Nandini: ಹಾಲು-ಮೊಸರಿನ ಬೆಲೆ ಏರಿಕೆ?

ದರ ಪರಿಷ್ಕರಣೆಗೆ ಪ್ರಸ್ತಾಪ ಸಲ್ಲಿಸಿದ ಹಾಲು ಒಕ್ಕೂಟಗಳು

Team Udayavani, Nov 10, 2023, 11:42 PM IST

NANDINI MILK

ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಿಸಲು ಹಾಲು ಒಕ್ಕೂಟಗಳು ಸರಕಾರದ ಮುಂದೆ ಪ್ರಸ್ತಾವ ಸಲ್ಲಿಸಿದ್ದು, ಹೊಸ ವರ್ಷದ ಆರಂಭದಲ್ಲಿ ಹಾಲು-ಮೊಸರಿನ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ. ಹಾಲು ಒಕ್ಕೂಟಗಳು ತಮಗೆ ನಷ್ಟವಾಗುತ್ತಿರುವ ಕಾರಣ ದರ ಪರಿಷ್ಕರಿಸಬೇಕು ಎಂದು ಪ್ರಸ್ತಾವ ಸಲ್ಲಿಸಿವೆ. ಆದರೆ ಸದ್ಯ ದರ ಏರಿಸುವ ಪ್ರಸ್ತಾವ ಸರಕಾರದ ಮುಂದಿಲ್ಲ ಎಂದು ಪಶುಸಂಗೋಪನೆ ಸಚಿವ ವೆಂಕಟೇಶ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅನ್ಯ ರಾಜ್ಯದ ಹಾಲಿನ ದರ ಹಾಗೂ ಕರ್ನಾಟಕದ ಹಾಲಿನ ದರಗಳ ನಡುವಿನ ವ್ಯತ್ಯಾಸದ ಅಂಕಿ ಅಂಶವನ್ನು ಸುದ್ದಿಗಾರರ ಮುಂದೆ ಪ್ರದರ್ಶಿಸಿದ ಅವರು, ಹಾಲಿನ ದರ ಏರಿಸುವಂತೆ ರೈತರ ಒತ್ತಡವೂ ಇದೆ ಎನ್ನುವ ಮೂಲಕ ಪರೋಕ್ಷವಾಗಿ ಮುಂದಿನ ದಿನಗಳಲ್ಲಿ ದರ ಏರಿಸುವ ಸುಳಿವು ನೀಡಿದರು.

ಈ ಹಿಂದೆ ಪ್ರತಿ ಲೀಟರ್‌ ಮೇಲೆ 5 ರೂ. ಏರಿಸುವಂತೆ ಆಗ್ರಹ ಇದ್ದಾಗ 3ರೂ. ಏರಿಸಲಾಗಿತ್ತು. ಅಮೂಲ್‌ 2022ರ ಮಾರ್ಚ್‌ನಿಂದ ಈ ವರೆಗೆ ಐದು ಬಾರಿ ಒಟ್ಟಾರೆ 12 ರೂ. ಹೆಚ್ಚಿಸಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲೇ ಕಡಿಮೆ ಬೆಲೆ ಹಾಲು ಮಾರಾಟವಾಗುತ್ತಿದೆ ಎಂದು ಹೇಳಿದರು.

ಮೂರು ಬೇಡಿಕೆ
ಪ್ರಸ್ತುತ ಕ್ಷೀರ ಭಾಗ್ಯ ಯೋಜನೆಯಡಿ ಪೂರೈಕೆಯಾಗುತ್ತಿರುವ ಕೆನೆ ಭರಿತ ಹಾಲಿನ ಪುಡಿಯ ಉತ್ಪಾದನೆ ವೆಚ್ಚ ಪ್ರತಿ ಕೆಜಿಗೆ 348.32 ರೂ. ಇದೆ. ಜತೆಗೆ ಜಿಎಸ್‌ಟಿ ಪಾವತಿಸಬೇಕು. ಸರಕಾರ ನೀಡುತ್ತಿರುವ ದರ 300 ರೂ. ಮಾತ್ರ. ಹೀಗಾಗಿ ಪ್ರತಿ ಕೆಜಿಗೆ 48.32 ರೂ.ನಷ್ಟು ನಷ್ಟವಾಗುತ್ತಿದೆ. ಆದ್ದರಿಂದ ಕ್ಷೀರ ಭಾಗ್ಯ ಯೋಜನೆಯಡಿ ನೀಡುತ್ತಿರುವ ಹಾಲಿನ ಪುಡಿ ದರವನ್ನು 400 ರೂ.ಗೆ ಹೆಚ್ಚಿಸುವಂತೆ ಮಹಾ ಮಂಡಲ ಸರಕಾರವನ್ನು ಆಗ್ರಹಿಸಿದೆ.

ಒಕ್ಕೂಟಗಳ ಮುಂದಿನ ಆರ್ಥಿಕ ಬೆಳವಣಿಗೆ ಮತ್ತು ಹಿತದೃಷ್ಟಿಯಿಂದ ಕನಿಷ್ಠ 6 ತಿಂಗಳಿಗೊಮ್ಮೆ ಗರಿಷ್ಠ 5ರಷ್ಟು ಮಿತಿಗೊಳಪಟ್ಟು ಮಾರಾಟ ದರ ಹೆಚ್ಚಿಸುವುದು ಸೂಕ್ತ, ಹಾಗೆಯೇ ದರ ಪರಿಷ್ಕರಣೆಯನ್ನು ಕರ್ನಾಟಕ ಹಾಲು ಮಹಾಮಂಡಲದ ಹಂತದಲ್ಲೇ ಕೈಗೊಳ್ಳಲು ಅನುಮತಿ ನೀಡುವಂತೆ ಕೋರಲಾಗಿದೆ. ಮಹಾಮಂಡಲವು ವಿತರಿಸುವ ಪ್ರತಿ ಕೆಜಿ ಪಶು ಆಹಾರಕ್ಕೆ 2 ರೂ.ಯಂತೆ ಒಟ್ಟಾರೆ 3 ತಿಂಗಳ ಅವಧಿಗೆ 45 ಕೋಟಿ ರೂ. ಅನುದಾನವನ್ನು ವಿಪತ್ತು ನಿರ್ವಹಣೆ ನಿಧಿಯಿಂದ ಕೊಡಬೇಕೆಂದೂ ಕೋರಿಕೆ ಮಂಡಿಸಿದೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.