ತತ್ಕ್ಷಣ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಅಂಗಾರ
ಪ್ರಾಕೃತಿಕ ವಿಕೋಪ ಸಂಬಂಧಿ ತಾಲೂಕು ಮಟ್ಟದ ಸಭೆ
Team Udayavani, May 31, 2020, 5:45 AM IST
ಸುಳ್ಯ: ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಾಲೂಕು ಮತ್ತು ಸ್ಥಳೀಯಾಡಳಿತ ಅಧಿಕಾರಿಗಳು ತತ್ಕ್ಷಣ ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಎಸ್.ಅಂಗಾರ ಸೂಚಿಸಿದರು.
ತಾ.ಪಂ.ಸಭಾಂಗಣದಲ್ಲಿ ಮೇ 29ರಂದು ತನ್ನ ಅಧ್ಯಕ್ಷತೆಯಲ್ಲಿ ಜರಗಿದ ತಾಲೂಕು ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.
ರಸ್ತೆ ಬದಿಯ ಅಪಾಯಕಾರಿ ಮರ, ಗೆಲ್ಲು ತೆರವು, ಚರಂಡಿ ದುರಸ್ತಿ ಸಹಿತ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮರ ತೆರವು ಸಂಬಂಧಿಸಿ 11 ದೂರುಗಳು ಬಂದಿದ್ದು, ಆ ಬಗ್ಗೆ ಕ್ರಮ ಜರಗಿಸಲು ಅರಣ್ಯ ಇಲಾಖೆಗೆ ನಿರ್ದೇಶಿಸಲಾಯಿತು. ಮಳೆ ಹಾನಿ ಪರಿಹಾರ ಕಾಮಗಾರಿ ಪ್ರಗತಿ ಬಗ್ಗೆ ಎಂಜಿನಿಯರ್ ಮಾಹಿತಿ ನೀಡಿದರು.
ಭಾಗಶಃ ಉಲ್ಲೇಖ ಬೇಡ
ಪ್ರಾಕೃತಿಕ ವಿಕೋಪದಿಂದ ಮನೆಗೆ ಭಾಗಶಃ ಹಾನಿ ಎಂದು ಅಧಿಕಾರಿಗಳು ವರದಿ ಸಲ್ಲಿಸಿದರೆ ಫಲಾನುಭವಿಗೆ ಅಲ್ಪ ಪರಿಹಾರ ಮಾತ್ರ ಸಿಗುತ್ತದೆ. ಗೋಡೆ, ಅಡಿಪಾಯ ಹಾನಿ ಉಂಟಾದರೆ ಹೊಸ ಮನೆಯೇ ಕಟ್ಟಬೇಕಾಗುತ್ತದೆ. ಹಾಗಾಗಿ ಭಾಗಶಃ ಎಂದು ವರದಿ ಸಲ್ಲಿಸದೆ ಪೂರ್ಣ ಹಾನಿ ಎಂದು ನಮೂದಿಸಿ ಎಂದು ಶಾಸಕರು ಸೂಚಿಸಿದರು. ಬೆಳೆ ನಷ್ಟ ಪರಿಹಾರ ಕೂಡ ಸಮರ್ಪಕವಾಗಿಲ್ಲದ ಕಾರಣ ಅದನ್ನು ಪುನರ್ರೂಪಿಸುವಂತೆ ಸಂಬಂಧಿಸಿದ ಸಚಿವರ ಗಮನಕ್ಕೆ ತರಲಾಗಿದೆ ಎಂದರು.
ಮನೆ ನಿರ್ಮಾಣಕ್ಕೆ ಅರಣ್ಯ ಅಡ್ಡಿ
ಕಲ್ಮಕಾರಿನಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿ ಉಂಟಾದ 9 ಮನೆಗಳಿಗೆ ಸೂರು ಒದಗಿಸಲು ಅರಣ್ಯ ಭೂಮಿ ಅಡ್ಡಿ ಉಂಟಾಗಿದೆ ಎಂದು ತಹಶೀಲ್ದಾರ್ ಹೇಳಿದರು. ಈ ಬಗ್ಗೆ ಅರಣ್ಯ ಅಧಿಕಾರಿ ಗಳಿಂದ ಮಾಹಿತಿ ಪಡೆದ ಶಾಸಕರು, ಉನ್ನತ ಅಧಿಕಾರಿಗಳ ಜತೆ ಚರ್ಚಿಸುವುದಾಗಿ ಹೇಳಿದರು.
ವೇದಿಕೆಯಲ್ಲಿ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಸ್ಥಾಯೀ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ತಹಶೀಲ್ದಾರ್ ಅನಂತಶಂಕರ, ಇಒ ಭವಾನಿಶಂಕರ ಉಪಸ್ಥಿತರಿದ್ದರು.
ಸಣ್ಣಪುಟ್ಟ ಸಮಸ್ಯೆಗಳನ್ನು ಸ್ವಯಂ ನಿಭಾಯಿಸೋಣ
ಸೇತುವೆ, ಕಿಂಡಿ ಅಣೆಕಟ್ಟಿನಲ್ಲಿ ಮರ, ಕಸ ಕಡ್ಡಿ ತುಂಬಿದ್ದರೆ ಅದನ್ನು ತೆರವುಗೊಳಿಸಿ ಮಳೆ ನೀರು ಹರಿಯಲು ವ್ಯವಸ್ಥೆ ಕಲ್ಪಿಸಬೇಕು. ಕಿಂಡಿ ಅಣೆಕಟ್ಟಿಗೆ ಸಂಬಂಧಿಸಿ ಅದರ ಫಲಾನುಭವಿಗಳು ಆ ಕೆಲಸ ನಿರ್ವಹಿಸಬೇಕು. ಪರಿಹಾರ ಸಾಧ್ಯತೆ ಇರುವ ಸಮಸ್ಯೆಗಳಿಗೆ ಜನರೇ ಸ್ಪಂದಿಸುವ ಮನಃಸ್ಥಿತಿ ರೂಢಿಸಿಕೊಳ್ಳಬೇಕು ಎಂದು ಶಾಸಕ ಎಸ್. ಅಂಗಾರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು