ಮೈಸೂರು: ನಾಯಿಯನ್ನು ಅಟ್ಟಾಟಿಸಿ ಕೊಂದ ಮೂವರ ವಿರುದ್ಧ ಕೇಸ್ ದಾಖಲು
Team Udayavani, Apr 14, 2022, 8:34 PM IST
ಮೈಸೂರು: ಆರು ತಿಂಗಳ ಹಿಂದೆ ಬೀದಿ ನಾಯಿಯನ್ನು ಅಟ್ಟಾಟಿಸಿ ಕೊಂದ ಮೂವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಮರಾಜ ಮೊಹಲ್ಲಾ ಡಿ. ಸುಬ್ಬಯ್ಯ ರಸ್ತೆಯಲ್ಲಿ ಆರು ತಿಂಗಳ ಹಿಂದೆ ನಡೆದ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋವನ್ನು ಬೆನ್ನತ್ತಿದ್ದ ಪಿಎಫ್ ಎ (ಪೀಪಲ್ಸ್ ಫಾರ್ ಅನಿಮಲ್ಸ್ ಸಂಸ್ಥೆ) ಸದಸ್ಯರು, ವಿಡಿಯೋ ಅಪ್ಲೋಡ್ ಮಾಡಿದ ವ್ಯಕ್ತಿಯನ್ನು ಸಂಪರ್ಕಿಸಿ, ಘಟನೆಯ ಸ್ಥಳ ಮತ್ತು ನಡೆದ ದಿನವನ್ನು ಪತ್ತೆ ಹಚ್ಚಿದ್ದಾರೆ.
ಬಳಿಕ ಘಟನಾ ಸ್ಥಳಕ್ಕೆ ತೆರಳಿ ಸ್ಥಳೀಯರನ್ನು ವಿಚಾರಿಸಿದಾಗ ಘಟನೆಯನ್ನು ಕಣ್ಣಾರೆ ಕಂಡ ಪ್ರತ್ಯಕ್ಷದರ್ಶಿ ಸಿಕ್ಕಿದ್ದಾರೆ. ಅವರ ಮೂಲಕ ಸೂಕ್ತ ಸಾಕ್ಷ್ಯ ಸಂಗ್ರಹಿಸಿ, ನಾಯಿಯನ್ನು ಹಲ್ಲೆ ನಡೆಸಿ ಕೊಂದವರ ವಿರುದ್ದ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಪೊಲೀಸರು, ಪ್ರಾಣಿ ದೌರ್ಜನ್ಯ ತಡೆ ಕಾಯಿದೆ ಮತ್ತು ಐಪಿಸಿ ಕಲಂ 429, ರೆಡ್ ವಿತ್ 34 ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