ಮೈಶುಗರ್: ನಿರ್ವಹಣೆ ಮಾತ್ರ ಖಾಸಗಿಯವರಿಗೆ?


Team Udayavani, Jul 11, 2020, 7:12 AM IST

ms sugar

ಬೆಂಗಳೂರು: ಮಂಡ್ಯದ ಮೈಶುಗರ್‌ ಕಾರ್ಖಾನೆಯನ್ನು ಮಾರಲೂ ಆಗದೇ ಇಟ್ಟುಕೊಳ್ಳಲೂ ಆಗದೆ ಸಂಕಷ್ಟಕ್ಕೆ ಸಿಲುಕಿರುವ ಸರ್ಕಾರ, ಕಾರ್ಖಾನೆ ಪುನಶ್ಚೇತನಕ್ಕೆ ಪರ್ಯಾಯ ಮಾರ್ಗ ಹುಡುಕುತ್ತಿದೆ. ಖಾಸಗಿಯವರಿಗೆ ಲೀಸ್‌ ನೀಡುವ ಬದಲು ನಿರ್ವಹಣೆಗೆ ಮಾತ್ರ ನೀಡಿ, ಉಳಿದ ವ್ಯವಹಾರಗಳನ್ನು ತನ್ನ ವ್ಯಾಪ್ತಿಯಲ್ಲಿಯೇ ಉಳಿಸಿಕೊಳ್ಳಲು ಚಿಂತನೆ ನಡೆಸಿದೆ.

ಈ ಕುರಿತು ಡಿಸಿಎಂ ಗೋವಿಂದ ಕಾರಜೋಳ ಅಧ್ಯಕ್ಷತೆಯ ಸಂಪುಟ ಉಪ ಸಮಿತಿ ಒಂದು ಸುತ್ತಿನ ಮಾತುಕತೆ  ನಡೆಸಿದ್ದು, ಮೈಶುಗರ್‌ ಕಾರ್ಖಾನೆ ನಿರ್ವಹಣೆಗೆ ವಾರ್ಷಿಕ ತಗಲುವ ವೆಚ್ಚ, ಕಾರ್ಮಿಕರ ಸಂಬಳ, ಕಬ್ಬು ಬೆಳೆಯುವ ಪ್ರದೇಶ, ಕಬ್ಬಿನ ಉತ್ಪಾದನೆ ಪ್ರಮಾಣ ಎಲ್ಲ ಮಾಹಿತಿ ಸಂಗ್ರಹಿಸಿ ಉಪ ಸಮಿತಿಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ  ಸೂಚಿಸಿದ್ದಾರೆಂದು ತಿಳಿದು ಬಂದಿದೆ.

ಸರ್ಕಾರದ ಹಿಡಿತ: ಮೈಶುಗರ್‌ ಕಾರ್ಖಾನೆಯೊಂ ದಿಗೆ ಹಳೇ ಮೈಸೂರು ಭಾಗದ ರೈತರು ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಅದೇ ಕಾರಣಕ್ಕೆ ಕಾರ್ಖಾನೆಯನ್ನು ಖಾಸಗಿಯವರಿಗೆ ಮಾರಾಟ ಮಾಡುವುದು ಅಥವಾ ಗುತ್ತಿಗೆ  ನೀಡುವುದಕ್ಕೂ ಸ್ಥಳೀಯವಾಗಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಆದರೆ, ಈ ಕಾರ್ಖಾನೆ ನಿರ್ವಹಣೆಗೆ ಸರ್ಕಾರ ಪ್ರತಿ ವರ್ಷ ಹಣ ನೀಡಿದರೂ ಕಾರ್ಖಾನೆ ನಷ್ಟದ ಹಾದಿಯಿಂದ ಹೊರ ಬರಲು ಸಾಧ್ಯವಾಗಿಲ್ಲ.

ಹೀಗಾಗಿ  ಮುಖ್ಯಮಂತ್ರಿ ಯಡಿಯೂರಪ್ಪ ಕಾರ್ಖಾನೆ  ಯನ್ನು ಸರ್ಕಾರದ ವ್ಯಾಪ್ತಿಯಲ್ಲಿಯೇ ಉಳಿಸಿಕೊಂಡು ಉತ್ತಮ ನಿರ್ವಹಣೆ ಮಾಡಿ, ರೈತರಿಗೆ ಅನುಕೂಲವಾಗುವ ರೀತಿ ಯೋಜನೆ ರೂಪಿಸುವಂತೆ ಸಂಪುಟ ಉಪ ಸಮಿತಿಗೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ. ಅದಕ್ಕಾಗಿ ಕಬ್ಬು ಬೆಳೆಯುವ ಲಾಭ ನಷ್ಟದ ಅನುಭವ ಇರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನೂ ಸಮಿತಿ ಸದಸ್ಯರನ್ನಾಗಿ ಮಾಡಿ, ಸೂಕ್ತ ಯೋಜನೆ ರೂಪಿಸುವಂತೆ ನಿರ್ದೇಶನ  ನೀಡಿದ್ದಾರೆಂದು ತಿಳಿದು ಬಂದಿದೆ.

