ಶಿಕ್ಷಕರ ಸಂಖ್ಯೆ ಹೆಚ್ಚಳವಾದರೆ ಖಾಸಗಿಗೂ ಪೈಪೋಟಿ

ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

Team Udayavani, Oct 3, 2021, 6:30 AM IST

ಶಿಕ್ಷಕರ ಸಂಖ್ಯೆ ಹೆಚ್ಚಳವಾದರೆ ಖಾಸಗಿಗೂ ಪೈಪೋಟಿ

ಉಪ್ಪುಂದ: ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ದಾನಿಗಳ ಸಹಕಾರದಿಂದ ಖಾಸಗಿ ಶಾಲೆಯನ್ನು ಮೀರಿಸುವ ರೀತಿಯಲ್ಲಿ ವರ್ಷದಿಂದ ವರ್ಷಕ್ಕೆ ದಾಖಲಾತಿಯಲ್ಲಿ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ.

92 ವಿದ್ಯಾರ್ಥಿಗಳ ಸೇರ್ಪಡೆ
ನಾವುಂದ ಗ್ರಾ.ಪಂ.ವ್ಯಾಪ್ತಿಯ ರಾ.ಹೆದ್ದಾರಿ 66ರಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಗೆ 88 ವರ್ಷ. ಕಳೆದ ಸಾಲಿನಲ್ಲಿ 219 ವಿದ್ಯಾರ್ಥಿಗಳು ಇದ್ದರೆ ಪ್ರಸ್ತುತ ವರ್ಷದಲ್ಲಿ 131 ಹುಡುಗರು ಹಾಗೂ 141 ಹುಡುಗಿಯರನ್ನೊಳಗೊಂಡಂತೆ 272 ವಿದ್ಯಾರ್ಥಿಗಳಿದ್ದಾರೆ. 1ನೇ ತರಗತಿಗೆ 48 ಮಕ್ಕಳು ಸೇರ್ಪಡಿದ್ದಾರೆ. ಎ, ಬಿ ವಿಭಾಗಗಳಲ್ಲಿ ತರಗತಿ ನಡೆಯುತ್ತದೆ.

ಶಿಕ್ಷಕರ ಕೊರತೆ
ಶಾಲೆಯಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ವಿಭಾಗಗಳಿವೆ. 1ನೇ ತರಗತಿಯಲ್ಲಿ ಎ, ಬಿ ವಿಭಾಗಗಳಿವೆ, 2ನೇ ತರಗತಿ ಯಲ್ಲಿ 44, 3ನೇ ತರಗತಿಯಲ್ಲಿ 48 ಮಕ್ಕಳಿದ್ದು ಎ, ಬಿ ವಿಭಾಗ ಹೊಂದಿದೆ. 4ಮತ್ತು 5ರಲ್ಲಿ 29ಹಾಗೂ 19 ಮಕ್ಕಳಿದ್ದಾರೆ. 6 ಮತ್ತು 7ರಲ್ಲಿ 48 ಮತ್ತು 38 ವಿದ್ಯಾರ್ಥಿಗಳಿದ್ದು ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಎ, ಬಿ ವಿಭಾಗಗಳಿವೆ. ಒಟ್ಟು 272 ವಿದ್ಯಾರ್ಥಿಗಳಿಗೆ 6 ಶಿಕ್ಷಕರಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರು ಸೇರಿದಂತೆ 4 ಶಿಕ್ಷಕರ ಕೊರತೆ ಉಂಟಾಗಿದೆ.

ಎಲ್‌ಕೆಜಿ ಮತ್ತು ಯುಕೆಜಿಯಲ್ಲಿ 30 ಮಕ್ಕಳಿದ್ದಾರೆ. ಹೆತ್ತವರ ಹಾಗೂ ಎಸ್‌ಡಿಎಂಸಿ ಅವರ ಸಹಕಾರ ದಿಂದ ಇಬ್ಬರು ಗೌರವ ಶಿಕ್ಷಕ ರನ್ನು ನೇಮಿಸಲಾಗಿದೆ. ವಿಜ್ಞಾನ, ಗಣಿತ, ಸಮಾಜ ವಿಷಯಕ್ಕೆ ಸಂಬಂಧಿಸಿ ವಿಷಯವಾರು ಶಿಕ್ಷಕರ ಅಗತ್ಯವಿದೆ.

ಇದನ್ನೂ ಓದಿ:ಚೈ-ಸ್ಯಾಮ್ ದಾಂಪತ್ಯ ಮುರಿದು ಬೀಳಲು ಕಾರಣವಾಯ್ತೇ ‘ದಿ ಫ್ಯಾಮಿಲಿ ಮ್ಯಾನ್ 2’ ?

ಕೊಠಡಿ ಕೊರತೆ
ಶಾಲೆಯಲ್ಲಿ ಅನ್ನದಾಸೋಹ ಕೊಠಡಿ ಸೇರಿದಂತೆ12 ತರಗತಿ ಕೋಣೆಗಳಿದ್ದು ಇದರಲ್ಲಿ 5ತರಗತಿ ಕೋಣೆಗಳ ಮಹಡಿ ದುಸ್ಥಿತಿಯಿಂದ ಕೂಡಿದೆ. ತುರ್ತು 5 ಕೊಠಡಿಗಳ ಅಗತ್ಯವಿದೆ.

