ರಾಜ್ಯದ 75 ಸರಕಾರಿ ಶಾಲೆಗಳು “ನೇತಾಜಿ ಅಮೃತ ಶಾಲೆ’
Team Udayavani, Jan 26, 2022, 6:40 AM IST
ಬೆಂಗಳೂರು: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ವರ್ಷದ ಅಂಗವಾಗಿ ರಾಜ್ಯದ 75 ಸರಕಾರಿ ಶಾಲೆಗಳನ್ನು “ನೇತಾಜಿ ಅಮೃತ ಶಾಲೆ’ಗಳೆಂದು ಘೋಷಿಸಿ ಸರಕಾರ ಅಧಿಕೃತ ಆದೇಶ ಹೊರಡಿಸಿದೆ. ಪ್ರತಿ ಶಾಲೆಯಲ್ಲಿ ತಲಾ 100 ವಿದ್ಯಾರ್ಥಿಗಳಂತೆ ಒಟ್ಟು 7,500 ವಿದ್ಯಾರ್ಥಿಗಳಿಗೆ ಎನ್ಸಿಸಿ ತರಬೇತಿ ನೀಡಲಾಗುತ್ತದೆ.
ರಾಜ್ಯದಲ್ಲಿ ಪ್ರಸ್ತುತ 44 ಸಾವಿರ ಎನ್ಸಿಸಿ ಶಾಲೆಗಳು ಮತ್ತು 34 ಸಾವಿರ ಎನ್ಸಿಸಿ ಕಾಲೇಜುಗಳಿದ್ದು, ಒಟ್ಟಾರೆ 78 ಸಾವಿರ ಎನ್ಸಿಸಿ ಘಟಕಗಳಿವೆ. ಅದರ ಜತೆಗೆ ಜ. 23ರಂದು ರಾಜ್ಯದಲ್ಲಿ ಪ್ರತಿ ಜಿಲ್ಲೆಗೆ ಕನಿಷ್ಠ 2ರಂತೆ 75 ಶಾಲೆಗಳಲ್ಲಿ ಎನ್ಸಿಸಿ ಘಟಕಗಳನ್ನು ಸ್ಥಾಪಿಸಿ ಈ ಶಾಲೆಗಳನ್ನು ನೇತಾಜಿ ಅಮೃತ ಶಾಲೆಗಳನ್ನು ಘೋಷಿಸಿ ಇದಕ್ಕೆ ಸರಕಾರದ ವತಿಯಿಂದ ಆರ್ಥಿಕ ಸಹಾಯ ನೀಡಲು ನಿರ್ಧರಿಸಿದ್ದು, ಶಿಕ್ಷಣ ಇಲಾಖೆಯ ಮೂಲಕ ಅನುಷ್ಠಾನ ಮಾಡಲಾಗುತ್ತದೆ.
ಇದನ್ನೂ ಓದಿ:ನ್ಯಾಯಯುತವಾಗಿ ಮಹದಾಯಿ ನೀರು ನಮಗೆ ಸಿಗಬೇಕು: ಎಂ.ಬಿ ಪಾಟೀಲ್
9 ಕೋಟಿ ರೂ. ಅನುದಾನ
ಪ್ರತಿ ವಿದ್ಯಾರ್ಥಿಗೆ 12 ಸಾವಿರ ರೂ.ಗಳಂತೆ ತಗಲುವ 9 ಕೋಟಿ ರೂ. ಅನುದಾನವನ್ನು ಒದಗಿಸಲು ಸಹ ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಅಪರ ಕಾರ್ಯದರ್ಶಿ (ಆಡಳಿತ) ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದ್ಯಪಾನ ಮಾಡಿ ಚಾಲನೆ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ : ಶಾಸಕ ರಂಗನಾಥ್ ಸೂಚನೆ
ಜನತಾ ಜಲಧಾರೆ: ಜೆಪಿ ಭವನದಲ್ಲಿ ಬ್ರಹ್ಮಕಲಶ ಪ್ರತಿಷ್ಠಾಪನೆ
ಶಿಕ್ಷಣ ಸಂಸ್ಥೆಗಳ ಉನ್ನತೀಕರಣಕ್ಕೆ ಕೈಜೋಡಿಸಿ: ಆಕ್ಸಿಸ್ ಬ್ಯಾಂಕ್ ಗೆ ಸಿಎಂ ಬೊಮ್ಮಾಯಿ
ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಸಿ.ಟಿ.ರವಿ ನಕಾರ
ಕಳ್ಳತನದ ವೇಳೆ ಎಚ್ಚರಗೊಂಡ ಮಾಲೀಕ : ಓಡುವ ಭರದಲ್ಲಿ ಮನೆಯ ಮೇಲಿಂದ ಬಿದ್ದು ಸಾವನ್ನಪ್ಪಿದ ಕಳ್ಳ
MUST WATCH
ಹೊಸ ಸೇರ್ಪಡೆ
ದ್ವೇಷಪೂರಿತ ಭಾಷಣ: ಮಾಜಿ ಶಾಸಕ ಪಿ.ಸಿ.ಜಾರ್ಜ್ಗೆ ಜಾಮೀನು ರದ್ದು
ಮದ್ಯಪಾನ ಮಾಡಿ ಚಾಲನೆ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ : ಶಾಸಕ ರಂಗನಾಥ್ ಸೂಚನೆ
ದೈವಸ್ಥಾನದ ಹುಂಡಿಯಿಂದ ಹಣ ಕಳವಿಗೆ ಯತ್ನ; ಆರೋಪಿ ಪೊಲೀಸ್ ವಶಕ್ಕೆ
ಜನತಾ ಜಲಧಾರೆ: ಜೆಪಿ ಭವನದಲ್ಲಿ ಬ್ರಹ್ಮಕಲಶ ಪ್ರತಿಷ್ಠಾಪನೆ
ಶಿಕ್ಷಣ ಸಂಸ್ಥೆಗಳ ಉನ್ನತೀಕರಣಕ್ಕೆ ಕೈಜೋಡಿಸಿ: ಆಕ್ಸಿಸ್ ಬ್ಯಾಂಕ್ ಗೆ ಸಿಎಂ ಬೊಮ್ಮಾಯಿ