ಕೊರೊನಾದಿಂದ ಕೊಸಿರೆದ್ದ ಪಂಚಮಿ ಜೋಕಾಲಿ

ಹಳ್ಳಿಗಳಲ್ಲಿ ಹುಡುಗರ ಜಿದ್ದಿನಾಟ ; ಮತ್ತೆ ಕಳೆಗಟ್ಟಿದ ಸಂಭ್ರಮ ; ಭರ್ಜರಿ ವ್ಯಾಪಾರ-ವಹಿವಾಟು

Team Udayavani, Aug 1, 2022, 3:52 PM IST

16

ಧಾರವಾಡ: ಜೋರಾಗಿ ಜೀಕುತ್ತಿರುವ ಜೋಕಾಲಿಗಳು, ಅಡುಗೆ ಮನೆಯಲ್ಲಿ ಸದ್ದು ಮಾಡುತ್ತಿರುವ ಗುಳ್ಳಡಕಿ ಉಂಡಿಗಳು, ಹಳ್ಳಿಯ ಬೀದಿಗಳಲ್ಲಿ ನಡಮುರುಕನ ಆಟದ ಹಗ್ಗಗಳು, ಶಕ್ತಿ ಪ್ರದರ್ಶನ ಮಾಡುವ ಗಂಡಸರ ಸೊಕ್ಕು ಮುರಿಯಲು ಸಜ್ಜಾಗಿರುವ ಹುಗಿದ ಕಸಬರಿಗೆಗಳು, ಒಟ್ಟಿನಲ್ಲಿ ಈ ವರ್ಷ ನಾಗರ ಪಂಚಮಿ ಹಬ್ಬ ಕಳೆಕಟ್ಟಿದ್ದು, ಹಳ್ಳಿಗರು ಜೋಕಾಲಿಯನ್ನು ಜೋರಾಗಿಯೇ ಜೀಕಲು ಸಜ್ಜಾಗಿದ್ದಾರೆ.

ಹೌದು. ಕಳೆದ ಎರಡು ವರ್ಷ ಕೊರೊನಾ ಮಹಾ ಮಾರಿಯ ಹೊಡೆತಕ್ಕೆ ಪಕ್ಕದ ಮನೆಯ ಬುತ್ತಿರೊಟ್ಟಿಗೂ ಕೊಕ್ಕೆ ಬಿದ್ದು ಸುಸ್ತಾಗಿದ್ದ ಹಳ್ಳಿಗರು, ಉಂಡಿ ಕಟ್ಟಿ ಪರಸ್ಪರ ಹಂಚಿಕೊಂಡು ತಿನ್ನುವುದಕ್ಕೂ ಹಿಂದೇಟು ಹಾಕಿದ್ದರು. ಅಷ್ಟೇಯಲ್ಲ, ಸ್ವತಃ ಗ್ರಾಮ ಪಂಚಾಯಿತಿಗಳೇ ಕೊರೊನಾದಿಂದಾಗಿ ಅಕ್ಕತಂಗಿಯರನ್ನು ಪರ ಊರುಗಳಿಂದ ತಮ್ಮ ಗ್ರಾಮಕ್ಕೆ ಕರೆದುಕೊಂಡು ಬರದಂತೆ ಡಂಗೂರ ಸಾರಿಸಿ ಬಿಟ್ಟಿದ್ದು ಇನ್ನೂ ಕಣ್ಣ ಮುಂದೆಯೇ ಇದೆ. ಆದರೆ ಈ ವರ್ಷ ಕೊರೊನಾ ಭಯದಿಂದ ಕೊಸರಿಕೊಂಡು ಮೇಲೆದ್ದಿರುವ ಹಳ್ಳಿಗರು ಮಾತ್ರ ನಾಗರ ಪಂಚಮಿ ಹಬ್ಬವನ್ನು ಜೋರಾಗಿ ಆಚರಿಸಲು ಸಜ್ಜಾಗಿದ್ದು, ಧಾರವಾಡ ಜಿಲ್ಲೆಯಲ್ಲಿ ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಜೋಕಾಲಿ ಹಬ್ಬಕ್ಕೆ ಸೋಮವಾರ ನಾಗಪ್ಪನಿಗೆ ಹಾಲೆರೆಯುವ ಮೂಲಕ ಚಾಲನೆ ಲಭಿಸಲಿದೆ. ಮರುದಿನ ಪಂಚಮಿ, ಮೋಜು ಮಸ್ತಿ ಕೊನೆಯ ದಿನ ಕೆರಾಂಬಲಿ ಕರಿಗಡಿನ ಎಡೆ ಭೂಮಿ ತಾಯಿಗೆ ಸಮರ್ಪಣೆ ಮಾಡುವ ಪದ್ಧತಿಯೊಂದಿಗೆ ಕೊನೆಗೊಳ್ಳಲಿದೆ.

