ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದಲ್ಲಿ ಸರ್ವ ಸಮ್ಮತಿ ನಾಯಕರು : ನಳೀನಕುಮಾರ ಕಟೀಲು
Team Udayavani, Jun 7, 2021, 6:23 PM IST
ಹುಬ್ಬಳ್ಳಿ: ಬಿಜೆಪಿಯಲ್ಲಿ ಸಹಿ ಸಂಗ್ರಹ, ಒತ್ತಡ, ಒತ್ತಾಯದಂತಹ ವಿಷಯಗಳಿಲ್ಲ. ನಮ್ಮದು ಶಾಸನಬದ್ಧ ಪಕ್ಷವಾಗಿದೆ. ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದಲ್ಲಿ ಸರ್ವ ಸಮ್ಮತಿ ನಾಯಕರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲು ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತು ಮಾಧ್ಯಮಗಳಿಂದ ಮಾಹಿತಿ ಗೊತ್ತಾಗಿದೆ. ಅವರನ್ನು ಕರೆದು ಮಾತನಾಡುತ್ತೇನೆ. ಸಹಿ ಸಂಗ್ರಹ ಯಾವುದೇ ವಿಷಯಗಳು, ಚರ್ಚೆಗಳು ಇಲ್ಲ.ಇದಕ್ಕೆ ನಮ್ಮ ಪಕ್ಷದಲ್ಲಿ ಆಸ್ಪದವಿಲ್ಲ ಎಂದರು.
ರಾಷ್ಟ್ರೀಯ ನಾಯಕು, ಹೈಕಮಾಂಡ್ ಸೂಚನೆಯನ್ನು ಪಾಲನೆ ಮಾಡುವ ಆದರ್ಶದ ಪಕ್ಷವಾಗಿದೆ. ಹೀಗಾಗಿಯೇ ಮುಖ್ಯಮಂತ್ರಿಗಳು ಈ ಅರ್ಥದಲ್ಲಿ ಹೇಳಿದ್ದಾರೆ. ಇದನ್ನು ಪಕ್ಷದ ನಾಯಕರು, ಶಾಸಕರು ಅರ್ಥ ಮಾಡಿಕೊಳ್ಳಬೇಕು. ಇದೀಗ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ. ಈ ಬಗ್ಗೆ ಚರ್ಚೆ ಅಪ್ರಸ್ತುತವಾಗಿವೆ. ಹೀಗಾಗಿ ಸಹಿ ಸಂಗ್ರಹ, ಒತ್ತಡದ ವಿಚಾರಗಳು ಇಲ್ಲ. ಇಂತಹ ಕೆಲಸಕ್ಕೆ ಯಾರೇ ಮುಂದಾದರೂ ಕರೆದು ಮಾತನಾಡುತ್ತೇನೆ.
ಕೋವಿಡ್ ಸಂದರ್ಭದಲ್ಲಿ ಸೋಂಕು ನಿಯಂತ್ರಣಕ್ಕೆ ಶಾಸಕರು ಮುಂದಾಗಬೇಕು. ಯಾವುದೇ ಕಾರಣಕ್ಕೂ ತಮ್ಮ ಕ್ಷೇತ್ರ ಬಿಟ್ಟು ಹೋಗುವಂತಿಲ್ಲ. ಅಗತ್ಯವಿದ್ದರೆ ಬೆಂಗಳೂರಿಗೆ ಮಾತ್ರ ಹೋಗಬಹುದು. ಜನರು ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದೆ. ಶಾಸಕರ ಕಾರ್ಯವನ್ನು ಪಕ್ಷ ಗಮನಿಸುತ್ತಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
Globant; ಮನೆಯಿಂದಲೇ 30,000 ಮಂದಿ ಕೆಲಸ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