ಮುಸ್ಲಿಂ ಕಲಾವಿದನಿಂದ ಶ್ರೀರಾಮ ಜಪ
Team Udayavani, Aug 6, 2020, 2:28 PM IST
ಗದಗ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರುತ್ತಿರುವುದರಿಂದ ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಹೀಗಾಗಿ ಹಿಂದೂಗಳು ವಿವಿಧ ದೇವಸ್ಥಾಗಳಲ್ಲಿ ಹೋಮ, ಹವನ ಹಾಗೂ ಜಪತಪಗಳಲ್ಲಿ ಮುಳುಗಿದ್ದರೆ, ನಗರದ ಮುಸ್ಲಿಂ ಸಮಾಜದ ಹಿರಿಯ ಕಲಾವಿದರೊಬ್ಬರು ಆಂಜನೇಯ ಹಾಗೂ ಮಂಡಲದಲ್ಲಿ ಶ್ರೀರಾಮನ ಪಾದಗಳನ್ನು ಚಿತ್ರಿಸುವ ಮೂಲಕ
ಸೌಹಾರ್ದತೆ ಮೆರೆದಿದ್ದಾರೆ.
ನಗರದ ಅಮರೇಶ್ವರ ಕಾಲೋನಿಯ ಮುನಾಫ್ ಹರ್ಲಾಪುರ ಎಂಬುವರು ಪುಟ್ಟ ಹಾಳೆಯಲ್ಲಿ ಮಂಡಲದ ಮಧ್ಯೆ ಶ್ರೀ ರಾಮನ ಪಾದಗಳ ಚಿತ್ರ ಬಿಡಿಸಿ, ಸುತ್ತಲು ಜೈ ಶ್ರೀರಾಮ್ ಎಂದು ಬರೆದಿದ್ದಾರೆ. ಜೊತೆಗೆ ರಾಮ ಭಕ್ತ ಹನುಮನನ್ನು ಬಿಡಿಸುವ ಮೂಲ ರಾಮಲಲ್ಲಾ ಜಪ ಮಾಡಿ, ಸಂಭ್ರಮಿಸಿದ್ದಾರೆ. ಕಲಾವಿದ ಮುನಾಫ್ ಹರ್ಲಾಪುರ ಅವರು ಈ ಹಿಂದೆಯೂ ವಿವಿಧೆ ಹಬ್ಬ,
ಹರಿದಿನಗಳ ಸಂದರ್ಭದಲ್ಲಿ ದೇವರು, ಭಾರತೀಯ ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವ ಚಿತ್ರಗಳನ್ನು ಬಿಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮುನಾಫ್ ಹರ್ಲಾಪುರ, ಕಲೆಗೆ ಧರ್ಮ, ಜಾತಿಗಳೆಂಬುದಿಲ್ಲ. ಅದು ಎಲ್ಲವನ್ನೂ ಮೀರಿದೆ. ಕಲೆಯ
ಮೂಲಕ ಜನರಲ್ಲಿ ಸೌಹಾರ್ದತೆ ಬೆಸೆಯುವುದು ಇದರ ಹಿಂದಿನ ಉದ್ದೇಶ. ಈ ಹವ್ಯಾಸದಿಂದ ಆನಂದವಾಗುತ್ತದೆ ಎನ್ನುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್