“ನಮ್ಮ ಕೈತೋಟ-ನಮ್ಮ ಆಹಾರ” ತರಬೇತಿಗೆ ಅಪೂರ್ವ ಸ್ಪಂದನೆ


Team Udayavani, Feb 16, 2023, 10:42 AM IST

kaithota 1

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ನೇತೃತ್ವದಲ್ಲಿ ಉದಯವಾಣಿ ದಿನಪತ್ರಿಕೆ ವತಿಯಿಂದ ಸಾವಯವ ಕೃಷಿಕ ಗ್ರಾಹಕ ಬಳಗದ ಸಹಕಾರದೊಂದಿಗೆ ಮಂಗಳೂರು ವಿ.ವಿ.ಯ ಕೊಣಾಜೆ ಮಂಗಳಗಂಗೋತ್ರಿಯ ಮಂಗಳಾ ಸಭಾಂಗಣದಲ್ಲಿ “ಸಾವಯವ ಕೃಷಿ ಸ್ವಾವಲಂಬನೆಯ ‘ಖುಷಿ’ ಸರಣಿಯ “ನಮ್ಮ ಕೈತೋಟ – ನಮ್ಮ ಆಹಾರ’ 14ನೇ ತರಬೇತಿ ಕಾರ್ಯಕ್ರಮ ಬುಧವಾರ ಯಶಸ್ವಿಯಾಗಿ ನಡೆಯಿತು.

ಸಭಾ ಕಾರ್ಯಕ್ರಮ ಉದ್ಘಾಟನೆಯ ಬಳಿಕ ಇಬ್ಬರು ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಮಾರ್ಗದರ್ಶನ ಜರ ಗಿತು. ಸಾವಯವ ಕೃಷಿಕರಾದ ಸ್ನೇಹಾ ಭಟ್‌ ಮಾತನಾಡಿ, ಪ್ರಕೃತಿಯಿಂದ ಮಾತ್ರ ಆರೋಗ್ಯಕರ ಆಹಾರ ಸಿಗಲು ಸಾಧ್ಯ. ಹೀಗಾಗಿ ಗಾರ್ಡನಿಂಗ್‌ ಮಾಡುವ ಬಗ್ಗೆ ಆದ್ಯತೆ ನೀಡಬೇಕಿದೆ. ತರಕಾರಿ, ಹೂ, ಹಣ್ಣಿನ ಗಿಡಗಳನ್ನು ಬೆಳೆಯಲು ಸಾಕಷ್ಟು ಅವಕಾಶಗಳಿವೆ. ಬೇರೆ ಬೇರೆ ಮಾದರಿಯಲ್ಲಿ ಗಿಡ ನೆಡಲು ಅವಕಾಶವಿದೆಯಾದರೂ ಮಣ್ಣಿನ ಪಾತ್ರೆ ಸಹಿತ ಪರಿಸರ ಸ್ನೇಹಿಯಾಗಿ ಗಿಡ ನೆಡುವ ಬಗ್ಗೆ ಹೆಚ್ಚು ಆದ್ಯತೆ ನೀಡಬೇಕು. ಯಾವುದೋ ಒಂದು ಬೀಜ ತಂದು ನೆಟ್ಟರೆ ಸಾಲದು. ಅದು ಆರೋಗ್ಯಕರವಾಗಿರಬೇಕು ಎಂದರು.

ಬೇರೆಯವರ ಮನೆಯ ಹೂವಿನ ಗಿಡದಿಂದ ಹೂ ತಂದು ದೇವರಿಗೆ ಅರ್ಪಿಸುವ ಬದಲು ನಮ್ಮ ಮನೆಯಲ್ಲಿಯೇ ಹೂ ಗಿಡ ಬೆಳೆಸುವ ಮನೋಭಾವ ರೂಢಿಸಿಕೊಳ್ಳಬೇಕು. ಹೀಗಾಗಿ ನೀವು ಬೆಳೆದ ಒಂದು ಗಿಡದಲ್ಲಿ ಆಗುವ ಸೌತೆಕಾಯಿ, ಬದನೆ ಅಥವಾ ಯಾವುದೇ ತರಕಾರಿಯಿಂದ ಸಿಗುವ ಖುಷಿ ಅಪರಿಮಿತವಾದದ್ದು. ಹೀಗಾಗಿ ಗಾರ್ಡನಿಂಗ್‌ ಬಗ್ಗೆ ಆಸಕ್ತಿ ಮೂಡಿಸೋಣ; ಜತೆಗೆ ಮಕ್ಕಳನ್ನು ಅದರಲ್ಲಿ ತೊಡಗಿಸಿಕೊಳ್ಳುವ ಮನೋಭಾವ ಬೆಳೆಸೋಣ ಎಂದರು.

