ಕರ್ನಾಟಕದಲ್ಲಿರುವ ಪ್ರಮುಖ ಉದ್ಯಾನವನಗಳ ಮಾಹಿತಿ ಇಲ್ಲಿದೆ…


Team Udayavani, Sep 9, 2020, 3:31 PM IST

ಕರ್ನಾಟಕದಲ್ಲಿರುವ ಪ್ರಮುಖ ಉದ್ಯಾನವನಗಳ ಮಾಹಿತಿ ಇಲ್ಲಿದೆ…

1.ನಾಗರಹೊಳೆ ರಾಷ್ಟ್ರೀಯ ಉದ್ಯಾನವನ
ಕೊಡಗು ಮತ್ತು ಮೈಸೂರು ಜಿಲ್ಲೆಗಳ ನಡುವೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳು ಹರಡಿಕೊಂಡಿದೆ. ಕರ್ನಾಟಕ ಅತ್ಯಂತ ಸುಂದರ ಮತ್ತು ದಟ್ಟ ಅರಣ್ಯವಾಗಿದೆ. ಅಪಾರ ಪ್ರಮಾಣದಲ್ಲಿ ಇಲ್ಲಿ ವನ್ಯಜೀವಿ ಮತ್ತು ಸಸ್ಯ ಸಂಕುಲಗಳನ್ನು ಹೊಂದಿದೆ. 1988 ರಲ್ಲಿ ಸ್ಥಾಪನೆ ಮಾಡಲಾಗಿದೆ.
1999ರಲ್ಲಿ ಹುಲಿ ಮೀಸಲು ಪ್ರದೇಶವಾಗಿದೆ ಘೋಷಿಸಲಾಯಿತು.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಕಬಿನಿ,ಲಕ್ಷ್ಮಣ ತೀರ್ಥ ನದಿಗಳು ಹರಿಯುತ್ತದೆ. 250 ಹೆಚ್ಚು ಪಕ್ಷಿಗಳು ಇಲ್ಲಿವೆ.

ಕಪ್ಪು ಚಿರತೆ, ಕಳಿಂಗ ಸರ್ಪಗಳನ್ನು ಇಲ್ಲಿ ಮಾತ್ರ ಕಾಣಬಹುದು. ಇವುಗಳ ಜತೆಗೆ ಹೆಬ್ಟಾವು, ಕಟ್ಟೆ ಹಾವು, ಜಿಂಕೆ, ಕಾಡುಪಾಪ,ನೀರು ನಾಯಿ,ಮೊಸಳೆ,ಮರಕುಟುಕ, ಕರಡಿ, ಚಿರತೆ,ಆನೆ ಸಹಿತ ಅನೇಕ ವನ್ಯ ಜೀವಿ ತಾಣ ಇದಾಗಿದೆ.
ಈ ರಾಷ್ಟ್ರೀಯ ಉದ್ಯಾನವನ ಜೇನು ಕುರುಬರು,ಬೆಟ್ಟ ಕುರುಬರು ಮತು ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗಗಳು ನೆಲೆಬೀಡಾಗಿದೆ.

2. ಅಣಶಿ ರಾಷ್ಟ್ರೀಯ ಉದ್ಯಾನವನ
ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಅಣಶಿ ರಾಷ್ಟ್ರೀಯ ಉದ್ಯಾನವನವಿದೆ.ಕಾಳಿ ಹುಲಿ ಸಂರಕ್ಷಿತ ಪ್ರದೇಶ ಎಂದೂ ಕರೆಯಲಾಗುತ್ತದೆ. ಇಲ್ಲಿ ಕಾಳಿ ನದಿ ಹರಿಯುತ್ತದೆ. ಕಪ್ಪು ಚಿರತೆ,ಹುಲಿ ಮತ್ತು ಆನೆ ಇಲ್ಲಿನ ಪ್ರಮುಖ ಪ್ರಾಣಿಗಳಾಗಿವೆ.
13 ಹುಲಿಗಳು ಅಣಶಿ ರಾಷ್ಟ್ರೀಯ ಉದ್ಯಾನವನದಲ್ಲಿದೆ.
1987ರಲ್ಲಿ ಈ ರಾಷ್ಟ್ರೀಯ ಉದ್ಯಾನವನ್ನು ಸ್ಥಾಪಿಸಲಾಗಿದೆ.

