ನಾಗ್ಪುರ ಟೆಸ್ಟ್‌: ಭಾರತದಿಂದ ತ್ರಿವಳಿ ಸ್ಪಿನ್‌ ದಾಳಿ?


Team Udayavani, Feb 8, 2023, 8:00 AM IST

 ನಾಗ್ಪುರ ಟೆಸ್ಟ್‌: ಭಾರತದಿಂದ ತ್ರಿವಳಿ ಸ್ಪಿನ್‌ ದಾಳಿ?

ನಾಗ್ಪುರ: ಭಾರತ-ಆಸ್ಟ್ರೇಲಿಯ ನಡುವಿನ ನಾಗ್ಪುರ ಟೆಸ್ಟ್‌ ಸ್ಪಿನ್‌ ಟ್ರ್ಯಾಕ್‌ ಮೇಲೆ ನಡೆಯವ ಸಾಧ್ಯತೆ ಹೆಚ್ಚಿದೆ. ಭಾರತವಿಲ್ಲಿ ತ್ರಿವಳಿ ಸ್ಪಿನ್‌ ದಾಳಿಗೆ ಸಿದ್ಧತೆ ನಡೆಸುವ ಕುರಿತು ಮಾಹಿತಿ ಲಭಿಸಿದೆ.

ಈ ಪಿಚ್‌ ಹೇಗಿದೆ ಎಂಬ ಕುರಿತು ಕ್ಯುರೇಟರ್‌ ಯಾವುದೇ ಸ್ಪಷ್ಟ ಮಾಹಿತಿ ನೀಡಿಲ್ಲ. ಸೋಮವಾರ ಈ ಪಿಚ್‌ ಮೇಲೆ ಹಸಿರು ಹೊದಿಕೆ ಇತ್ತು. ಕಂದು ಬಣ್ಣದ ಪ್ಯಾಚ್‌ಗಳಿದ್ದವು. ಪಂದ್ಯ ಆರಂಭವಾಗುವ ವೇಳೆ ಹುಲ್ಲು ಸಂಪೂರ್ಣ ಬೋಳಾಗುವ ಸಾಧ್ಯತೆ ಇದೆ. ಹೀಗಾಗಿ ಮೊದಲ ದಿನವೇ ಪಿಚ್‌ ಸ್ಪಿನ್ನಿಗೆ ನೆರವಾದರೆ ಅಚ್ಚರಿ ಇಲ್ಲ ಎನ್ನುತ್ತದೆ ಒಂದು ವರದಿ. ಇನ್ನೊಂದು ವರದಿ ಪ್ರಕಾರ ಭಾರತ ನಾಲ್ವರು ಸ್ಪಿನ್ನರ್‌ಗಳನ್ನು ದಾಳಿಗೆ ಇಳಿಸುವ ಸಾಧ್ಯತೆಯೂ ಇಲ್ಲದಿಲ್ಲ!

ಆದರೆ ತಂಡದ ಉಪನಾಯಕ ರಾಹುಲ್‌ ಮಂಗಳ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ್ದು, ತ್ರಿವಳಿ ಸ್ಪಿನ್‌ ಆಕ್ರಮಣದ ಕುರಿತು ಯಾವುದೇ ಸ್ಪಷ್ಟ ಮಾಹಿತಿ ನೀಡಿಲ್ಲ. “ಮೂವರು ಸ್ಪಿನ್ನರ್‌ಗಳನ್ನು ಆಡಿಸಲು ಭಾರತ ಕಾತರ
ಗೊಂಡಿದೆಯಾದರೂ ಟ್ರ್ಯಾಕ್‌ ಬಗ್ಗೆ ಇನ್ನೂ ನಿಖರವಾಗಿ ಅಂದಾಜಿಸಲು ಸಾಧ್ಯವಾಗಿಲ್ಲ’ ಎಂದರು.

“ನಾವು ಪಿಚ್‌ ನೋಡಿದ್ದೇವೆ. ಆದರೆ ಇಷ್ಟು ಬೇಗ ಇದರ ವರ್ತನೆ ಬಗ್ಗೆ ಏನೂ ಹೇಳಲಾಗದು. ಪಂದ್ಯದ ಮೊದಲ ದಿನವಷ್ಟೇ ನೋಡಿ ಮುಂದಿನ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಮೂವರು ಸ್ಪಿನ್ನರ್‌ಗಳನ್ನು ಆಡಿಸಬೇಕೆಂಬ ಕಾತರವೇನೋ ಇದೆ. ಏಕೆಂದರೆ ನಾವು ಆಡುವುದು ಭಾರತದಲ್ಲಿ ತಾನೆ?’ ಎಂದರು.

