಗಳು ಮುಕ್ತಾಯಗೊಳ್ಳಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