ಹದಗೆಟ್ಟ ನಾಲ್ತೂರು ದೇಗುಲ ಸಂಪರ್ಕ ರಸ್ತೆ

ಮಣ್ಣಿನ ರಸ್ತೆಗೆ ಕಾಯಕಲ್ಪದ ನಿರೀಕ್ಷೆಯಲ್ಲಿ ಯಡಾಡಿ ಮತ್ಯಾಡಿ ಜನತೆ

Team Udayavani, Aug 21, 2021, 6:47 AM IST

ಹದಗೆಟ್ಟ ನಾಲ್ತೂರು ದೇಗುಲ ಸಂಪರ್ಕ ರಸ್ತೆ

ತೀರಾ ಹದಗೆಟ್ಟ ನಾಲ್ತೂರು ದೇಗುಲ ಸಂಪರ್ಕ ರಸ್ತೆ.

ಮಳೆಗಾಲದ ಸಂದರ್ಭದಲ್ಲಿ ಸರಿ ಸುಮಾರು 300 ಮೀಟರ್‌ಗೂ ಅಧಿಕ ದೂರದ ಮಣ್ಣಿನ ರಸ್ತೆಯಲ್ಲಿಯೇ ನೀರು ಹರಿಯುವ ಕಾರಣದಿಂದ ಇಲ್ಲಿ ಸಂಚಾರವೆನ್ನುವುದು ತೀರಾ ಕಷ್ಟಕರವಾಗಿ ಪರಿಣಮಿಸುತ್ತದೆ.

ತೆಕ್ಕಟ್ಟೆ: ಇಲ್ಲಿನ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಯಡಾಡಿ ಮತ್ಯಾಡಿ ಗ್ರಾಮದ ನಾಲ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಸಂಪರ್ಕ ಕಲ್ಪಿಸುವ ಮಣ್ಣಿನ ರಸ್ತೆ ಮಳೆಗಾಲದ ಸಂದರ್ಭ ಸಂಪೂರ್ಣ ಕೆಸರುಮಯವಾಗಿ ವಾಹನ ಮಾತ್ರವಲ್ಲದೆ ಗ್ರಾಮಸ್ಥರು ನಡೆದು ಸಾಗಲು ಸಹ ಪ್ರಯಾಸಪಡಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.

16 ಕುಟುಂಬಗಳಿಗೆ ಪ್ರಮುಖ ಮಾರ್ಗ
ಅಭಿವೃದ್ಧಿ ಹೊಂದುತ್ತಿರುವ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ನಾಲ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಸುತ್ತ ಮುತ್ತಲಿನ ಪರಿಸರದಲ್ಲಿ ಸುಮಾರು 16 ಕುಟುಂಬಗಳಿದ್ದು ಮಳೆಗಾಲದ ಸಂದರ್ಭದಲ್ಲಿ ಸರಿ ಸುಮಾರು 300 ಮೀಟರ್‌ಗೂ ಅಧಿಕ ದೂರದ ಮಣ್ಣಿನ ರಸ್ತೆ ಎನ್ನುವುದು ತೋಡಾಗಿ ಪರಿವರ್ತನೆಗೊಳ್ಳುವ ಪರಿಣಾಮ ನಿತ್ಯ ಪ್ರಮುಖ ಪೇಟೆ ಹಾಗೂ ಇನ್ನಿತರ ಕೆಲಸಗಳಿಗಾಗಿ ತೆರಳುವವರು ನಿತ್ಯ ಸಂಕಷ್ಟ ಅನುಭವಿಸಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ.

ಇದನ್ನೂ ಓದಿ:12 ವಯಸ್ಸಿಗಿಂತ ಮೇಲ್ಪಟ್ಟ ಮಕ್ಕಳಿಗೆ ಸಿದ್ಧವಾದ ಮೊದಲ ಕೋವಿಡ್ ಲಸಿಕೆಗೆ ಭಾರತದಲ್ಲಿ ಅನುಮೋದನೆ