ಹನ್ನೊಂದರ ಆಯ್ಕೆ ಜಟಿಲ
ಬೋರ್ಡರ್‌-ಗಾವಸ್ಕರ್‌ ಟ್ರೋಫಿ ಸರಣಿಯ ಆರಂಭಕ್ಕೆ 48 ಗಂಟೆಗೂ ಕಡಿಮೆ ಅವಧಿ ಇದ್ದರೂ ಕೆ.ಎಲ್‌. ರಾಹುಲ್‌ 3 ಪ್ರಮುಖ ಪ್ರಶ್ನೆಗಳಿಗೆ ಖಚಿತವಾದ ಉತ್ತರ ನೀಡಿಲ್ಲ. ಇದರಲ್ಲೊಂದು ತ್ರಿವಳಿ ಸ್ಪಿನ್‌ ಆಕ್ರಮಣ. ಉಳಿದಂತೆ ತಂಡದ ವಿಕೆಟ್‌ ಕೀಪರ್‌ ಹಾಗೂ 5ನೇ ಕ್ರಮಾಂಕದ ಬ್ಯಾಟರ್‌ ಯಾರಿರಬಹುದು ಎಂಬೆರಡೂ ಪ್ರಶ್ನೆಗಳೂ ಸೇರಿವೆ.

ಶುಭಮನ್‌ ಗಿಲ್‌ ಮಧ್ಯಮ ಕ್ರಮಾಂಕದಲ್ಲಿ ಆಡುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಹುಲ್‌, “ನಾವಿನ್ನೂ ಆಡುವ ಬಳಗದ ಕುರಿತು ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಹನ್ನೊಂದರ ಆಯ್ಕೆ ನಿಜಕ್ಕೂ ಅತ್ಯಂತ ಜಟಿಲವಾಗಲಿದೆ. ಏಕೆಂದರೆ ತಂಡದ ಎಲ್ಲ 15 ಮಂದಿಯೂ ಉನ್ನತ ದರ್ಜೆಯವರೇ ಆಗಿದ್ದಾರೆ. ಈ ಕುರಿತು ಕೆಲವು ಚರ್ಚೆಗಳು ನಡೆಯಬೇಕಿವೆ. ಆಟಗಾರರೆಲ್ಲರೂ ಇಲ್ಲಿ ಅಭಿಪ್ರಾಯ ವ್ಯಕ್ತಪಡಿಸಲು ಅರ್ಹರು’ ಎಂದರು.

ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ನಡೆಸಲು ನೀವು ಸಿದ್ಧರಿದ್ದೀರಾ ಎಂಬ ಪ್ರಶ್ನೆ ಕೂಡ ರಾಹುಲ್‌ ಅವರತ್ತ ತೂರಿ ಬಂತು. “ತಂಡ ಏನು ಬಯಸುತ್ತದೋ ಅದಕ್ಕೆ ನಾನು ಸದಾ ಸಿದ್ಧ. ತಂಡಕ್ಕೆ ಉತ್ತಮ ಕೊಡುಗೆ ಸಲ್ಲಿಸುವುದೇ ನನ್ನ ಉದ್ದೇಶ’ ಎಂದರು.

ಆಸೀಸ್‌ ಅಪಾಯಕಾರಿ
ಈ ಸಂದರ್ಭದಲ್ಲಿ ಆಸ್ಟ್ರೇಲಿಯದ ಟಾಪ್‌ ಕ್ಲಾಸ್‌ ವೇಗದ ಬೌಲಿಂಗ್‌ ಬಗ್ಗೆಯೂ ರಾಹುಲ್‌ ಎಚ್ಚರಿಕೆಯ ಮಾತಾಡಿದರು. “ಇಂಥ ಟ್ರ್ಯಾಕ್‌ಗಳಲ್ಲಿ ರಿವರ್ಸ್‌ ಸ್ವಿಂಗ್‌ ಅತ್ಯಂತ ಅಪಾಯಕಾರಿಯಾಗಿ ಪರಿಣಮಿಸಲಿದೆ. ಆಸ್ಟ್ರೇಲಿಯನ್ನರ ಬಳಿ ಇಂಥ ಟಾಪ್‌ ಕ್ಲಾಸ್‌ ವೇಗಿಗಳಿದ್ದಾರೆ. ಕಳೆದ 10 ದಿನಗಳಿಂದಲೂ ನಾವು ರಿವರ್ಸ್‌ ಸ್ವಿಂಗ್‌ ಎದುರಿಸುವುದನ್ನು ಅಭ್ಯಾಸ ಮಾಡುತ್ತಿದ್ದೆವು’ ಎಂದರು.

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.