ಪಾರಿವಾಳಕ್ಕಾಗಿ ನಡೆದ ಗಲಾಟೆಯಲ್ಲಿ ಓರ್ವ ಸಾವು, ನಾಲ್ವರು ಬಂಧನ
Team Udayavani, Jan 20, 2022, 2:07 PM IST
ಮೈಸೂರು : ಪಾರಿವಾಳದ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಮೃತಪಟ್ಟಿರುವ ಘಟನೆ ಸುಣ್ಣದ ಕೇರಿಯಲ್ಲಿ ಮಂಗಳವಾರ ರಾತ್ರಿ ಜರುಗಿದೆ. ಬಡಾವಣೆ ನಿವಾಸಿ, ಪಾಲಿಕೆಯ ಸ್ವತ್ಛತಾ ವಾಹನ ಚಾಲಕ ಗೋವಿಂದ ರಾಜು(49) ಮೃತ ವ್ಯಕ್ತಿ. ಕೃತ್ಯ ನಡೆಸಿದ ಅದೇ ಬಡಾ ವಣೆಯ ಮನೋಜ್ ನಾಯಕ್, ಜಯಶಂಕರ್, ವಿನಾಯಕ್, ಪ್ರಮೋದ್ ನಾಯಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ವಿವರ: ಸಂಕ್ರಾಂತಿ ಹಬ್ಬದಂದು ಗೋವಿಂದ ರಾಜು ಮನೆಯಲ್ಲಿ ಪಾರಿವಾಳ ಕಳ್ಳತನವಾಗಿತ್ತು. ಈ ಬಗ್ಗೆ ಗೋವಿಂದ ರಾಜು ಅವರ ಪುತ್ರ ಉಲ್ಲಾಸ್ ಅವರು ಎದುರು ಮನೆಯ
ಯುವಕರು ಕದ್ದಿದ್ದಾರೆ ಎಂಬ ಅನುಮಾನದಲ್ಲಿದ್ದರು. ಈ ಬಗ್ಗೆ ಉಲ್ಲಾಸ್ ಸ್ನೇಹಿತ ಪ್ರಮೋದ್ ಎದುರು ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದರು. ಇದರಿಂದ ಕುಪಿತಗೊಂಡ ನಾಲ್ವರು, ಪ್ರಮೋದ್ ಮೇಲೆ ಹಲ್ಲೆ ನಡೆಸಿದ್ದರು. ಇದನ್ನು ಗೋವಿಂದ ರಾಜು ಅವರು ಪ್ರಶ್ನೆ ಮಾಡಿ ಯುವಕರಿಗೆ ಬುದ್ಧಿವಾದ ಹೇಳಿದ್ದರು.
ಗೋವಿಂದರಾಜು ಅವರ ಬುದ್ಧಿವಾದಕ್ಕೆ ಕುಪಿತ ಗೊಂಡ ನಾಲ್ವರು ಮತ್ತೆ ಗೋವಿಂದ ರಾಜು ಅವರ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಈ ವೇಳೆ ತಳ್ಳಾಟ ನೂಕಾಟ ನಡೆದಿದ್ದು, ಗೋವಿಂದ ರಾಜು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಸಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ಕುಟುಂದವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಕೆ.ಆರ್. ಪೊಲೀಸ್ ಠಾಣೆ ಪೊಲೀಸರು, ನಾಲ್ವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : ನಲಪಾಡ್ ಹಲ್ಲೆ ವಿಚಾರ, ಸಿದ್ದು ಹಳ್ಳೇಗೌಡ ಹೇಳಿದ್ದೇನು ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