ಆಹಾರ ವಿಷಮುಕ್ತವಾಗಲಿ ಸಾವಯವ ಕೃಷಿಕರಾದ ಹರಿಕೃಷ್ಣ ಕಾಮತ್‌ ಪುತ್ತೂರು ಮಾತನಾಡಿ, ನಾವು ತಿನ್ನುವ ಬಹುತೇಕ ಆಹಾರವೂ ಈಗ ಗರಿಷ್ಠ ಪ್ರಮಾಣದಲ್ಲಿ ಕಲಬೆರಕೆಯದ್ದಾಗಿದೆ. ತರಕಾರಿಯಲ್ಲಿ ಬೀಜ ಹಾಳಾಗಬಾರದು ಎಂಬ ಕಾರಣಕ್ಕೆ ರಾಸಾಯನಿಕ ಲೇಪನ, ಮೊಳಕೆ ಬರಲು ಮತ್ತೂಂದು ರಾಸಾಯನಿಕ ಸಿಂಪಡಣೆ ಸಹಿತ ಹಂತ ಹಂತವಾಗಿ ಗಿಡಕ್ಕೆ ಸುಮಾರು 3 ವಾರ ಕೀಟನಾಶಕ, ರಸಗೊಬ್ಬರ ಹಾಕಿ ಅದರಿಂದ ಬಂದ ತರಕಾರಿ ಮಾರುಕಟ್ಟೆಗೆ ಬರುತ್ತದೆ. ಇದು ಸಾಲದೆಂಬಂತೆ, ಮಾರುಕಟ್ಟೆಯಲ್ಲಿ ಚಂದ ಕಾಣಬೇಕು, ಬೇಗನೆ ಹಾಳಾಗಬಾರದು. ಬೇಗ ಹಣ್ಣಾಗಬೇಕು ಎಂಬ ದುರಾಸೆಯಿಂದ ರಾಸಾಯನಿಕ ಮಿಶ್ರಣ ಮಾಡಲಾಗುತ್ತಿದೆ ಎಂದರು. ನಾವು ಚಿಕ್ಕವರಿರುವಾಗ ಬಿಪಿ, ಶುಗರ್‌ ಸಮಸ್ಯೆ ಇರಲಿಲ್ಲ.

ಆದರೆ ಈಗ ಬಿಪಿ, ಶುಗರ್‌, ಕ್ಯಾನ್ಸರ್‌, ಹೃದಯ ಸಂಬಂಧಿ ಕಾಯಿಲೆಗಳದ್ದೇ ಸುದ್ದಿ. ಯಾವುದೇ ಬ್ಯಾಕ್ಟೀರಿಯಾ, ವೈರಸ್‌ನಿಂದ ಇದು ಬರುವುದಲ್ಲ. ಬದಲಾಗಿ, ನಾವು ತಿನ್ನುವ ಆಹಾರ ಹಾಗೂ ನಮ್ಮ ಜೀವನ ಪದ್ಧತಿಯಿಂದಾಗಿ ಇದು ಬರುತ್ತದೆ. ಹೀಗಾಗಿ ಇದರಿಂದ ಮುಕ್ತಿ ಸಿಗಲು ನಾವು ತಿನ್ನುವ ಆಹಾರವನ್ನು ವಿಷಮುಕ್ತಗೊಳಿಸಬೇಕು ಎಂದರು.

ಗಮನ ಸೆಳೆದ ವಸ್ತು ಪ್ರದರ್ಶನ

ಸಾವಯವ ತರಕಾರಿ, ಕೈತೋಟ ಬೆಳೆಸುವುದು ಹೇಗೆ, ಅಲಂಕಾರಿಕ ಗಿಡ ಪಾಲನೆ ಕುರಿತಂತೆ ತರಬೇತಿ ನಡೆಯಿತು. ಜತೆಗೆ, ಉತ್ತಮ ತಳಿಯ ತರಕಾರಿ ಬೀಜ, ವಿವಿಧ ಗೊಬ್ಬರಗಳು, ತೋಟಗಾರಿಕೆ ವಸ್ತುಗಳ ಪ್ರದರ್ಶನ ಗಮನಸೆಳೆಯಿತು. ನಗರದ ಸಣ್ಣ ಸ್ಥಳದಲ್ಲಿಯೂ ಗಿಡ ನೆಡುವ ಪರಿಕಲ್ಪನೆಯನ್ನು ಮಾದರಿ ರೂಪದಲ್ಲಿ ಪ್ರದರ್ಶಿಸಲಾಯಿತು. ಜತೆಗೆ ಸಾವಯವ ಉತ್ಪನ್ನಗಳ ಮಾರಾಟ ನಡೆಯಿತು.

ಟಾಪ್ ನ್ಯೂಸ್

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.