“ಅನರ್ಹ ಶಾಸಕರನ್ನು ಸೋಲಿಸುವುದೇ ನನ್ನ ಗುರಿ’
Team Udayavani, Nov 15, 2019, 5:10 AM IST
ಬೆಂಗಳೂರು: ಮೈತ್ರಿ ಸರಕಾರ ಪತನಗೊಳ್ಳಲು ಕಾರಣರಾದ ಹದಿನೈದು ಅನರ್ಹ ಶಾಸಕರನ್ನು ಸೋಲಿಸುವುದೇ ನನ್ನ ಮೊದಲ ಗುರಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಪತ್ರಕರ್ತರ ಜತೆ ಮಾತನಾಡಿದ ಅವರು, ನನಗೆ ಕಾಂಗ್ರೆಸ್ ಅಥವಾ ಸಿದ್ದರಾಮಯ್ಯ ಅವರು ಶತ್ರು ಅಲ್ಲ. ಸಿದ್ದರಾಮಯ್ಯ ಅವರು ಏನು ಬೇಕಾದರೂ ಹೇಳಿ ಕೊಳ್ಳಲಿ, ರಾಜಕೀಯವಾಗಿ ನಮಗೆ ವೈರತ್ವ ಇರಬಹುದು. ಆದರೆ ಉಪ ಚುನಾವಣೆಯಲ್ಲಿ ಅನರ್ಹರನ್ನು ಸೋಲಿಸಲು ಏನೆಲ್ಲ ಕಾರ್ಯತಂತ್ರ ಮಾಡಬಹುದೋ ಅವೆಲ್ಲವನ್ನೂ ಮಾಡು ತ್ತೇನೆ ಎಂದು ತಿಳಿಸಿದರು.
ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿಕೊಂಡು ಬರುವುದು ಮೊದಲ ಆದ್ಯತೆ. ನಮ್ಮ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವಿಲ್ಲದ ಕಡೆ ಬಿಜೆಪಿ ಟಿಕೆಟ್ ಪಡೆದಿರುವ ಅನರ್ಹರನ್ನು ಸೋಲಿಸುತ್ತೇನೆ. ಇದರಲ್ಲಿ ಯಾವುದೇ ರಾಜಿ ಇಲ್ಲ. ಆದರೆ ಕಾಂಗ್ರೆಸ್-ಬಿಜೆಪಿ ಜತೆ ಒಪ್ಪಂದದ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಶರತ್ ಬಚ್ಚೇಗೌಡರಿಗೆ ಬೆಂಬಲ ಸೂಚಿಸಿದ ತತ್ಕ್ಷಣ ಏನೇನೋ ವ್ಯಾಖ್ಯಾನ ಬರುತ್ತಿದೆ. ನಮ್ಮ ಸಮುದಾಯ ಎಂಬ ಕಾರಣಕ್ಕೆ ಬೆಂಬಲ ಸೂಚಿಸಿಲ್ಲ. ಅವರು ಮೊದಲಿನಿಂದಲೂ ಜನತಾ ಪರಿವಾರ, ಕೆಲವೊಂದು ವ್ಯತ್ಯಾಸ ಇರುವುದರಿಂದ ಬೇರೆ ಆಗಿದ್ದಾರೆ. ನಾನು ಕಳೆದ ಒಂದು ವಾರದಿಂದ ಶರತ್ ಸಂಪರ್ಕದಲ್ಲಿದ್ದೇನೆ. ಅವರು ಗೆಲ್ಲುವುದು ಖಚಿತ, ಬಯಸಿದರೆ ನಾನೂ ಒಂದು ದಿನ ಪ್ರಚಾರಕ್ಕೆ ಹೋಗುತ್ತೇನೆ ಎಂದು ಹೇಳಿದರು.
ಉಪ ಚುನಾವಣೆಯಲ್ಲಿ ಪಕ್ಷದ ಶಕ್ತಿ ನೋಡಿಕೊಂಡು ಮುಂದಿನ ಭವಿಷ್ಯ ನೋಡಿಕೊಂಡು ನಾನೂ ಕಾರ್ಯತಂತ್ರ ರೂಪಿಸುತ್ತೇನೆ. ನನ್ನೆಲ್ಲ ಶ್ರಮ ಹಾಕಿ ಪಕ್ಷದ ಅಭ್ಯರ್ಥಿಗಳ ಪರ ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