ಹಾಲು ಒಕ್ಕೂಟಗಳಿಗೆ ಕೊರೊನಾ ಹಾಲಾಹಲ : ಹಾಲು ಸಂಗ್ರಹ ಹೆಚ್ಚಳ, ಮಾರಾಟ ಇಳಿಕೆ


Team Udayavani, May 31, 2021, 7:00 AM IST

ಹಾಲು ಒಕ್ಕೂಟಗಳಿಗೆ ಕೊರೊನಾ ಹಾಲಾಹಲ : ಹಾಲು ಸಂಗ್ರಹ ಹೆಚ್ಚಳ, ಮಾರಾಟ ಇಳಿಕೆ

ಶಿವಮೊಗ್ಗ: ರಾಜ್ಯಾದ್ಯಂತ ಹಾಲು ಉತ್ಪಾದನೆಯಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, ಲಾಕ್‌ಡೌನ್‌ ಕಾರಣ ನಿಗದಿತ ಪ್ರಮಾಣದಲ್ಲಿ ಹಾಲು, ಮೊಸರು ಮಾರಾಟವಾಗದೆ ಒಕ್ಕೂಟಗಳು ಒತ್ತಡಕ್ಕೆ ಸಿಲುಕಿವೆ.

ಎರಡು ತಿಂಗಳ ಹಿಂದೆ 70 ಲಕ್ಷ ಲೀ. ಆಸುಪಾಸು ಇದ್ದ ದೈನಿಕ ಹಾಲು ಸಂಗ್ರಹ ಮೇಯಲ್ಲಿ 90 ಲಕ್ಷ ಲೀ. ವರೆಗೆ ಹೆಚ್ಚಿದೆ. ಕೊರೊನಾ, ಲಾಕ್‌ಡೌನ್‌ ಕಾರಣ ಸಭೆ, ಸಮಾರಂಭಗಳಿಗೆ ಕಡಿವಾಣ ಬಿದ್ದಿದ್ದು, ಹಾಲು ಮಾರಾಟದಲ್ಲಿ ತೀವ್ರ ಕುಸಿತ ಉಂಟಾಗಿದೆ. ಉತ್ಪಾದನೆ ಏರಿಕೆ, ಮಾರಾಟ ಕಡಿಮೆ ಹಾಲು ಒಕ್ಕೂಟ ಗಳಿಗೆ ನುಂಗಲಾರದ ತುತ್ತಾಗಿದೆ. ಬಾಕಿ ಹಾಲಿನಿಂದ ಪುಡಿ ಉತ್ಪಾದನೆ ಲಾಭದಾಯಕವಲ್ಲ. ಆದರೂ ಅದನ್ನೇ ಅವಲಂಬಿಸುವುದು ಅನಿವಾರ್ಯವಾಗಿದೆ.

ಮೊಸರು, ಮಜ್ಜಿಗೆ, ಹಾಲು, ಸಿಹಿತಿನಿಸು ಎಂದು ಅಂದಾಜು 45 ಲಕ್ಷ ಲೀ. ಹಾಲು ಖರ್ಚಾಗು ತ್ತಿದೆ. ಉಳಿದ ಹಾಲನ್ನು ಪುಡಿಗಾಗಿ ಕಳುಹಿಸಲಾಗುತ್ತಿದೆ.