ಉಂಡಿ ಭರ್ಜರಿ ವ್ಯಾಪಾರ: ಕೊರೊನಾದಿಂದಾಗಿ ಪಂಚಮಿ ಹಬ್ಬದ ಸಂದರ್ಭದಲ್ಲಿ ಎರಡು ವರ್ಷ ವ್ಯಾಪಾರಿಗಳು ಭಾರಿ ನಷ್ಟ ಅನುಭವಿಸಿದ್ದರು. ಹುಬ್ಬಳ್ಳಿ-ಧಾರವಾಡ ಮಾರುಕಟ್ಟೆಯಲ್ಲಿನ ವಹಿವಾಟೇ ಈ ವರ್ಷದ ನಾಗರ ಪಂಚಮಿ ಹಬ್ಬದ ಸಡಗರ ಕಳೆಕಟ್ಟುವುದಕ್ಕೆ ಮುನ್ಸೂಚನೆ ನೀಡಿದಂತಿದ್ದು, ಕಳೆದ ಮೂರು ದಿನಗಳಿಂದ ಭರ್ಜರಿ ವ್ಯಾಪಾರ ವಹಿವಾಟು ದಾಖಲಾಗಿದೆ. ಉಂಡಿ ಸಾಮಗ್ರಿಗಳಾದ ಶೇಂಗಾ, ಬೆಲ್ಲ, ಕಾರದಾನಿ, ಬುಂದಿ, ಒಣ ಕೊಬ್ಬರಿ, ಗುಳ್ಳಡಕಿ, ಅಳ್ಳ, ಎಣ್ಣೆ ಸೇರಿದಂತೆ ಕಿರಾಣಿ ವ್ಯಾಪಾರ ಜೋರಾಗಿದೆ. ಅಷ್ಟೇಯಲ್ಲ ತಿಂಡಿ- ತಿನಿಸುಗಳು ಕೂಡ ಭರ್ಜರಿಯಾಗಿ ಮಾರಾಟವಾಗುತ್ತಿದ್ದು, ಚುರಮುರಿ, ಚೋಡಾ ಅವಲಕ್ಕಿ, ಉಸುಳಿಗಾಗಿ ಮಡಿಕೆ, ಹೆಸರು, ಕಡಲೆ ಸೇರಿದಂತೆ ಅಕ್ಕಡಿ ಕಾಳುಗಳ ವ್ಯಾಪಾರವೂ ಜೋರಾಗಿ ಸಾಗಿದೆ.

