Hunsur: ಭೂಮಿ ಕಳೆದುಕೊಳ್ಳುವ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹ
ರೈತರ ಬೇಡಿಕೆ ಒಪ್ಪದಿದ್ದಲ್ಲಿ ಹೋರಾಟ ಅನಿವಾರ್ಯ: ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ
Team Udayavani, Jun 19, 2023, 9:02 AM IST
ಹುಣಸೂರು: ರಾಷ್ಟ್ರೀಯ ಹೆದ್ದಾರಿ-275ಕ್ಕೆ ಭೂ ಸ್ವಾಧೀನಪಡಿಸಿಕೊಳ್ಳುವ ಮೊದಲು ಸೂಕ್ತ ಬೆಲೆ ನಿಗದಿ ಮಾಡುವವರೆಗೂ ರಸ್ತೆ ಮಾಡಲು ಬಿಡುವುದಿಲ್ಲ, ಮತ್ತು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲು ಹಾಗೂ ಅನಿವಾರ್ಯವಾದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು.
ತಾಲೂಕಿನ ತೆಂಕಲಕೊಪ್ಪಲಿನ ಸಮುದಾಯ ಭವನದಲ್ಲಿ ಜೂ.18ರ ಭಾನುವಾರ ರೈತ ಸಂಘದ ರಾಜ್ಯದ್ಯಕ್ಷ ಬಡಕಲಪುರ ನಾಗೇಂದ್ರರ ಅಧ್ಯಕ್ಷತೆಯಲ್ಲಿ ಕೃಷಿಕರ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ಹೊಸದಾಗಿ ನಿರ್ಮಿಸಲುದ್ದೇಶಿಸಿರುವ ಶ್ರೀರಂಗಪಟ್ಟಣ-ಕುಶಾಲನಗರ ರಾಷ್ಟ್ರೀಯ 275 ರ ರಸ್ತೆಗೆ ಭೂಮಿ ಕಳೆದುಕೊಳ್ಳುತ್ತಿರುವ ರೈತರ ಪರವಾಗಿ ಭೂಮಿ ಹೋರಾಟ ಸಮಿತಿ ಅಧ್ಯಕ್ಷ ಅವಿನಾಶ್ ಮತ್ತಿತರರು ಮಾತನಾಡಿ ಮೈಸೂರು ತಾಲೂಕಿನ ರೈತರ ಜಮೀನಿಗೆ 1.20 ಕೋಟಿ ನಿಗದಿಗೊಳಿಸಿದ್ದಾರೆ.
ಹುಣಸೂರು ತಾಲೂಕಿನ ತೆಂಕಲಕೊಪ್ಪಲು, ರಾಮೇನಹಳ್ಳಿ ಭಾಗದ ರೈತರಿಗೆ 9-12 ಲಕ್ಷ ನಿಗದಿಗೊಳಿಸಿದ್ದರೆ, ಕಿರಿಜಾಜಿಯಲ್ಲಿ 40 ಲಕ್ಷ ನಿಗದಿಪಡಿಸಿದ್ದಾರೆ. ಇದು ರೈತರಿಗೆ ಹೆದ್ದಾರಿ ಪ್ರಾಧಿಕಾರ ಮಾಡುತ್ತಿರುವ ಅನ್ಯಾಯ. ಸರಕಾರ, ಪ್ರಾಧಿಕಾರ ಕೃಷಿಕರ ಭೂಮಿಯ ಮಾರುಕಟ್ಟೆ ದರ ನಿಗದಿಪಡಿಸಬೇಕು. ವಶಪಡಿಸಿಕೊಳ್ಳುವ ಎಲ್ಲ ಭೂ ಒಡೆಯರಿಗೂ ಎಕರೆಗೆ ಕನಿಷ್ಟ ಒಂದು ಕೋಟಿ ರೂ. ನಿಗದಿಪಡಿಸಬೇಕು. ಇಲ್ಲದಿದ್ದಲ್ಲಿ ಹೋರಾಟ ಅನಿವಾರ್ಯವಾದೀತೆಂದರು.
ಕೃಷಿಕರಿಂದ ಮಾಹಿತಿ ಪಡೆದ ನಂತರ ಮಾತನಾಡಿದ ರಾಜ್ಯಾಧ್ಯಕ್ಷ ಬಡಗಲ ಪುರನಾಗೇಂದ್ರರವರು ರೈತರ ಹೋರಾಟಕ್ಕೆ ಸಂಘ ಬೆನ್ನೆಲುಬಾಗಿ ನಿಲ್ಲಲಿದೆ. ಇತ್ತೀಚೆಗೆ ಜಿಲ್ಲಾಧಿಕಾರಿಯವರನ್ನು ಸಂಘವು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಅಲ್ಲದೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪರನ್ನು ಜಲದರ್ಶಿನಿಯಲ್ಲಿ ಭೇಟಿ ಮಾಡಿ ಮನವರಿಕೆ ಮಾಡಿಕೊಡಲಾಗಿದೆ. ರೈತ ಮುಖಂಡರ ಸಭೆ ನಡೆಸಿ ಕ್ರಮವಹಿಸಲಾಗುವುದೆಂದು ಭರವಸೆ ನೀಡಿದ್ದಾರೆಂದು ಮಾಹಿತಿ ನೀಡಿದರು.
ಜಿಲ್ಲಾಧ್ಯಕ್ಷ ಹೊಸೂರುಕುಮಾರ್ ಮಾತನಾಡಿ, ಒಂದು ಬಾರಿ ರೈತರು ಭೂಮಿ ಕಳೆದುಕೊಂಡಲ್ಲಿ ಮತ್ತೆ ಸಂಪಾದನೆ ಕಷ್ಟಸಾಧ್ಯವಾಗಿದ್ದು, ಭೂಮಿಗೆ ಏಕರೂಪ ದರ ನಿಗದಿಪಡಿಸಬೇಕು. ಇಲ್ಲವೇ ಯಾವುದೇ ಕಾರಣಕ್ಕೂ ಜಿಲ್ಲೆಯ ರೈತರು ಹೆದ್ದಾರಿ ನಿರ್ಮಾಣಕ್ಕೆ ಜಿಲ್ಲೆಯ ಸಹಕಾರ ನೀಡುವುದಿಲ್ಲ, ಈಗಾಗಲೇ ಹೆದ್ದಾರಿ ಭೂಮಿ ವಶಪಡಿಸಿಕೊಳ್ಳುವುದರ ವಿರುದ್ದ ಯಾವುದೇ ಹೋರಾಟ, ನ್ಯಾಯಾಲಯ ಮೆಟ್ಟಿಲೇರಲೂ ಸಹ ಸಂಘ ತೀರ್ಮಾನಿಸಿದೆ ಎಂದು ಸ್ಪಷ್ಟಪಡಿಸಿದರು.
ಸಭೆಯಲ್ಲಿ ತಾಲೂಕು ಅಧ್ಯಕ್ಷ ಬೆಂಕಿಪುರಚಿಕ್ಕಣ್ಣ, ಪ್ರಧಾನ ಕಾರ್ಯದರ್ಶಿ ರಾಮೇಗೌಡ, ಬೆಟ್ಟದೂರು ಮಂಜು, ನಾಗಣ್ಣ, ವೆಂಕಟೇಶ್, ವಿಷಕಂಠಪ್ಪ, ಗುಂಜೇಗೌಡ ಸೇರಿದಂತೆ 200 ಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