ಜರ್ಮನ್: ಧಾರ್ಮಿಕ ಕೇಂದ್ರ, ಮ್ಯೂಸಿಯಂ ತೆರೆಯಲು ಅನುಮತಿ
Team Udayavani, May 2, 2020, 2:47 PM IST
ಜರ್ಮನಿ: ಜರ್ಮನ್ನಲ್ಲೂ ಸೋಂಕು ಪ್ರಸರಣ ಕಡಿಮೆಯಾದ ಹಿನ್ನೆಲೆಯಲ್ಲಿ ಸರಕಾರ ಲಾಕ್ಡೌನ್ ನಿರ್ಬಂಧದಲ್ಲಿ ಮತ್ತಷ್ಟು ಸಡಿಲಿಕೆ ಮಾಡಿದೆ.
ಸದ್ಯ ದೇಶದಲ್ಲಿ ಸೋಂಕು ಪ್ರಸರಣ ಪ್ರಮಾಣ ಶೇ.1.0ಕ್ಕಿಂತ ಕಡಿಮೆ ಇದ್ದು, ಮರಣ ಪ್ರಮಾಣದಲ್ಲಿ ಶೇ. 4ರಷ್ಟು ಕಡಿತವಾಗಿದೆ. ಈ ಹಿನ್ನೆಲೆ ದೇಶದಲ್ಲಿನ ಲಾಕ್ಡೌನ್ ನಿಯಮಗಳನ್ನು ಸಡಿಲಗೊಳಿಸುತ್ತಿದ್ದು, ಧಾರ್ಮಿಕ ಕೇಂದ್ರ, ಮ್ಯೂಸಿಯಂ ಹಾಗೂ ಮೃಗಾಲಯಗಳನ್ನು ತೆರೆಯಲು ಸಮ್ಮತಿಸಲಾಗಿದೆ.
ನೈರ್ಮಲ್ಯ ಕಾಪಾಡಿಕೊಳ್ಳಿ
ಸೋಂಕು ಹರಡುವುದನ್ನು ತಡೆಗಟ್ಟಲು ನಿಗದಿತ ಮಾರ್ಗಸೂಚಿಗಳನ್ನು ಪಾಲನೆ ಮಾಡುವುದು ಕಡ್ಡಾಯ ಎಂದಿರುವ ಸರಕಾರ, ಧಾರ್ಮಿಕ ಕೇಂದ್ರ, ಮ್ಯೂಸಿಯಂ ಹಾಗೂ ಮೃಗಾಲಯಗಳ ಪ್ರವೇಶದ್ವಾರದಲ್ಲಿ ಸ್ಯಾನಿಟೇಜರ್ ಬಳಕೆ ಮಾಡುವಂತೆ ಸೂಚಿಸಲಾಗಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ್ದು, ಎಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆಯೂ ಆದೇಶ ಹೊರಡಿಸಿದೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳಿ
ಈಗಾಗಲೇ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮುಂದಿನ ಹಂತದಲ್ಲಿ ರೆಸ್ಟೋರೆಂಟ್ಗಳು ಮತ್ತು ಬಾರ್ಗಳನ್ನು ತೆರೆಯಲು ಅನುಮತಿನ ನೀಡಬೇಕೋ ಬೇಡವೋ ಎಂಬುದನ್ನು ಮೇ 6ರಂದು ನಡೆಯಲಿರುವ ಸಭೆಯಲ್ಲಿ ನಿರ್ಧರಿಸಲಾಗುತ್ತದೆ ಎಂದು ಸರಕಾರ ಹೇಳಿದೆ.
ಕೆಲ ವಾರಗಳಿಂದ ಬಂದ್ ಆಗಿದ್ದ ಮಕ್ಕಳ ಆಟದ ಮೈದಾನಗಳನ್ನು ಹಾಗೂ ಪಾರ್ಕ್ಗಳನ್ನು ತೆರೆಯಲು ಸರಕಾರ ಅನುಮತಿ ನೀಡಿದ್ದು, ಸೋಂಕು ತಗುಲದಂತೆ ಜಾಗ್ರತೆ ವಹಿಸುವಂತೆ ಪೋಷಕರಿಗೆ ಸೂಚಿಸಿದೆ.
ಕೋವಿಡ್-19ನಿಂದ ದೇಶಕ್ಕೆ ಎದುರಾಗಿರುವ ಕಷ್ಟಗಳನ್ನು ಪರಿಹರಿಸಲು 10 ಮಿಲಿಯನ್ (ಜರ್ಮನ್ ರೂಪಾಯಿ ಮೌಲ್ಯ) ಮೊತ್ತದ ಆರ್ಥಿಕ ನೆರವನ್ನು ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