ಅಣ್ಣನ ಮನೆಗೆ ಅಕ್ಕತಂಗಿಯರು: ಸಾಮಾನ್ಯವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಅತ್ಯಂತ ಜನಪ್ರಿಯ ಮಹಿಳಾ ಹಬ್ಬವೆಂದರೆ ಅದು ನಾಗರ ಪಂಚಮಿ. ಈ ಹಬ್ಬಕ್ಕೆ ಅಣ್ಣ-ತಮ್ಮಂದಿರು ತಮ್ಮ ಅಕ್ಕ-ತಂಗಿಯರನ್ನು ಮನೆಗೆ ಕರೆದು ಗೌರವಾದರಗಳನ್ನು ತೋರಿಸುತ್ತಾರೆ. ಹಾಲೆರೆಯುವ ಸಂಭ್ರಮದಲ್ಲಿ ಭಾಗಿಯಾಗಿ ಉಂಡಿ ಉಸುಳಿ ತಿನ್ನಿಸಿ, ಅವರಿಗೆ ಕಾಣಿಕೆಗಳನ್ನು ಕೊಟ್ಟು ಅಭಿನಂದಿಸುತ್ತಾರೆ. ಕೊರೊನಾದಿಂದಾಗಿ ಎರಡು ವರ್ಷ ಈ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಇದೀಗ ಈ ವರ್ಷ ಎಲ್ಲವೂ ಚೆನ್ನಾಗಿದ್ದು, ಅತ್ಯಂತ ಉತ್ಸಾಹದಿಂದ ಅಣ್ಣ- ತಮ್ಮಂದಿರುವ ತಮ್ಮ ಅಕ್ಕ-ತಂಗಿಯರನ್ನು ನಾಗರ ಪಂಚಮಿ ಹಬ್ಬಕ್ಕೆ ಬರಮಾಡಿಕೊಳ್ಳುತ್ತಿದ್ದಾರೆ.

ನಗರದಲ್ಲೂ ಸಂಭ್ರಮ: ಧಾರವಾಡ, ಹುಬ್ಬಳ್ಳಿ ಮಹಾ ನಗರದಲ್ಲೂ ಅಲ್ಲಲ್ಲಿ ಮಹಿಳೆಯರು ಸಂಘಟಿತರಾಗಿ ಪಂಚಮಿ ಹಬ್ಬವನ್ನು ಜೋರಾಗಿ ಆಚರಿಸುತ್ತಿದ್ದಾರೆ. ಧಾರವಾಡದ ಜಾನಪದ ಸಂಶೋಧನಾ ಸಂಸ್ಥೆ, ಜಾನಪದ ಸಂಸ್ಕೃತಿ ಪ್ರತಿಷ್ಠಾನ ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ನಾಗರ ಹುತ್ತಗಳಿಗೆ ಹಾಲೆರದು, ಉಂಡಿ ತಿಂದು, ಜೋಕಾಲಿ ಜೀಕಿ ಸಂಭ್ರಮ ಪಡುತ್ತಿದ್ದಾರೆ. ಒಂದು ದಿನ ಮುಂಚಿತವಾಗಿಯೇ ಪಂಚಮಿ ಹಬ್ಬ ಆಚರಿಸಿ ನಾಗರ ಪಂಚಮಿ ಹಬ್ಬದ ಮಹತ್ವ ಕುರಿತು ಜಾಗೃತಿ ಮೂಡಿಸಿರುವ ಸಂಘ ಸಂಸ್ಥೆಗಳು ನಗರ ಜೀವನದಲ್ಲೂ ಹಳ್ಳಿಹಬ್ಬವೊಂದರ ಸಂಭ್ರಮಾಚರಣೆ ಮಾಡಿದ್ದು ವಿಶೇಷ.

