Navy: ನೌಕಾಪಡೆ ಅಧಿಕಾರಿಗಳಿಗೆ ಗಲ್ಲು: ಪ್ರಕರಣಕ್ಕೆ ಪಾಕಿಸ್ತಾನ ಲಿಂಕ್
ಭಾರತದ ವಿರುದ್ಧ ಜಾಲತಾಣಗಳಲ್ಲಿ ಐಎಸ್ಐನಿಂದ ವ್ಯವಸ್ಥಿತ ಪ್ರಚಾರ
Team Udayavani, Oct 27, 2023, 8:57 PM IST
ನವದೆಹಲಿ: ಕತಾರ್ನಲ್ಲಿ ಭಾರತೀಯ ನೌಕಾಪಡೆಯ 8 ನಿವೃತ್ತ ಅಧಿಕಾರಿಗಳಿಗೆ ಗಲ್ಲು ಶಿಕ್ಷೆಯಾಗುವಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐನ ಕರಾಳ ಹಸ್ತದ ಜಾಲವಿರುವ ಶಂಕೆ ವ್ಯಕ್ತವಾಗಿದೆ. ಕಳೆದ ವರ್ಷದ ಆಗಸ್ಟ್ನಲ್ಲಿ ಅಧಿಕಾರಿಗಳ ಬಂಧನದ ವೇಳೆ, ಅವರು ಇಸ್ರೇಲ್ ಪರ ಗೂಢಚರ್ಯೆ ನಡೆಸುತ್ತಿದ್ದರು ಎಂದು ಪಾಕ್ ಜಾಲತಾಣಗಳಲ್ಲಿ ಸುದ್ದಿಯಾಗಿತ್ತು.
ಅಲ್ಲದೇ, ಅ.26ರಂದು ಪಾಕಿಸ್ತಾನದ “ಎಕ್ಸ್ಪ್ರೆಸ್ ಟ್ರಿಬ್ಯೂನ್’ ಪತ್ರಿಕೆಯಲ್ಲಿ “ಗೂಢಚರ್ಯೆ ಆರೋಪದಲ್ಲಿ ಕತಾರ್ನ ಜೈಲಲ್ಲಿ ಇರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ಆಗಲಿದೆ” ಎಂಬ ಸುದ್ದಿ ಪ್ರಕಟವಾಗಿತ್ತು. ಅದೇ ದಿನ ಅಂದರೆ ಗುರುವಾರ ಕತಾರ್ ಕೋರ್ಟ್ ಶಿಕ್ಷೆಯನ್ನೂ ಪ್ರಕಟಿಸಿತ್ತು. ಈ ಅಧಿಕಾರಿಗಳ ವಿರುದ್ಧ ಪಾಕ್ನ ಜಾಲತಾಣಗಳಲ್ಲಿ ಐಎಸ್ಐ ಭಾರೀ ಅಪಪ್ರಚಾರ ನಡೆಸಿತ್ತು.
ಕಾನೂನು ಹೋರಾಟಕ್ಕೆ ಸಿದ್ಧ:
ಶಿಕ್ಷೆಗೆ ಗುರಿಯಾಗಿರುವವರನ್ನು ರಕ್ಷಿಸಿ ದೇಶಕ್ಕೆ ಕರೆತರುವ ನಿಟ್ಟಿನಲ್ಲಿ ವಿದೇಶಾಂಗ ಸಚಿವಾಲಯ ಕಾರ್ಯಪ್ರವೃತ್ತವಾಗಿದೆ ಎಂದು ಬಿಜೆಪಿ ವಕ್ತಾರ ಅಜಯ ಅಲೋಕ್ ಹೇಳಿದ್ದಾರೆ. ಕೇಂದ್ರ ಸರ್ಕಾರವು ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ತೀರ್ಪನ್ನು ಪ್ರಶ್ನಿಸಲಿದೆ ಎಂದಿದ್ದಾರೆ.
ಏನಿದು ಪ್ರಕರಣ?
ಭಾರತೀಯ ನೌಕಾಪಡೆಯ 8 ಮಂದಿ ನಿವೃತ್ತ ಅಧಿಕಾರಿಗಳು ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಆ್ಯಂಡ್ ಕನ್ಸಲ್ಟೆನ್ಸಿ ಸರ್ವಿಸಸ್ ಎಂಬ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಆ ಸಂಸ್ಥೆ ಕತಾರ್ನ ಸೇನೆಗೆ ತರಬೇತಿ ನೀಡುತ್ತಿತ್ತು. 2022ರ ಆ.30ರಂದು ಅವರನ್ನು ಗೂಢಚರ್ಯೆ ಆರೋಪದ ಮೇರೆಗೆ ಬಂಧಿಸಲಾಗಿತ್ತು. ಅವರ ವಿರುದ್ಧ ಇಸ್ರೇಲ್ ಪರ ಗೂಢಚರ್ಯೆ ನಡೆಸಲಾಗುತ್ತಿತ್ತು ಎಂದು ದೂರುಗಳಿವೆ. ಜಾಮೀನು ಕೋರಿ ಹಲವು ಬಾರಿ ಅರ್ಜಿ ಸಲ್ಲಿಸಲಾಗಿದ್ದರೂ ಅದು ತಿರಸ್ಕೃತಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