ಆದಾಯಕ್ಕಿಂತ ನಷ್ಟ ಜಾಸ್ತಿ
ಪ್ರಸ್ತುತ 1 ಕೆ.ಜಿ. ಹಾಲಿನ ಪುಡಿಗೆ 180 ರೂ. ಇದೆ. ಇದರ ಉತ್ಪಾದನೆಗೆ 10 ಲೀ. ಹಾಲು ಬೇಕು. ಒಕ್ಕೂಟಗಳು ಹೈನುಗಾರರಿಂದ ಪ್ರತೀ ಲೀ.ಗೆ ಕನಿಷ್ಠ 23ರಿಂದ 29.50 ರೂ. ನೀಡಿ ಖರೀದಿಸುತ್ತವೆ. ಈ ನಷ್ಟ ಭರಿಸಬೇಕಾದರೆ 1 ಕೆ.ಜಿ. ಪೌಡರ್‌ಗೆ 230 ರೂ.ನಿಂದ 300 ರೂ.ವರೆಗೆ ದರ ನಿಗದಿ ಮಾಡಬೇಕು. ದರ ಹೆಚ್ಚಿಸಿದರೆ ಮಾರಾಟ ಕುಸಿಯುತ್ತದೆ. ಶಾಲಾ ಮಕ್ಕಳಿಗೆ ಹಾಲಿನ ಪುಡಿ ನೀಡಲಾಗುತ್ತಿತ್ತು. ಈಗ ಅದೂ ಇಲ್ಲ.

ಕರಾವಳಿ ಗ್ರಾಹಕರಿಗೆ ಸಿಗಲಿದೆ ಹೆಚ್ಚು ಹಾಲು
ಮಂಗಳೂರು, ಮೇ 30: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟವು ಜೂ. 1ರಿಂದ ಗ್ರಾಹಕರಿಗೆ ಪ್ರತೀ ಅರ್ಧ ಲೀಟರ್‌ಗೆ 20 ಮಿ.ಲೀ.ಗಳಂತೆ ಹೆಚ್ಚುವರಿ ಹಾಲು ನೀಡಲಿದೆ.

ಲಾಕ್‌ಡೌನ್‌ ಪರಿಣಾಮ ಶುಭ ಸಮಾರಂಭ, ದೇವಸ್ಥಾನ, ಹೊಟೇಲ…ಗಳಿಗೆ ನಿರ್ಬಂಧ ಇರುವುದರಿಂದ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದಲ್ಲೂ ಹಾಲು ಉಳಿಯುತ್ತಿದೆ. ಇದರ ಪ್ರಯೋಜನವನ್ನು ಗ್ರಾಹಕರಿಗೆ ಒದಗಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರಸ್ತುತ ಒಕ್ಕೂಟದಲ್ಲಿ ದಿನಂಪ್ರತಿ ದಾಖಲೆಯ 5.60 ಲಕ್ಷ ಲೀ. ಹಾಲು ಸಂಗ್ರಹವಾಗುತ್ತಿದ್ದು, ಸುಮಾರು 1.50 ಲಕ್ಷ ಲೀ. ಉಳಿಯುತ್ತಿದೆ ಎಂದು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ತಿಳಿಸಿದ್ದಾರೆ.

ಗ್ರಾಹಕರಿಗೆ ಹೆಚ್ಚುವರಿ ಹಾಲು ಒದಗಿಸುವುದ ರಿಂದ ಸುಮಾರು 12 ಸಾವಿರ ಲೀ. ಹೆಚ್ಚುವರಿ ಹಾಲು ವಿಲೇವಾರಿ ಆಗಲಿದೆ ಎಂದಿದ್ದಾರೆ.

ಹಾಲು ಸಾಕಷ್ಟು ಉಳಿಯುತ್ತಿರುವುದರಿಂದ ಪುಡಿ ಉತ್ಪಾದಿಸುವ ಅನಿವಾರ್ಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರವೇ 64 ಲಕ್ಷ ಶಾಲಾ ಮಕ್ಕಳಿಗಾಗಿ 144 ರೂ. ದರದಲ್ಲಿ ಅರ್ಧ ಕೆ.ಜಿ. ಪ್ಯಾಕೆಟ್‌ ಖರೀದಿಸಿ ವಿತರಿಸಿದರೆ ಸರಕಾರಕ್ಕೆ ಕೇವಲ 92 ಕೋ.ರೂ. ಮಾತ್ರ ವೆಚ್ಚವಾಗುತ್ತದೆ. ಇದನ್ನು ಸಿಎಂ ಗಮನಕ್ಕೆ ತರಲಾಗಿದೆ.
– ಬಾಲಚಂದ್ರ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.