ಹಾಲೆರೆಯುವ ನೆಪ; ಬಾಂಧವ್ಯದ ಜಪ ನಾಗರ ಪಂಚಮಿ ನಾಡಿಗೆ ದೊಡ್ಡದು ನಾ ಹೆಂಗ ಮರಿಲವ್ವ ನಾರಿ ನನ್ನ ತವರೂರ ಎಂದು ಹಾಡು ಹೇಳುವ ಜನಪದರಿಗೆ ಪಂಚಮಿ ಹಬ್ಬವೇ ಮಹಿಳೆಯರ ಪಾಲಿಗೆ ನಾಡ ಹಬ್ಬ. ಅಣ್ಣ ತಂಗಿಯರ ಬಾಂಧವ್ಯವನ್ನು ಪ್ರತಿವರ್ಷ ನೆನಪಿಸುವ ಉತ್ತರ ಕರ್ನಾಟಕ ಭಾಗದ ಈ ಸಂಪ್ರದಾಯ ಪಂಚಮಿ ಹಬ್ಬ ಉಳಿದಾವ ದಿನ ನಾಕ ಅಣ್ಣ ಬರಲಿಲ್ಲ ಯಾಕ ಕರಿಲಾಕ ಎನ್ನುವ ಜನಪದ ಹಾಡು ಹುಕ್ಕೇರಿ ಬಾಳಪ್ಪನವರಿಂದಲೇ ಪ್ರಸಿದ್ಧಿ ಪಡೆಯಿತು. ಹಾಲೆರೆಯುವುದು ಇಲ್ಲಿ ಬರೀ ನೆಪಮಾತ್ರವಾಗಿದ್ದು, ಅಣ್ಣ-ತಂಗಿಯರ ನಡುವಿನ ಆತ್ಮೀಯ ಬಾಂಧವ್ಯವೇ ನಾಗರ ಪಂಚಮಿ ಹಬ್ಬದ ಮೂಲ ಆಶಯ. ಅಂತಹ ಹಬ್ಬವೇ ಕೊರೊನಾದಿಂದ ತೆರೆಗೆ ಸರಿದಿತ್ತು. ಇದೀಗ ಕೊರೊನಾದಿಂದ ಕೊಸೆರೆದ್ದಿರುವ ಜನರು ಈ ವರ್ಷ ಸಂಭ್ರಮಕ್ಕೆ ಸಜ್ಜಾಗಿದ್ದಾರೆ.

ನಾಗರ ಪಂಚಮಿ ಸಾಮಾನ್ಯವಾಗಿ ಹಳ್ಳಿಗಳಲ್ಲಿ ಹೆಚ್ಚು ಜನಪ್ರಿಯವಾಗಿದ್ದು, ನಗರ ವಾಸಿಗಳಲ್ಲಿ ಮಹಿಳೆಯರು ಸಂಘಟಿತವಾಗಿ ಹಬ್ಬ ಆಚರಿಸುವುದು ಕಷ್ಟ. ಆದರೆ ಈ ಕುರಿತು ನಾವು ಜಾಗೃತಿ ಮೂಡಿಸಿ ಉಂಡಿ, ಉಸುಳಿ, ಒಳ್ಳೊಳ್ಳೆ ತಿಂಡಿ ಮಾಡಿಸಿ ಒಟ್ಟಿಗೆ ಸೇರಿ ಪಂಚಮಿ ಹಬ್ಬವನ್ನು ಕಳೆದ 20 ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದ್ದೇವೆ. ಕೊರೊನಾ ಭಯದಿಂದ ಹೊರ ಬಂದು ಈ ವರ್ಷ ಇನ್ನಷ್ಟು ಖುಷಿಯಿಂದ ಪಂಚಮಿ ಹಬ್ಬ ಆಚರಿಸುತ್ತಿದ್ದೇವೆ. –ವಿಶ್ವೇಶ್ವರಿ ಹಿರೇಮಠ, ಜಾನಪದ ಸಂಶೋಧನಾ ಕೇಂದ್ರದ ಅಧ್ಯಕ್ಷ

ಅಣ್ಣ ತಂಗಿಯರು ಬಂಧು-ಬಳಗವೆಲ್ಲ ಸೇರಿಕೊಂಡು ಸಂಭ್ರಮಿಸುವ ನಾಗರ ಪಂಚಮಿ ಎರಡು ವರ್ಷ ಕೊರೊನಾದಿಂದ ಕಳೆಗುಂದಿತ್ತು. ಆದರೆ ಈ ವರ್ಷ ದೇವರು ಎಲ್ಲವನ್ನೂ ಚೆನ್ನಾಗಿ ಇಟ್ಟಿದ್ದು, ಪಂಚಮಿ ಹಬ್ಬವನ್ನು ಅತ್ಯಂತ ಸಡಗರದಿಂದ ಆಚರಿಸುತ್ತಿದ್ದೇವೆ. –ಸನ್ಮತಿ ಅಂಗಡಿ, ರಂಗಭೂಮಿ ಹಿರಿಯ ಕಲಾವಿದ

-ಡಾ|ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.