ರೈತರಿಗೆ ಅನ್ಯಾಯವಾಗಲು ಬಿಡಲ್ಲ: ಸಚಿವ ಮುರುಗೇಶ ನಿರಾಣಿ ಅಭಯ


Team Udayavani, Jan 17, 2021, 2:07 PM IST

ರೈತರಿಗೆ ಅನ್ಯಾಯವಾಗಲು ಬಿಡಲ್ಲ: ಸಚಿವ ಮುರುಗೇಶ ನಿರಾಣಿ ಅಭಯ

ಬಾಗಲಕೋಟೆ: ರೈತರಿಂದಲೇ ನಾನು ಬೆಳೆದವನು. ರೈತರ ಅನುಕೂಲಕ್ಕಾಗಿ ಬಾದಾಮಿ ತಾಲೂಕಿನಲ್ಲಿ ಮೂರು ಸಕ್ಕರೆ ಕಾರ್ಖಾನೆ ಆರಂಭಗೊಂಡಿವೆ. ಕೇದಾರನಾಥ ಶುಗರ್ನಿಂದ ರೈತರಿಗೆ ಬರಬೇಕಿರುವ ಬಾಕಿ ಹಣ ಕೊಡಿಸುವ ವಿಷಯದಲ್ಲಿ ನಾನೂ ಪ್ರಾಮಾಣಿಕ ಪ್ರಯತ್ನ ಮಾಡುವೆ. ರೈತರಿಗೆ ಅನ್ಯಾಯವಾಗಲು ಬಿಡಲ್ಲ ಎಂದು ನೂತನ ಸಚಿವ ಮುರುಗೇಶ ನಿರಾಣಿ ಹೇಳಿದರು.

ಬಾದಾಮಿ ತಾಲೂಕು ಕೆರಕಲಮಟ್ಟಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇದಾರನಾಥ ಶುಗರ್ ಅನ್ನು ನ್ಯಾಯ ಮಂಡಳಿಯಲ್ಲಿ ಕಾನೂನು ಬದ್ಧವಾಗಿ ಖರೀದಿ ಮಾಡಲಾಗಿದೆ. 10 ವರ್ಷದಿಂದ ಬಂದ್‌ ಆಗಿದ್ದ ಈ ಕಾರ್ಖಾನೆ ಪುನಾರಂಭಿಸಿದ್ದು, ಈ ಭಾಗದ ರೈತರಿಗೆ ಅನುಕೂಲವಾಗಿದೆ. ಎಷ್ಟೋ ಜನ ರೈತರು, ಈ ಕಾರ್ಖಾನೆ ಆರಂಭಿಸಿದ್ದಕ್ಕೆ ಸಂಭ್ರಮಪಟ್ಟಿದ್ದಾರೆ. ಆದರೆ,
ಕಾರ್ಖಾನೆಗೆ ಕಬ್ಬು ಕೊಡದ ಕೆಲವರು ಹೋರಾಟ ಮಾಡುತ್ತಿದ್ದಾರೆ ಎಂದರು.

ಅಭಿವೃದ್ಧಿಗೆ ಪೂರಕ: ನನಗೆ ಸಚಿವ ಸ್ಥಾನ ನೀಡಲು ಕಾರಣರಾದ ಮುಖ್ಯಮಂತ್ರಿ, ಪಕ್ಷದ ಕೇಂದ್ರ ಹಾಗೂ ರಾಜ್ಯ ನಾಯಕರು, ಈ ಭಾಗದ ಎಲ್ಲ ಹಿರಿಯರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಸಚಿವ ಸ್ಥಾನ ನೀಡುವ ವಿಷಯದಲ್ಲೂ ಯಾರೂ ವಿರೋಧ ಮಾಡಿಲ್ಲ. ಬಾಗಲಕೋಟೆ ಅಷ್ಟೇ ಅಲ್ಲದೇ ಅಕ್ಕ-ಪಕ್ಕದ ಜಿಲ್ಲೆಯ ಎಲ್ಲ ನಮ್ಮ ಪಕ್ಷದ ಶಾಸಕರೂ ಸಹಕಾರ ನೀಡಿದ್ದಾರೆ.
ಜಿಲ್ಲೆಗೆ ಮತ್ತೂಂದು ಸಚಿವ ಸ್ಥಾನ ಸಿಕ್ಕಿರುವುದು ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಹೇಳಿದರು. ದೇಶದಲ್ಲಿ ಸಕ್ಕರೆ ಉತ್ಪಾದನೆ ಮಾಡುವ ಉದ್ಯಮ ಸಮೂಹಗಳಲ್ಲಿ ಎಂಆರ್‌ಎನ್‌ ಉದ್ಯಮ ಸಮೂಹ 3ನೇ ಸ್ಥಾನದಲ್ಲಿದ್ದು, ದಕ್ಷಿಣ ಭಾರತದಲ್ಲಿ ಮೊದಲ
ಸ್ಥಾನದಲ್ಲಿದೆ. ಅಲ್ಲದೇ ಸಧ್ಯ 8.50 ಲಕ್ಷ ಎಥೆನಾಲ್‌ ಉತ್ಪಾದನೆಯಾಗುತ್ತಿದ್ದು, ಅದನ್ನು 26 ಲಕ್ಷ ಲೀಟರ್‌ ಗೆ ಹೆಚ್ಚಿಸುವ ಕಾರ್ಯಕ್ಕೆ ಕೇಂದ್ರ ಸಚಿವ ಅಮಿತ್‌ ಶಾ ರವಿವಾರ ಚಾಲನೆ ನೀಡಲಿದ್ದಾರೆ. ಅವರೊಂದಿಗೆ ಸಿಎಂ, ಕೇಂದ್ರ ಹಾಗೂ ರಾಜ್ಯದ ಹಲವರು ಸಚಿವರು ಆಗಮಿಸಲಿದ್ದಾರೆ ಎಂದರು.

