ಮೃತ್ಯು ಕೂಪವಾದ ರಾ.ಹೆದ್ದಾರಿ-234 ! ಗಣ್ಯರು ಇದೇ ರಸ್ತೆಯಲ್ಲಿ ಓಡಾಡಿದರೂ ಈ ದುಸ್ಥಿತಿ


Team Udayavani, Nov 5, 2020, 1:32 PM IST

ಮೃತ್ಯು ಕೂಪವಾದ ರಾ.ಹೆದ್ದಾರಿ-234 ! ಗಣ್ಯರು ಇದೇ ರಸ್ತೆಯಲ್ಲಿ ಓಡಾಡಿದರೂ ಈ ದುಸ್ಥಿತಿ

ಚಿಕ್ಕಬಳ್ಳಾಪುರ: ನಗರವನ್ನು ಸ್ವತ್ಛ ಮತ್ತು ಹಸಿರುಮಯ ಮಾಡಲು ಒಂದು ಕಡೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಪಣತೊಟ್ಟಿದರೆ, ಮತ್ತೂಂದೆಡೆ ಜಿಲ್ಲಾ ಕೇಂದ್ರದಿಂದ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-234 ಹಾಳಾಗಿ ಮೃತ್ಯುಕೂಪವಾಗಿ ಪರಿವರ್ತನೆಗೊಂಡಿದೆ.

ಜಿಲ್ಲಾ ಕೇಂದ್ರದಿಂದ ಶಿಡ್ಲಘಟ್ಟ ಮಾರ್ಗದ ರಾಷ್ಟ್ರೀಯ ಹೆದ್ದಾರಿ 234ರಲ್ಲಿ ಗುಂಡಿಗಳು ಬಿದ್ದು ಹಾಳಾಗಿದ್ದು, ಈ ಮಾರ್ಗದಲ್ಲಿ
ಸಂಚರಿಸುವ ದ್ವಿಚಕ್ರ ವಾಹನ ಸವಾರರು ಅಂಗೆ„ಯಲ್ಲಿ ಜೀವವಿಟ್ಟುಕೊಂಡು ಪ್ರತಿನಿತ್ಯ ಹರಸಾಹಸ ಮಾಡುವಂತಾಗಿದೆ.
ಗಣ್ಯರ ಓಡಾಟ: ಜಿಲ್ಲಾ ಕೇಂದ್ರದಿಂದ ಕೇವಲ ಒಂದು ಕಿ.ಮೀ. ಅಂತರದಲ್ಲಿರುವ ರಾಷ್ಟ್ರೀಯ ಹೆದ್ದಾರಿ 234 ಹದಗೆಟ್ಟಿರುವುದನ್ನು ನೋಡಿದರೆ ಜಿಲ್ಲಾ ಹೆದ್ದಾರಿಗಿಂತಲೂ ಕಡೆಯಾಗಿದೆ ಎಂಬ ಅನುಮಾನ ಮೂಡುವಂತಾಗಿದೆ. ಇದೇ
ಮಾರ್ಗದಲ್ಲಿ ಪ್ರತಿನಿತ್ಯ ಜಿಲ್ಲಾಧಿಕಾರಿಗಳು, ಎಸ್ಪಿ, ಜಿಲ್ಲಾ ಮಟ್ಟದ ಬಹುತೇಕ ಅಧಿಕಾರಿಗಳು ಮತ್ತು ಇಲಾಖಾ ಪ್ರಗತಿ ಪರಿಶೀಲನಾ ಸಭೆ ಸಹಿತ ಬೇರೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್‌ ಸಹಿತ ಜಿಲ್ಲೆಗೆ
ಆಗಮಿಸುವ ಗಣ್ಯ ವ್ಯಕ್ತಿಗಳು ಸಂಚರಿಸುತ್ತಾರೆ.

ಇದನ್ನೂ ಓದಿ: ಬೆಳ್ತಂಗಡಿ : ಮೂರು ವರ್ಷದ ಮಗು ಆರಾಧ್ಯಳ ಚಿಕಿತ್ಸೆಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿಎಸ್ ವೈ

ಆದರೆ ಗುಂಡಿಗಳಿಂದ ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿಯನ್ನು ದುರಸ್ಥಿ ಅಥವಾ ಅಭಿವೃದ್ಧಿಗೊಳಿಸಲು ಗಮನಹರಿಸದಿರುವುದು ದುರಂತೆವೇ ಸರಿ.