ನಿರ್ವಹಣೆಗೆ ಮಾತ್ರ ಖಾಗಿಯವರಿಗೆ: ಡಿಸಿಎಂ ಗೋವಿಂದ ಕಾರಜೋಳ ನೇತೃತ್ವದ ಸಂಪುಟ ಉಪ ಸಮಿತಿ ಮೊದಲ ಸಭೆಯಲ್ಲಿ ಖಾಸಗಿಯವರಿಗೆ ನಿರ್ವಹಣೆಗೆ ಮಾತ್ರ ನೀಡುವ ಕುರಿತು ಚರ್ಚೆ ನಡೆಸಿ, ಅದಕ್ಕೆ ಅಗತ್ಯವಾದ ಮಾಹಿತಿ  ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ. ಸರ್ಕಾರದ ಯೋಜನೆ ಪ್ರಕಾರ ಖಾಸಗಿ ಸಂಸ್ಥೆಯವರಿಗೆ ಸರ್ಕಾರವೇ ವಾರ್ಷಿಕ ನಿರ್ದಿಷ್ಟ ಹಣ ನೀಡುವುದು.

ಆ ಹಣದಲ್ಲಿ ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡ  ಖಾಸಗಿ ಸಂಸ್ಥೆ ಕಾರ್ಖಾನೆಯನ್ನು ಸುಸ್ಥಿತಿಯಲ್ಲಿಡುವುದು ಹಾಗೂ ಕಾರ್ಮಿಕರಿಗೆ ಸೂಕ್ತ ವೇತನ ನೀಡುವುದು, ಸರಿಯಾದ ಸಮಯಕ್ಕೆ ಕಬ್ಬು ನುರಿಸುವ ಜವಾಬ್ದಾರಿ ವಹಿಸುವುದು. ಉಳಿದಂತೆ ಸರ್ಕಾರವೇ ಸಕ್ಕರೆಯನ್ನು ಮಾರಾಟ  ಮಾಡಿ ಹಣ ಪಡೆದು  ಕೊಳ್ಳುವುದು. ರೈತರಿಗೆ ಕಬ್ಬಿನ ಬೆಲೆ ನೀಡುವುದು. ಆಗ ಸರ್ಕಾರಕ್ಕೆ ಪ್ರತಿವರ್ಷ ಬರುವ ಆದಾಯದ ಮೇಲೆ ಲಾಭ ನಷ್ಟದ ಲೆಕ್ಕ ತಿಳಿಯಲು ಸಾಧ್ಯವಾಗುತ್ತ ದೆ ಎನ್ನುವುದು ಲೆಕ್ಕಾಚಾರವಾಗಿದೆ.

ಟೆಂಡರ್‌: ಯಾವುದೇ ಖಾಸಗಿ ಸಂಸ್ಥೆಗೆ ನಿರ್ವಹಣೆಗೆ ಜವಾಬ್ದಾರಿ ವಹಿಸಲು ಟೆಂಡರ್‌ ಕರೆಯಲು ಸರ್ಕಾರ ತೀರ್ಮಾನಿಸಿದೆ. ಒಂದು ಸಂಸ್ಥೆಗೆ ಕನಿಷ್ಠ 5 ಅಥವಾ 10 ವರ್ಷ ನಿರ್ವಹಣೆ ಜವಾಬ್ದಾರಿ ನೀಡುವ ಬಗ್ಗೆ ಸಂಪುಟ ಉಪ ಸಮಿತಿಯಲ್ಲಿ ಚರ್ಚೆಯಾಗಿದೆ. ಆದರೆ, ಸ್ಪಷ್ಟ  ನಿರ್ಧಾರಕ್ಕೆ ಬಂದಿಲ್ಲ. ಕಾರ್ಖಾನೆಯ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದ ನಂತರ ನಿರ್ವಹಣೆಗೆ ನೀಡುವ ಅವಧಿಯನ್ನು ನಿರ್ಧರಿಸಲು ಉಪ ಸಮಿತಿ ತೀರ್ಮಾನಿಸಿದೆ  ಎಂದು ತಿಳಿದು ಬಂದಿದೆ.‌

ಮೈಶುಗರ್‌ ಕಾರ್ಖಾನೆಗೆ ಸಂಬಂಧಿಸಿದಂತೆ ಸಂಪುಟ ಉಪ ಸಮಿತಿ ಮೊದಲ ಸಭೆ ನಡೆಸಿದ್ದೇವೆ. ಕಾರ್ಖಾನೆಯ ಒಟ್ಟು ನಿರ್ವಹಣಾ ವೆಚ್ಚದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಧಿಕಾರಿಗಳ ವರದಿ  ಬಂದ ನಂತರ ಚರ್ಚಿಸಿ ತೀರ್ಮಾನ ಮಾಡುತ್ತೇವೆ.
-ಲಕ್ಷ್ಮಣ ಸವದಿ, ಉಪ ಮುಖ್ಯಮಂತ್ರಿ

* ಶಂಕರ ಪಾಗೋಜಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.