ಇದನ್ನೂ ಓದಿ:ಕೊರೊನಾ, ಹಳದಿ ನೊಣಕ್ಕೆ ನಲುಗಿದ ಅಲ್ಫೋನ್ಸೋ: ಧೈರ್ಯ ಕಳೆದುಕೊಂಡ ದಲ್ಲಾಳಿಗಳು

ಗ್ಯಾಸ್‌-ಪೆಟ್ರೋಲ್‌ ಉತ್ಪಾದನೆ: ಆತ್ಮನಿರ್ಭರ ಯೋಜನೆಯಡಿ ದೇಶೀಯವಾಗಿ ಎಲ್ಲ ಉತ್ಪನಗಳಾಗಬೇಕು ಎಂಬುದು ನನ್ನ ಹೆಮ್ಮೆಯ ಪ್ರಧಾನಿ ಮೋದಿ ಅವರ ಆಶಯ. ಅವರ ಆಶಯ-ಕಲ್ಪನೆಯಂತೆ ಎಂಆರ್‌ಎನ್‌ ಸಮೂಹ ಮುನ್ನಡೆಯುತ್ತಿದೆ. ನಮ್ಮಲ್ಲಿ ಅಡುಗೆ ಅನಿಲ, ಅತ್ಯುತ್ತಮ ಗುಣಮಟ್ಟದ ಪೆಟ್ರೋಲ್‌ ಉತ್ಪಾದನೆಯೂ ಆಗಲಿದೆ. ಸಕ್ಕರೆ ಉತ್ಪಾದನೆಯ ಜತೆಗೆ
ಉಪ ಉತ್ಪನ್ನಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು. ಇದರಿಂದ ಆದಾಯ ಹೆಚ್ಚಲಿದ್ದು, ಶೇ.70ರಷ್ಟು ಆದಾಯ ರೈತರಿಗೆ ನೀಡಲು ನಮ್ಮ ಉದ್ಯಮ ಸಮೂಹ ನಿರ್ಧರಿಸಿದೆ. ಇದರಿಂದ ರೈತರ ಆದಾಯವೂ ದ್ವಿಗುಣಗೊಳ್ಳಲಿದೆ ಎಂದು ತಿಳಿಸಿದರು.

ರೈತರಿಗೆ ವರದಾನ: ಈ ಭಾಗದಲ್ಲಿ ಎಥೆನಾಲ್‌ ಕಾರ್ಖಾನೆ  ಸ್ಥಾಪಿಸುವುದರಿಂದ ರೈತರಿಗೆ ವರದಾನವಾಗಲಿದೆ. ರೈತರ ಉತ್ಪನಗಳು ತಕ್ಷಣಕ್ಕೆ ಮಾರಾಟವಾಗದಿದ್ದರೆ ಹಾಳಾಗುತ್ತವೆ. ಹಾನಿಯಾದ ಉತ್ಪನ್ನಗಳಿಂದಲೂ ಎಥೆನಾಲ್‌ ಉತ್ಪಾದನೆಗೆ ಅವಕಾಶವಿದೆ. ಹೈಟೆಕ್‌ ತಂತ್ರಜ್ಞಾನದೊಂದಿಗೆ ಈ ಕಾರ್ಖಾನೆ ಆರಂಭಗೊಳ್ಳುತ್ತಿದೆ. ಜಿಲ್ಲೆಯ ರೈತರಿಗೆ ಇದೊಂದು ಸುವರ್ಣ ಅವಕಾಶವೆಂದು ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.