ಅಧಿಕಾರಿ ಜತೆ ಡಿವಿಎಸ್ ಚರ್ಚೆ ಫಲ : ಕಬಡ್ಡಿ ಆಟಗಾರ ಪ್ರತಾಪ್ಗೆ ಅವಕಾಶ ನೀಡಲು ಸಮ್ಮತಿ
Team Udayavani, Oct 7, 2020, 11:47 AM IST
ಪುತ್ತೂರು: ಭಾರತ ಕಬಡ್ಡಿ ತಂಡದ ಹಿರಿಯರ ವಿಭಾಗದ ಸಂಭಾವ್ಯ ಆಟಗಾರರ ಯಾದಿಯಲ್ಲಿ ರಾಜ್ಯದ ಏಕೈಕ ಕಬಡ್ಡಿ ಆಟಗಾರನಾಗಿ ಆಯ್ಕೆಯಾಗಿ ಮೊದಲನೇ ಹಂತದ ಆನ್ಲೈನ್ ತರಬೇತಿ ಶಿಬಿರದಿಂದ ಕೈಬಿಡಲಾಗಿದ್ದ ಸುಳ್ಯದ ಸಚಿನ್ ಪ್ರತಾಪ್ ಅವರಿಗೆ ಎರಡನೇ ಹಂತದ ತರಬೇತಿ ಶಿಬಿರದಲ್ಲಿ ಅವಕಾಶ ಕಲ್ಪಿಸಲು ದಿಲ್ಲಿ ರಾಷ್ಟ್ರೀಯ ಕಬಡ್ಡಿ ಅಸೋಸಿಯೇಶನ್ ಅಧಿಕಾರಿಗಳು ಸಮ್ಮತಿಸಿದ್ದಾರೆ.
ತರಬೇತಿ ಶಿಬಿರಕ್ಕೆ ಆಹ್ವಾನಿಸದೆ ತಡೆ ಒಡ್ಡಿರುವ ಮಾಹಿತಿ ಪಡೆದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರು ಕಬಡ್ಡಿ ಅಸೋಸಿಯೇಶನ್ನ ಸಿಇಒ ಜತೆಗೆ ಚರ್ಚಿಸಿದ್ದು, ಪೂರಕ ಸ್ಪಂದನೆ ವ್ಯಕ್ತವಾಗಿದೆ. ಐವರ್ನಾಡು ಪಾಲೆಪ್ಪಾಡಿ ನಿವಾಸಿ, ಉಜಿರೆ ಕಾಲೇಜಿನ ಹಳೆವಿದ್ಯಾರ್ಥಿ ಸಚಿನ್ ಅವರನ್ನು ತರಬೇತಿ ಪಟ್ಟಿಯಿಂದ ಕೈ ಬಿಟ್ಟಿರುವ ಬಗ್ಗೆ ಸೆ. 25ರಂದು “ಉದಯವಾಣಿ’ ವಿಸ್ತೃತ ವರದಿ ಪ್ರಕಟಿಸಿತ್ತು. ಅನಂತರದ ಬೆಳವಣಿಗಳ ಬಗ್ಗೆ ವರದಿ ಪ್ರಕಟಿಸಿ ಕ್ರೀಡಾಪಟುವಿಗೆ ನ್ಯಾಯ ಒದಗಿಸುವಂತೆ ಜನಪ್ರತಿನಿಧಿಗಳ, ಅಧಿಕಾರಿಗಳ ಗಮನಕ್ಕೆ ತಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