ಸ್ಥಳೀಯ ಸಂಘ ಸಂಸ್ಥೆಗಳಿಂದ ಕೈ ತೊಳೆಯುವ ಘಟಕ ಅಳವಡಿಸಲಾಗಿದೆ. ದಾನಿಗಳ ಸಹಕಾರದೊಂದಿಗೆ 1.5 ಲಕ್ಷ ರೂ. ವೆಚ್ಚದಲ್ಲಿ ಮಕ್ಕಳ ಪಾರ್ಕ್‌ ನಿರ್ಮಿಸುವ ಯೋಜನೆ ಹೊಂದ ಲಾ ಗಿದೆ. ಹಳೆ ವಿದ್ಯಾರ್ಥಿ ಸಂಘದಿಂದ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಬಸ್‌ ದೂರದ ಗ್ರಾಮೀಣ ಪ್ರದೇಶಗಳಾದ ರಾಗಿಹಕ್ಲು, ಹೇರೂರು, ಕುದ್ರಕೋಡು, ಉಳ್ಳೂರು, ಬಡಾಕರೆ ಸೇರಿದಂತೆ ನಿತ್ಯ 100 ಕಿ.ಮೀ. ವಿದ್ಯಾರ್ಥಿಗಳಿಗಾಗಿ ಸಂಚರಿಸುತ್ತದೆ. ಜನಪ್ರತಿನಿಧಿಗಳ ಹಾಗೂ ಇಲಾಖೆಗಳಿಂದ ಇನ್ನಷ್ಟು ಮೂಲ ಸೌಕರ್ಯಗಳ ಸಮಸ್ಯೆಗಳಿಗೆ ಸ್ಪಂದಿಸಿದರೆ ಖಾಸಗಿ ಶಾಲೆಗಳ ಸಂಖ್ಯೆಯನ್ನು ಮೀರಿಸುವ ವಿಶ್ವಾಸ ಶಿಕ್ಷಕರ ಹಾಗೂ ಎಸ್‌ಡಿಎಂಸಿ ಅವರದ್ದು.

ಮೂಲಸೌಕರ್ಯಗಳ ಸಮಸ್ಯೆ
ನಲಿ-ಕಲಿ ತರಗತಿಗಳಿಗೆ ಕುರ್ಚಿ, ಟೇಬಲ್‌ಗ‌ಳ ಕೊರತೆ ಉಂಟಾಗಿದೆ. ಡೆಸ್ಕ್ ಗಳ ದುರಸ್ತಿ ಮಾಡಲು ಬಾಕಿ ಇದೆ. ಈಗ ಇರುವ 4 ಶೌಚಾಲಯವು ಶಿಥಿಲಗೊಂಡಿದ್ದು ಹೆಚ್ಚುವರಿ ಶೌಚಾಲಯದ ಅಗತ್ಯವಿದೆ. ಗ್ರಾ.ಪಂ. ನರೇಗ ಯೋಜನೆ ಹಾಗೂ ಶಿಕ್ಷಣ ಇಲಾಖೆಯ ಸಹಕಾರದಲ್ಲಿ 5 ಲಕ್ಷ ರೂ.ದಲ್ಲಿ ಶೌಚಾಲಯ ನಿರ್ಮಾಣವಾಗಲಿದೆ ಎನ್ನಲಾಗಿದೆ. ಗ್ರಂಥಾಲಯಕ್ಕೆ ಕಟ್ಟಡದ ಅಗತ್ಯ ಇದೆ. ಪ್ರಯೋಗಾಲಯ, ಕಂಪ್ಯೂಟರ್‌, ಪ್ರೊಜೆಕ್ಟರ್‌, ಕ್ರೀಡಾ ಸಾಮಗ್ರಿಗಳ ಆವಶ್ಯಕತೆ ಇದೆ.

ಭೌತಿಕ ಸೌಲಭ್ಯ ನೀಡಿ
ಎಸ್‌ಡಿಎಂಸಿ ಅವರ ಸಂಪೂರ್ಣ ಸಹಕಾರ ಹಾಗೂ ಹಳೆ ವಿದ್ಯಾರ್ಥಿಗಳ ಮತ್ತು ದಾನಿಗಳ ಬೆಂಬಲದಿಂದ ಸರಕಾರಿ ಶಾಲೆಯು ಖಾಸಗಿ ಶಾಲೆಗಿಂತ ಹೆಚ್ಚು ವ್ಯವಸ್ಥಿತವಾಗಿ ನಡೆಯುತ್ತಿದೆ.ಸರಕಾರ ಭೌತಿಕ ಸೌಲಭ್ಯಗಳನ್ನು ನೀಡಿದರೆ ಖಾಸಗಿ ಶಾಲೆಗೆ ಪೈಪೋಟಿ ನೀಡಬಹುದು.
-ಶೇಖರ, ಮುಖ್ಯಶಿಕ್ಷಕ

-ಕೃಷ್ಣ ಬಿಜೂರು

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.