ರಿಕ್ಷಾ ಮತ್ತು ವಾಹನಗಳು ಬರಲು ಒಪ್ಪುವುದಿಲ್ಲ
ಮಳೆ ಬರುವ ಸಂದರ್ಭದಲ್ಲಿ ನಾಲೂ¤ರಿನ ಮಣ್ಣಿನ ರಸ್ತೆಯು ಕೆಸರುಮಯವಾಗುವ ಪರಿಣಾಮ ಆಟೋ ಹಾಗೂ ಇನ್ನಿತರ ವಾಹನಗಳ ಚಕ್ರ ಕೆಸರಿನಲ್ಲಿ ಹೂತು ಹೋಗುತ್ತದೆ ಎನ್ನುವ ಕಾರಣ ನೀಡಿ ಬರಲು ಒಪ್ಪುವುದಿಲ್ಲ ಎಂದು ಸ್ಥಳೀಯರು ಹೇಳುತ್ತಿದ್ದು, ಅನಾರೋಗ್ಯ ಪೀಡಿತ ಹಿರಿಯ ನಾಗರಿಕರಿಗೆ ತುರ್ತಾಗಿ ಚಿಕಿತ್ಸೆಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುವುದು ಕೂಡ ಕಷ್ಟಸಾಧ್ಯವಾಗಿದೆ ಎನ್ನುವುದು ಅವರ ಅಳಲು.

ಸಂಚಾರ ದುಸ್ತರ
ನಾಲ್ತೂರು ಶ್ರೀ ಮಹಾ ಲಿಂಗೇಶ್ವರದ ದೇಗುಲ ಸಂಪರ್ಕ ಮಣ್ಣಿನ ರಸ್ತೆಯು ಮಳೆಗಾಲದಲ್ಲಿ ಸಂಪೂರ್ಣ ಕೆಸರುಮಯವಾಗುವುದರಿಂದ ಗ್ರಾಮಸ್ಥರಿಗೆ ಸಂಚಾರ ದುಸ್ತರವಾಗಿ ಪರಿಣಮಿಸಿದೆ. ಅಲ್ಲದೆ ರಸ್ತೆಗೆ ಅಡ್ಡಲಾಗಿ ಸಮರ್ಪಕವಾದ ಮೋರಿ ಅಳವಡಿಸದೆ ಇರುವ ಪರಿಣಾಮ ಮಳೆ ನೀರು ನೇರವಾಗಿ ಮನೆಯೊಳಗೆ ಬಂದು ನುಗ್ಗುತ್ತಿದೆ. ಈಗಾಗಲೇ ಮನೆಯ ಹಿರಿಯರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಜನಪ್ರತಿನಿಧಿಗಳು ತುರ್ತು ಕ್ರಮ ಕೈಗೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿದರೆ ಅವರನ್ನು ತುರ್ತು ಸಂದರ್ಭ ಆಸ್ತತ್ರೆಗೆ ಕೊಂಡೊಯ್ಯಲು ನೆರವಾದೀತು.
– ಗೋಪಾಲ ಮೊಗವೀರ ನಾಲ್ತೂರು,
ಸ್ಥಳೀಯ ನಿವಾಸಿ

ಪ್ರಸ್ತಾವ ಸಲ್ಲಿಕೆ
ಯಡಾಡಿ ಮತ್ಯಾಡಿ ಗ್ರಾಮದ ನಾಲ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲ ಸಂಪರ್ಕ ರಸ್ತೆ ಅಭಿವೃದ್ಧಿಯ ಬಗ್ಗೆ ಗ್ರಾ.ಪಂ.ನ ಗಮನದಲ್ಲಿದ್ದು, ಅಭಿವೃದ್ಧಿಗಾಗಿ ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳಿಗೆ ಪಂಚಾಯತ್‌ನಿಂದ ಪ್ರಸ್ತಾವ ಸಲ್ಲಿಸಲಾಗುವುದು .
– ಚಂದ್ರಕಾಂತ್‌ ಬಿ., ಪಿಡಿಒ , ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್‌

ಇತರ ಸಮಸ್ಯೆಗಳೇನು?
ಈಗಾಗಲೇ ನಾಲ್ತೂರು ಶ್ರೀ ಮಹಾ ಲಿಂಗೇಶ್ವರದ ದೇಗುಲದ ಸಂಪರ್ಕ ಮಾರ್ಗದಲ್ಲಿ ಹೊಸದಾಗಿ ವಿದ್ಯುತ್‌ ಕಂಬಗಳನ್ನು ಅಳವಡಿಸಲಾಗಿದ್ದು, ಈ ವಿದ್ಯುತ್‌ ಕಂಬಗಳಿಗೆ ದಾರಿದೀಪ ಅಳವಡಿಸದೆ ಇರುವ ಪರಿಣಾಮ ರಾತ್ರಿ ವೇಳೆಯಲ್ಲಿ ಸಂಚರಿಸುವುದು ಕಷ್ಟ ವಾಗುತ್ತಿದೆ. ಆದ್ದರಿಂದ ತುರ್ತಾಗಿ ದಾರಿದೀಪ ಅಳವಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

-ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.