ಪ್ರಾಧಿಕಾರದ ಅಧಿಕಾರಿಗಳಿಗೆ ಹಿಡಿಶಾಪ:
ರಾಷ್ಟ್ರೀಯ ಹೆದ್ದಾರಿ 234 ಮೂಲಕ ಹೆ„ದರಾಬಾದ್‌, ಗೌರಿಬಿದನೂರು, ಮಧುಗಿರಿ ವಯಾ ಮುಂಬೆ„ ಮತ್ತು ದೆಹಲಿಗೆ ಪ್ರತಿನಿತ್ಯ
ನೂರಾರು ವಾಹನಗಳು ಸಂಚರಿಸುತ್ತಿವೆ. ಈ ಭಾಗದ ರೈತರು ಬೆಳೆದ ತರಕಾರಿಗಳನ್ನು ಸರಕು ಸಾಗಾಣಿಕೆ ವಾಹನಗಳ ಮೂಲಕ ಇದೇ ಮಾರ್ಗದಿಂದ ರಾಜ್ಯದ ನಾನಾ ಭಾಗಗಳಲ್ಲಿ ರಫ್ತು ಮಾಡುತ್ತಾರೆ. ಜೊತೆಗೆ ಚಿಂತಾಮಣಿ ಶಿಡ್ಲಘಟ್ಟ ತಾಲೂಕಿನ ನಾಗರಿಕರು ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರಕ್ಕೆ ಬರಲು ಇದೇ ಮಾರ್ಗ ಅವಲಂಬಿಸಿದ್ದಾರೆ. ಆದರೆ ರಾಷ್ಟ್ರೀಯ ಹೆದ್ದಾರಿ ಶೋಚನೀಯ ಸ್ಥಿತಿಯನ್ನು ನಿತ್ಯ ದರ್ಶನ ಮಾಡುವ ವಾಹನ ಸವಾರರು, ಜನಪ್ರತಿನಿಧಿಗಳು ಮತ್ತು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಶಾಪ ಹಾಕಿ ತೆರಳುತಿದ್ದಾರೆ.

ಕಿತ್ತು ಬಂದಿರುವ ಕಬ್ಬಿಣ: ರಾ.ಹೆ.234 ರಲ್ಲಿ (ಅಣಕನೂರು ಸಮೀಪ) ರಸ್ತೆಗೆ ಹಾಕಿರುವ ಕಬ್ಬಿಣವು ಸಹ ಕಿತ್ತು ಬಂದಿದ್ದು, ದ್ವಿಚಕ್ರ ವಾಹನ ಸವಾರರ ಪಾಲಿಗೆ ಮೃತ್ಯು ಕೂಪವಾಗಿದ್ದು, ಅನಾಹುತ ಸಂಭವಿಸುವ ಆತಂಕ ಮನೆ ಮಾಡಿದೆ. ಯಾವ ರೀತಿ ಹದಗೆಟ್ಟಿದೆ ಎಂದರೆ ಡಾಂಬರು ಕಿತ್ತು ಕಬ್ಬಿಣ ಕಾಣಿಸುತ್ತಿದೆ. ಕೆಲವೊಮ್ಮೆ ದ್ವಿಚಕ್ರ ವಾಹನ ಸವಾರರು ಕಬ್ಬಿಣ ತಪ್ಪಿಸುವ ಭರದಲ್ಲಿ ಕೆಳಗೆ ಬಿದ್ದು ಗಾಯಗೊಂಡಿರುವ ನಿದರ್ಶನಗಳಿವೆ. ಈಗಾಲಾದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನ ಹರಿಸಿ ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ರಾಷ್ಟ್ರೀಯ ಹೆದ್ದಾರಿ 234ನ್ನು ಅಭಿವೃದ್ಧಿಗೊಳಿಸಲು ಮುಂದಾಗಬೇಕಾಗಿದೆ.

– ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.