ಕರಾವಳಿಗೆ ಶೀಘ್ರ ಬರಲಿದೆ ಎನ್‌ಡಿಆರ್‌ಎಫ್‌

ಮಳೆಗಾಲದ ವಿಪತ್ತು ನಿರ್ವಹಣೆಗೆ ನಿಯೋಜನೆ

Team Udayavani, May 29, 2020, 5:45 AM IST

ಕರಾವಳಿಗೆ ಶೀಘ್ರ ಬರಲಿದೆ ಎನ್‌ಡಿಆರ್‌ಎಫ್‌

ಸಾಂದರ್ಭಿಕ ಚಿತ್ರ.

ಮಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿ ಮತ್ತು ಪ್ರಕೃತಿ ವಿಕೋಪವನ್ನು ಸಮರ್ಪಕವಾಗಿ ಎದುರಿಸಲು ಎನ್‌ಡಿಆರ್‌ಎಫ್‌ (ರಾಷ್ಟ್ರೀಯ ವಿಪತ್ತು ಪರಿಹಾರ ತಂಡ) ಬೆಟಾಲಿಯನ್‌ ನಿಯೋಜಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು, ಒಂದೆರಡು ದಿನದೊಳಗೆ ರಾಜ್ಯಕ್ಕೆ ತಂಡಗಳು ಆಗಮಿಸಲಿವೆ.

ಎನ್‌ಡಿಆರ್‌ಎಫ್‌ ದಕ್ಷಿಣ ವಲಯದ ಕಚೇರಿ ಆಂಧ್ರಪ್ರದೇಶದ ಗುಂಟೂರಿನಲ್ಲಿರುವುದರಿಂದ ತುರ್ತು ಸಂದರ್ಭಗಳಲ್ಲಿ ಅತಿವೃಷ್ಟಿ ಪ್ರದೇಶಗಳಿಗೆ ತಲುಪಲು ವಿಳಂಬವಾಗುವ ಕಾರಣ ಈ ವರ್ಷವೂ ಮುಂಚಿತವಾಗಿಯೇ ಎನ್‌ಡಿಆರ್‌ಎಫ್‌ ತರಿಸಿಕೊಳ್ಳಲು ರಾಜ್ಯ ಸರಕಾರ ನಿರ್ಧರಿಸಿದೆ. ಈಗಾಗಲೇ ಎನ್‌ಡಿಆರ್‌ಎಫ್‌ ಸಿದ್ಧಗೊಂಡಿದ್ದು, ಕೆಲವೇ ದಿನದೊಳಗೆ ನಿಯೋಜನೆಗೊಂಡ ಜಿಲ್ಲೆಗಳಿಗೆ ಆಗಮಿಸಲಿದೆ.

ರಾಜ್ಯ ಮುಖ್ಯ ಕಾರ್ಯದರ್ಶಿ ಆಂಧ್ರದ ಗುಂಟೂರು ಎನ್‌ಡಿಆರ್‌ಎಫ್‌ ಮುಖ್ಯಸ್ಥರಿಗೆ ಪತ್ರ ಬರೆದು ರಾಜ್ಯಕ್ಕೆ ಬೆಟಾಲಿಯನ್‌ ಕಳುಹಿಸಿಕೊಡುವಂತೆ ಆಗ್ರಹಿಸಿದ್ದು, ಈ ಹಿನ್ನೆಲೆಯಲ್ಲಿ 4 ತಂಡಗಳನ್ನು ಕಳುಹಿಸಿಕೊಡಲಾಗುತ್ತಿದೆ.