3. ಬಂಡೀಪುರ ರಾಷ್ಟ್ರೀಯ ಉದ್ಯಾನವನ
ಈ ಉದ್ಯಾನವನ್ನು ಹುಲಿ ಸಂರಕ್ಷಣ ಕಾಯ್ಕೆಯಡಿಯಲ್ಲಿ 1974ರಲ್ಲಿ ಸ್ಥಾಪಿಸಲಾಗಿದೆ. ಹಿಂದಿನ ಕಾಲದಲ್ಲಿ ಮೈಸೂರು ಮಹಾರಾಜರು ಬೇಟೆಯಾಡುವ ಪ್ರದೇಶ ಇದ್ದಾಗಿತ್ತು. ಬಂಡೀಪುರ ರಾಷ್ಟ್ರೀಯ ಉದ್ಯಾನವನವೂ ಚಾಮರಾಜನಗರ ಜಿಲ್ಲೆಯಲ್ಲಿದ್ದು, ತಮಿಳುನಾಡಿನ ಮದುಮಲೈ ಮತ್ತು ಕೇರಳದ ವಾಯಾನಾಡ್‌ ವನ್ಯಜೀವಿ ಅಭಯಾರಣ್ಯಕ್ಕೆ ಹೊಂದಿಕೊಂಡಿದೆ. 874 ಕಿ.ಮೀ ವಿಸ್ತ್ರೀರ್ಣಹೊಂದಿದೆ. ಹುಲಿ, ವಿಷಪೂರಿತ ಹಾವುಗಳು,ಕಾಡುಕೋಣ, ಜೀರುಂಡೆಗಳು ಇಲ್ಲಿನ ವಿಶೇಷತೆಗಳು.

4.ಬನ್ನೇರುಘಟ್ಟ ಜೈವಿಕ ಉದ್ಯಾನವನ
ಬೆಂಗಳೂರಿನಿಂದ 22 ಕಿ.ಮೀ ದೂರದಲ್ಲಿ ಈ ಉದ್ಯಾನವನವಿದೆ. 1974ರಲ್ಲಿ ಸ್ಥಾಪಿಸಲಾಗಿದ್ದು 260 ಕಿ.ಮೀ ವಿಸ್ತ್ರೀರ್ಣಹೊಂದಿದೆ. ಇಲ್ಲಿ ಸಫಾರಿ ಜತೆಗೆ ಮೃಗಾಲಯದ ಸಂದರ್ಶನಕ್ಕೂ ಅವಕಾಶವಿದೆ. ದೇಶದ ಮೊದಲ ಬಟರ್‌ ಪ್ಲೆ„ ಪಾರ್ಕ್‌ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 2006 ರಂದು ಸ್ಥಾಪನೆ ಮಾಡಲಾಗಿದೆ. ಬಿಳಿ ಹುಲಿ ಇಲ್ಲಿನ ವಿಶೇಷತೆಯಾಗಿದೆ. ಚಿರತೆ, ಗೋಲ್ಡನ್‌ ಜ್ಯಾಕಲ್‌ (ತೋಳ – ಚಿನ್ನದ ಮೈ ಬಣ್ಣ), ಕಾಡುಹಂದಿ ಸಹಿತ ಅನೇಕ ಪ್ರಾಣಿ, ಸಸ್ಯ ಸಂಕುಲಗಳಿಗೆ ತಾಣವಾಗಿದೆ.

5. ಕುದುರೆಮುಖ ರಾಷ್ಟ್ರೀಯ ಉದ್ಯಾನವನ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಅತ್ಯಂತ ಸುಂದರ ಹಸಿರು ತಾಣಗಳನ್ನು ಹೊಂದಿರುವ ರಾಷ್ಟ್ರೀಯ ಉದ್ಯಾನವನಗಳಲ್ಲಿ ಒಂದಾಗಿದೆ. ಪಶ್ಚಿಮ ಘಟ್ಟದ ಸಾಲಿನಲ್ಲಿ ಈ ಉದ್ಯಾನವನವಿದೆ. ಪವರ್ತ ಶ್ರೇಣಿ, ಹಳ್ಳ-ಕೊಳ್ಳ,ಕಂದಕಗಳು, ತೊರೆಗಳಿಂದ ಕೂಡಿದೆ. ಕುದುರೆಯ ಮುಖವನ್ನು ಹೋಲುವುದರಿಂದ ಇದನ್ನು ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಎಂದು ಕರೆಯಲಾಗುತ್ತದೆ.
ಕರಡಿ, ಬೆಂಗಾಲ್‌ ಟೈಗರ್‌,ಮುಳ್ಳು ಹಂದಿ ಇಲ್ಲಿನ ವಿಶೇಷತೆಗಳಾಗಿದೆ.

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

13-uv-fusion

UV Fusion: ಹದ್ದು ಮೀರದೆ ಹದ್ದಿನಂತಾಗೋಣ

7-uv-fusion

Tour Circle: ಓ ಮಲೆನಾಡಿನ ಮೈ ಸಿರಿಯೇ…

6-mother

Mother: ಕೈ ತುತ್ತು ತಿನ್ನಿಸಿದ ಜೀವ ನಲುಗದಿರಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.