ಕರ್ನಾಟಕದಲ್ಲಿ ಕಳೆದೆರಡು ವರ್ಷಗಳಿಂದ ಮಹಾಮಳೆ, ಭೂ ಕುಸಿತ ದೊಡ್ಡ ಮಟ್ಟದಲ್ಲಿ ತೊಂದರೆ ಮಾಡಿದ್ದು, ಡ್ಯಾಂಗಳಲ್ಲಿ ನೆರೆ ಉಕ್ಕಿ ಹರಿದಿತ್ತು. ಐಎಂಡಿ (ಇಂಡಿಯನ್‌ ಮೆಟ್ರೋಲಾಜಿಕಲ್‌ ಡಿಪಾರ್ಟ್‌ ಮೆಂಟ್‌) ಈಗಾಗಲೇ ಈ ವರ್ಷದ ಮುಂಗಾರುವಿನ ಸ್ಥಿತಿಗತಿ ಬಗ್ಗೆ ಹೇಳಿದ್ದು, ಅದರಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ವರದಿ ನೀಡಿತ್ತು. ನೆರೆಯಿಂದ ಜನರಿಗೆ ತೊಂದರೆ ಯಾಗದಂತೆ ರಾಜ್ಯ ಸರಕಾರ ಎನ್‌ಡಿಆರ್‌ಎಫ್‌ ನಿಯೋಜಿಸಿದೆ.

ದ.ಕ.-ಉಡುಪಿಗೆ 1 ಬೆಟಾಲಿಯನ್‌
ಕಳೆದೆರಡು ವರ್ಷಗಳಲ್ಲಿ ನಡೆದ ದುರಂತಗಳನ್ನು ಆಧರಿಸಿ ದಕ್ಷಿಣ ಕನ್ನಡ, ಕೊಡಗು, ಬೆಳಗಾವಿ, ಧಾರವಾಡ ಜಿಲ್ಲೆಗಳನ್ನು 4 ಕೇಂದ್ರಗಳಾಗಿಸಿ ಎನ್‌ಡಿಆರ್‌ಎಫ್‌ ಬೆಟಾಲಿಯನ್‌ ನಿಯೋಜಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಟಾಲಿಯನ್‌ ಉಡುಪಿ ಮತ್ತು ಉತ್ತರ ಕನ್ನಡದ ಮೇಲೂ ನಿಗಾ ಇರಿಸಿದರೆ, ಕೊಡಗಿನ ಬೆಟಾಲಿಯನ್‌ ಮೈಸೂರು, ಹಾಸನ ಮತ್ತು ಮಲೆನಾಡಿನ ಇತರ ಜಿಲ್ಲೆಗಳು, ಬೆಳಗಾವಿಯ ಬೆಟಾಲಿಯನ್‌ ಬಾಗಲಕೋಟೆ, ವಿಜಯಪುರ ಮತ್ತು ಪಕ್ಕದ ಜಿಲ್ಲೆಗಳು, ಧಾರವಾಡ ಬೆಟಾಲಿಯನ್‌ ಗದಗ, ಹಾವೇರಿ ಮತ್ತು ಪಕ್ಕದ ಜಿಲ್ಲೆಗಳ ಮೇಲೆ ನಿಗಾ ಇಡಲಿವೆ.

 ಸುರಕ್ಷತೆಗೆ ಆದ್ಯತೆ
ಮಳೆಗಾಲಕ್ಕೆ ಮೊದಲೇ ದಕ್ಷಿಣ ಕನ್ನಡ ಜಿಲ್ಲೆಗೆ ಎನ್‌ಡಿಆರ್‌ಎಫ್‌ ಆಗಮನದ ಬಗ್ಗೆ ಮಾಹಿತಿ ಬಂದಿದೆ. ಒಂದೆರಡು ದಿನದಲ್ಲಿ ಈ ತಂಡ ಮಂಗಳೂರಿಗೆ ಆಗಮಿಸಲಿದೆ. ಭಾರೀ ಮಳೆಯ ಸಂದರ್ಭದಲ್ಲಿ ಈ ತಂಡ ವಿಶೇಷ ಕಾರ್ಯ ನಡೆಸಲಿದೆ. ಯಾವುದೇ ಅನಾಹುತ ಸಂಭವಿಸಿದರೂ ಜನರ ಸುರಕ್ಷತೆಗೆ ಈ ತಂಡ ಆದ್ಯತೆ ನೀಡಲಿದೆ.
 -ಸಿಂಧೂ ಬಿ.ರೂಪೇಶ್‌
ಜಿಲ್ಲಾಧಿಕಾರಿ, ದ.ಕ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.